Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

Districts

ಗಣೇಶ ಮೂರ್ತಿಗಳಿಗೆ ಬೇಡಿಕೆ ಕುಸಿತ- ಸಂಕಷ್ಟದಲ್ಲಿ ಕಲಾಕಾರರು

Public TV
Last updated: September 2, 2021 8:09 pm
Public TV
Share
3 Min Read
ganesha 1
SHARE

– ಆರ್ಥಿಕ ನೆರವು ನೀಡುವಂತೆ ಮನವಿ

ಕಾರವಾರ: ಗಣೇಶ ಹಬ್ಬ ಹತ್ತಿರ ಬರುತ್ತಿದ್ದು, ಕೊರೊನಾ ಕಾರಣದಿಂದ ಗಣೇಶನ ಮೂರ್ತಿಯನ್ನು ಖರೀದಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಮೂರ್ತಿಯನ್ನು ತಯಾರು ಮಾಡುವವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

Contents
  • – ಆರ್ಥಿಕ ನೆರವು ನೀಡುವಂತೆ ಮನವಿ
  • ಈ ಬಾರಿ ಬೇಡಿಕೆಯಲ್ಲಿ ಇಳಿಮುಖ: 

GANESHA 3

ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಎಲ್ಲಾ ಉದ್ಯಮಗಳ ಮೇಲೆ ಆರ್ಥಿಕ ಬಿಕ್ಕಟ್ಟನ್ನು ತಂದೊಡ್ಡಿದೆ. ಇದೀಗ ವಿಘ್ನ ನಿವಾರಕ ಗಣಪತಿ ಮೂರ್ತಿ ಕೆಲಸಗಾರರಿಗೂ ಸಂಕಷ್ಟ ಎದುರಾಗಿದ್ದು, ಈ ಬಾರಿ ಗಣಪತಿ ಮೂರ್ತಿಗಳಿಗೆ ಬೇಡಿಕೆ ಕುಸಿದಿದೆ. ಇದನ್ನೂ ಓದಿ:ತಂದೆ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

ಗೊಂದಲದಲ್ಲಿ ಸರ್ಕಾರ: ಕೊರೊನಾ ಮೂರನೇ ಅಲೆಯಿಂದಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಯಾವ ರೀತಿ ಅನುಮತಿ ನೀಡಬೇಕು ಎಂಬ ಗೊಂದಲದಲ್ಲಿದೆ. ಸೆ.5ರಂದು ಈ ಕುರಿತು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತೀರ್ಮಾನ ಸಹ ಕೈಗೊಳ್ಳಲಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಾಗಿದ್ದು, ಸಾರ್ವಜನಿಕ ಉತ್ಸವ ನಡೆಸಲು ಅನುಮತಿ ನಿರಾಕರಿಸಲಾಗುತ್ತಿದೆ.

GANESH 01

ಈ ಬಾರಿ ಬೇಡಿಕೆಯಲ್ಲಿ ಇಳಿಮುಖ: 

ಮಣ್ಣಿನಿಂದ ಗಣಪತಿ ಮೂರ್ತಿ ತಯಾರಿಕೆಯ ಬೇಡಿಕೆ ಇಳಿಯುತ್ತಿದ್ದು, ಇದರ ಪರಿಣಾಮ ಮೂರ್ತಿ ತಯಾರಕರ ಮೇಲೆ ಆಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೀಗ ಚತುರ್ಥಿಗೆ ಇರುತಿದ್ದ ಮೂರ್ತಿಗಳ ಬೇಡಿಕೆ ದೊಡ್ಡ ಮಟ್ಟದಲ್ಲಿ ಇಳಿದಿದೆ. ಕಾರವಾರ ತಾಲೂಕಿನಲ್ಲೇ 50ಕ್ಕೂ ಹೆಚ್ಚು ಗಣಪತಿ ಮೂರ್ತಿ ತಯಾರಕರಿದ್ದಾರೆ. ಜಿಲ್ಲೆಯಲ್ಲಿ ಇದರ ಸಂಖ್ಯೆ ಸಾವಿರ ದಾಟುತ್ತದೆ. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮೂರು ತಲೆಮಾರಿನಿಂದ ಗಣಪತಿ ತಯಾರಿಸುತ್ತಿರುವ ವಿನಾಯಕ್ ಬಾಂದೇಕರ್, ಈ ಬಾರಿಯ ಕೊರೊನಾದಿಂದ ಸಂಘ ಸಂಸ್ಥೆಗಳು ಮೂರ್ತಿ ತಯಾರು ಮಾಡಲು ಆರ್ಡರ್ ನೀಡುತ್ತಿದ್ದರು. ಇನ್ನೂ ಅಂಗಡಿಯಲ್ಲಿ ಮಾರಾಟ ಮಾಡುವವರು ಸಹ ಮೂರ್ತಿ ತಯಾರಿಕೆಗೆ ಈ ಬಾರಿ ಕಡಿಮೆ ಸಂಖ್ಯೆಯ ಆರ್ಡರ್ ನೀಡಿದ್ದಾರೆ. ಜನರಿಂದಲೂ ಕೂಡ ಆರ್ಡರ್ ಬರುವುದು ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

GANESHA2

ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗೆ ನಿರ್ಬಂಧವಾಗಿದ್ದು, ಈ ಮಳೆಯ ಹಾನಿಯಿಂದ ಕುಂಬಾರಮಣ್ಣಿನ ಬೇಡಿಕೆ ಇದ್ದರೂ ತಯಾರಿಕೆಗೆ ಬೇಕಾದ ಮಣ್ಣು ಸಿಗುತ್ತಿಲ್ಲ. ಹೀಗಾಗಿ ದುಪ್ಪಟ್ಟು ಹಣ ನೀಡಿ ಮಣ್ಣನ್ನು ಖರೀದಿಸಬೇಕಿದ್ದು, ನಾವು ಮಾಡಿದ ಕೆಲಸಕ್ಕೆ ಸೂಕ್ತ ಹಣ ದೊರಕದೇ ಇತ್ತ ಕೆಲಸವನ್ನು ಸಹ ಬಿಡಲಾಗದ ಸ್ಥಿತಿಗೆ ಕಲಾವಿದರು ಸಿಲುಕಿದ್ದಾರೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ಈ ಹಿಂದೆ ಒಂದು ಚಿಕ್ಕ ಗಣಪತಿಗೆ ಮೂರ್ತಿಗೆ 1,000 ರೂ. ದಿಂದ ಆಕೃತಿಗೆ ಅನುಸಾರವಾಗಿ 5,000 ರೂ ಇರುತಿತ್ತು. ಇನ್ನು ದೊಡ್ಡ ಗಣಪತಿಗೆ ಐವತ್ತು ಸಾವಿರದಿಂದ ಎರಡು ಲಕ್ಷ ರೂ. ವರೆಗೆ ಆಕಾರದ ಮೇಲೆ ದರ ನಿಗದಿಯಾಗುತಿತ್ತು. ಆದರೇ ಇದೀಗ ದರವು ಅರ್ಧದಷ್ಟು ಇಳಿದಿದೆ. ಜೊತೆಗೆ ಬೇಡಿಕೆಯು ಸಹ ಇಳಿದಿದೆ.

ಆರ್ಥಿಕ ಬೆಂಬಲ ನೀಡಬೇಕು: ಜಿಲ್ಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಟಾಪನೆ ಅಭಿಯಾನ ಸಹ ನಡೆಯುತ್ತಿದೆ. ಹೀಗಾಗಿ ಜನರು ಖರ್ಚು ರಹಿತ ಹಾಗೂ ಪರಿಸರ ಸ್ನೇಹಿ ಗಣಪತಿಯತ್ತ ಮುಖ ಮಾಡಿದ್ದಾರೆ. ಕೇವಲ ಮೂರು ತಿಂಗಳುಗಳ ವ್ಯವಹಾರ ನಡೆಸುವ ಕಲಾವಿದರಿಗೆ ಇದೇ ಆರ್ಥಿಕ ಮೂಲ ಕೂಡ. ಹೀಗಾಗಿ ಕಾರ್ಮಿಕರಿಗೆ ನೀಡಿದಂತೆ ರಾಜ್ಯ ಸರ್ಕಾರ ಈ ವೃತ್ತಿಯವರಿಗೆ ಆರ್ಥಿಕ ಬೆಂಬಲ ನೀಡಬೇಕು ಎಂಬುದು ಕಲಾಕಾರರ ಬೇಡಿಕೆಯಾಗಿದೆ. ಇದನ್ನೂ ಓದಿ:ತಾಲಿಬಾನ್ ಸರ್ಕಾರ ರಚನೆಗೆ ಸಂತೋಷ ವ್ಯಕ್ತಪಡಿಸೋದು ಅನಾಗರೀಕತೆ: ನಾಸಿರುದ್ದೀನ್ ಶಾ

ಕೊರೊನಾ ಮೂರನೇ ಅಲೆಯಿಂದಾಗಿ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸುವ ಕುರಿತು ಸೂಕ್ತ ನಿರ್ಧಾರಕ್ಕೆ ಬಾರದೇ ವಿಘ್ನ ನಿವಾರಕ ಗಣಪತಿಗೂ ವಿಘ್ನ ತಂದೊಡ್ಡಿದೆ. ಇದರ ಜೊತೆಗೆ ಕುಂಬಾರು ಮಣ್ಣಿನ ಗಣಪತಿ ತಯಾರಿಕೆಯನ್ನು ನಂಬಿದ ಕಲಾವಿದರಿಗೂ ಸಹ ಆರ್ಥಿಕವಾಗಿ ತೊಂದರೆಗೆ ಸಿಲುಕಿದ್ದಾರೆ.

TAGGED:Artistseco-friendly GanapathiganeshakarwarPublic TVಕಲಾವಿದರುಕಾರವಾರಗಣೇಶಪಬ್ಲಿಕ್ ಟಿವಿಪರಿಸರ ಸ್ನೇಹಿ ಗಣಪತಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
36 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
45 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
1 hour ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?