Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ

Bengaluru City

ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ

Public TV
Last updated: May 29, 2025 6:19 pm
Public TV
Share
3 Min Read
Kamal Haasan Karave Protest Film Chamber
SHARE

ತಮಿಳು ನಟ ಕಮಲ್ ಹಾಸನ್ (Kamal Haasan) ವಿವಾದಾತ್ಮಕ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಆದರೆ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು ಕಮಲ್ ಹಾಸನ್ ಉದ್ಧಟತನ ತೋರಿದ್ದಾರೆ. ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದಿದ್ದಾರೆ. ಇತ್ತ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ನಟ ಕಮಲ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆಯೊಡೆದಿದೆ. ಕರವೇ (Karnataka Rakshana Vedike) ಬಣ, ಕನ್ನಡ ಸಂಘಟನೆಗಳು ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂಭಾಗ ಪ್ರತಿಭಟನೆ ನಡೆಸಿತು. ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

ಕಮಲ್ ಚಿತ್ರ ರಾಜ್ಯದಲ್ಲಿ ಬಿಡುಗಡೆ ಸಂಬಂಧ ಫಿಲಂ ಚೇಂಬರ್‌ನಲ್ಲಿ (Film Chamber) ಸಭೆ ನಡೆಯುತ್ತಿದ್ದ ವೇಳೆಯೇ ಫಿಲಂ ಚೇಂಬರ್‌ಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿದರು. ಕರವೇ ನಾರಾಯಣಗೌಡರ ಬಣ ಮುತ್ತಿಗೆ ಹಾಕಿ ಕಮಲ್ ಕ್ಷಮೆ ಕೇಳೋವರೆಗೂ ಚಿತ್ರ ಬಿಡುಗಡೆ ಮಾಡದಂತೆ ಆಗ್ರಹಿಸಿದರು. ಫಿಲಂ ಚೇಂಬರ್ ಒಳಗೆ ನುಗ್ಗಿ ಅಧ್ಯಕ್ಷರ ಮುಂದೆ ಕೂತು ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ರಿಲೀಸ್ ಆಗಲು ಬಿಡಲ್ಲ. ಸಿನಿಮಾ ಬಿಡುಗಡೆ ಮಾಡುತ್ತಿರುವ ಡಿಸ್ಟ್ರಿಬ್ಯೂಟರ್ ಅವರಿಗೆ ವಾರ್ನಿಂಗ್ ಕೊಡುತ್ತೇವೆ, ಫಿಲಂ ಚೇಂಬರ್ ಚಿತ್ರ ರಿಲೀಸ್ ಆಗೋಕೆ ಬಿಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್

ಇನ್ನು ಕನ್ನಡದ ಬಗ್ಗೆ ಕಮಲ್ ಹಾಸನ್ ಅವಿವೇಕದ ಮಾತಾಡಿದ್ದಾರೆ. ಅವರ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗಬಾರದು. ಕರ್ನಾಟಕದ ಅನ್ನ ತಿಂದ ಕನ್ನಡ ನಟರು ಇದರ ಬಗ್ಗೆ ಧ್ವನಿಯೆತ್ತಬೇಕು. ಕಮಲ್ ಹಾಸನ್ ವಿರುದ್ಧ ಕನ್ನಡ ನಟ-ನಟಿಯರು ಯಾಕೆ ಧ್ವನಿ ಎತ್ತಿಲ್ಲ ಎಂದು ಕರವೇ ಶಿವರಾಮೇಗೌಡ ಪ್ರಶ್ನಿಸಿದರು. ಇದನ್ನೂ ಓದಿ: ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್

ಕಮಲ್ ಹಾಸನ್‌ಗೆ ಮತ್ತೆ ಡೆಡ್‌ಲೈನ್:
ಫಿಲಂ ಚೇಂಬರ್‌ನಲ್ಲಿ ಸಭೆ ಬಳಿಕ ಮಾತಾಡಿದ ಕನ್ನಡ ಹೋರಾಟಗಾರ, ಕರ್ನಾಟಕ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕಮಲ ಹಾಸನ್‌ಗೆ ಮತ್ತೆ ಡೆಡ್‌ಲೈನ್ ಕೊಟ್ಟಿದ್ದಾರೆ. ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇಂದು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ. ಕ್ಷಮಾಪಣೆ ಅಂತಾ ಪದ ಬರದಿದ್ದರೆ ಸಿನಿಮಾ ರಿಲೀಸ್ ಮಾಡೋಕೆ ಬಿಡಲ್ಲ ಎಂದು ಗುಡುಗಿದರು. ಇನ್ನು ಡಿಸ್ಟ್ರಿಬ್ಯೂಟರ್ ವೆಂಕಟೇಶ್ ಮಾತನಾಡಿ, ಕನ್ನಡ ಹಾಗೂ ಬ್ಯುಸಿನೆಸ್ ಎರಡೂ ನನಗೆ ಇಂಪಾರ್ಟೆಂಟ್. ಫಿಲಂ ಚೇಂಬರ್ ಸಭೆಯಲ್ಲಿ ಏನೇನು ಆಯ್ತು ಎಲ್ಲವನ್ನು ಕಮಲ್‌ಗೆ ಹೇಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ನಟ ಕಮಲ್ ಹಾಸನ್ ವಿವಾದದ ಬಗ್ಗೆ ನಟ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿ ಇದೆ. ನಟ ಕಮಲ್ ಹಾಸನ್‌ಗೆ ಇದೆಲ್ಲ ಗೊತ್ತಾಗುತ್ತೆ. ಕಮಲ್ ಅವರೇ ಅದನ್ನ ಸರಿ ಮಾಡಿಕೊಳ್ಳುತ್ತಾರೆ. ಬರೀ ಬಾಯಿ ಮಾತಲ್ಲಿ ಮಾತ್ರ ಕನ್ನಡ ಎನ್ನಬಾರದು. ಕನ್ನಡಕ್ಕಾಗಿ ಸಾಯುತ್ತೀವಿ, ಹೋರಾಟ ಮಾಡ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ

ಇನ್ನು ಕಮಲ ಹಾಸನ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟಿ ಜಯಮಾಲಾ, ಕಮಲ್ ಹಾಸನ್‌ಗೆ ಅವರ ತಪ್ಪು ಮನವರಿಕೆ ಮಾಡಬೇಕು. ಅವರು ತಿಳಿದು ಹೇಳಿದ್ರೋ, ತಿಳಿಯದೇ ಹೇಳಿದ್ರೋ ಗೊತ್ತಿಲ್ಲ. ಒಂದಂತೂ ಸತ್ಯ. ತಮಿಳಿನಿಂದ ಕನ್ನಡ ಹುಟ್ಟಿಲ್ಲ. ಅವರು ಕ್ಷಮೆ ಕೇಳಬೇಕು. ಇನ್ನು ಕಮಲ್ ಹೀಗೆಲ್ಲಾ ಮಾತನಾಡುವಾಗ ಶಿವಣ್ಣ ಸುಮ್ಮನಿದ್ದರು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿವಣ್ಣ ಅವರಿಗೆ ಅವತ್ತು ಗೊತ್ತಾಗಿಲ್ಲ. ಆರೋಗ್ಯ ದೃಷ್ಟಿಯಿಂದ ಸ್ವಲ್ಪ ಕುಗ್ಗಿದ್ದಾರೆ. ಹೀಗಾಗಿ ಗೊತ್ತಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ ಎಂದ ನಟ

ಇತ್ತ ನಟ ಕಮಲ್ ಹಾಸನ್ ಚಲನಚಿತ್ರಗಳನ್ನ ಕರ್ನಾಟಕದಲ್ಲಿ ನಿರ್ಬಂಧಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಫಿಲಂ ಚೇಂಬರ್‌ಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

TAGGED:Film ChamberKamal HaasankannadaKarnataka Film Boardtamilಕನ್ನಡಕಮಲ್ ಹಾಸನ್ಕರ್ನಾಟಕ ಚಲನಚಿತ್ರ ಮಂಡಳಿತಮಿಳು
Share This Article
Facebook Whatsapp Whatsapp Telegram

Cinema news

Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories

You Might Also Like

Kogilu Layout Demolition
Bengaluru City

ಮುಂಗಡ ಹಣ ಪಾವತಿಸಿದವರಿಗೆ ಇಲ್ಲ, ಅಕ್ರಮ ಜಾಗದಲ್ಲಿ ನೆಲೆಸಿದವರಿಗೆ ಫಟಾಫಟ್‌ ಮನೆ!

Public TV
By Public TV
20 minutes ago
Visuals Of Satish Reddy Gunman Firing Towards Janardhan Reddy House In Ballari
Bellary

ಜನಾರ್ದನ ರೆಡ್ಡಿ ನಿವಾಸದ ಕಡೆ ಗುಂಡಿನ ದಾಳಿ ನಡೆಸಿದ ಸತೀಶ್ ರೆಡ್ಡಿ ಗನ್ ಮ್ಯಾನ್‌ – ಕ್ಯಾಮೆರಾದಲ್ಲಿ ದೃಶ್ಯ ಸೆರೆ

Public TV
By Public TV
43 minutes ago
EVM
Bengaluru City

EVM ನಿಖರ ಫಲಿತಾಂಶ ಕೊಡುತ್ತೆ – ಕಾಂಗ್ರೆಸ್‌ಗೆ ಭಾರೀ ಮುಜುಗರ ತರಿಸುವ ಸಮೀಕ್ಷೆ ರಾಜ್ಯದಿಂದಲೇ ಪ್ರಕಟ

Public TV
By Public TV
1 hour ago
Resort
Crime

ರೆಸಾರ್ಟ್​​ ಮಾಲೀಕರ ಕಾರು ಚಾಲಕನ ಮೇಲೆ ಹಲ್ಲೆ – ಮೊಬೈಲ್, ಹಣ ದೋಚಿ‌ದ ಕಿಡಿಗೇಡಿಗಳು

Public TV
By Public TV
2 hours ago
Himachal College Student Dies Of Sexual Assault 4 Including Professor Charged
Crime

ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!

Public TV
By Public TV
2 hours ago
Zameer Ahmed Khan
Bellary

Ballari Firing Case | ತನಿಖೆ ನಡೆಯುತ್ತಿದೆ, ಯಾರನ್ನೂ ಬಿಡಲ್ಲ – ಸಚಿವ ಜಮೀರ್ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?