ನವದೆಹಲಿ: ಬಾಬರಿ ಮಸೀದಿ ಕೆಡವಿದ್ದು ಕಾನೂನಿನ ಉಲ್ಲಂಘನೆ ಅಲ್ಲದೇ ಮತ್ತೇನು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನೆ ಮಾಡಿದ್ದಾರೆ.
ಸಮಾವೇಶದಲ್ಲಿ ಮಾತನಾಡಿರುವ ಓವೈಸಿ, ಬಾಬರಿ ಮಸೀದಿಯ ಕೀಲಿ ತೆಗೆಯುವಾಗ ಕೇಂದ್ರದಲ್ಲಿ ಕಾಂಗ್ರೆಸ್ ಇತ್ತು. ಅಂದಿನ ಗೃಹ ಸಚಿವರು ಯಾರಿದ್ದರು ಎಂಬುದನ್ನು ನೀವು ನೆನಪು ಮಾಡಿಕೊಳ್ಳಬೇಕಿದೆ. ತೀರ್ಪು ಏನು ಬರುತ್ತೆ ಎಂಬುವುದು ನನಗೂ ಗೊತ್ತಿಲ್ಲ. ಆದರೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನಿಂದ ಕಾನೂನಿನ ಕೈಗೆ ಮತ್ತಷ್ಟು ಶಕ್ತಿ ಬರಲಿ ಎಂಬುವುದು ನನ್ನ ಆಶಯ. ಬಾಬರಿ ಮಸೀದಿಯನ್ನು ಕೆಡವಿದ್ದು ಕಾನೂನಿನ ಉಲ್ಲಂಘನೆಯಾಗಿದ್ದು ನಿಜ. ತೀರ್ಪು ಏನು ಬರುತ್ತೋ ಗೊತ್ತಿಲ್ಲ. ನ್ಯಾಯಾಲಯದಲ್ಲಿ ತೀರ್ಪು ಎಲ್ಲರಿಗೂ ಶುಭ ಸುದ್ದಿ ನೀಡಲೆಂದು ಅಲ್ಲಾಹನಲ್ಲಿ ಪ್ರಾರ್ಥಿಸಿ ಎಂದು ಹೇಳಿದ್ದಾರೆ.
Demolition of Babri Masjid was a violation of the Rule of Law.
मुझे नहीं पता क्या फैसला आएगा, लेकिन मैं चाहता हूं फैसला ऐसा आए जिससे कानून के हाथ मजबूत हों। बाबरी मस्जिद को गिराया जाना कानून का मजाक था। @asadowaisi pic.twitter.com/u9sa3Z0ShD
— AIMIM (@aimim_national) October 18, 2019
ದೇಶದ ರಾಜಕೀಯ ದಿಕ್ಕನ್ನೇ ಬದಲಿಸಿದ ದೇಶದ ಹೈಪ್ರೊಫೈಲ್ ಕೇಸ್ ಅಯೋಧ್ಯೆಯ ಬಾಬರಿ-ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಅಂತಿಮ ಘಟ್ಟ ತಲುಪಿದೆ. ಆಗಸ್ಟ್ ಆರರಿಂದ ಸಿಜೆಐ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ 40 ದಿನಗಳ ಕಾಲ ವಾದ ಪ್ರತಿವಾದ ಮುಕ್ತಾಯವಾಗಿದೆ. ನವೆಂಬರ್ 17ರಂದು ಮುಖ್ಯನ್ಯಾಯಮೂರ್ತಿ ರಂಜನ್ ಗೋಗಯ್ ನಿವೃತ್ತಿ ಆಗುತ್ತಿದ್ದು, ಅಷ್ಟರೊಳಗೆ ಅಂತಿಮ ತೀರ್ಪು ಹೊರಬೀಳುವ ನಿರೀಕ್ಷೆಗಳಿವೆ.