Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೇವಸ್ಥಾನ ಕೆಡವಿರುವುದನ್ನು ವಿಶ್ವ ಹಿಂದೂ ಪರಿಷತ್ ವಿರೋಧಿಸಿ ಸರ್ಕಾರಕ್ಕೆ ಎಚ್ಚರಿಕೆ

Public TV
Last updated: September 16, 2021 9:37 pm
Public TV
Share
2 Min Read
VISHWA HINDU PARISHATH
SHARE

ಬೆಂಗಳೂರು: ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಸಲ್ಲಿಸಿ, ಈ ರೀತಿಯ ಘಟನೆ ಮರುಕಳಿಸದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

VISHWAHINDU PARISHATH

ಪತ್ರದಲ್ಲಿ ಏನಿದೆ?
ಗೌರವಾನ್ವಿತ ಸುಪ್ರೀಂಕೋರ್ಟ್ 2009ರ ಸೆಪ್ಟೆಂಬರ್ 29ರಂದು ಹೊರಡಿಸಿರುವ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ ಇತ್ಯಾದಿಗಳನ್ನು ಸಕ್ರಮಗೊಳಿಸುವ, ಸ್ಥಳಾಂತರಿಸುವ, ಅನಿವಾರ್ಯವಿದ್ದಾಗ ಮಾತ್ರ ತೆರವುಗೊಳಿಸುವ ಆದೇಶವನ್ನು ವಿಶ್ವಹಿಂದು ಪರಿಷತ್ ಗೌರವಿಸುತ್ತದೆ. ಆದರೆ ಗೌರವಾನ್ವಿತ ಸುಪ್ರೀಂ ಕೋರ್ಟಿನ ಆದೇಶವನ್ನು ಪಾಲಿಸುವಾಗ ರಾಜ್ಯ ಸರ್ಕಾರವು ಪ್ರತಿಯೊಂದು ಶ್ರದ್ಧಾಕೇಂದ್ರದ ಬಗ್ಗೆ ಪ್ರತ್ಯೇಕ ಪ್ರತ್ಯೇಕವಾಗಿ ವಿಮರ್ಶೆ ಮಾಡಿ(Case by Case Review) ಸಕ್ರಮ, ಸ್ಥಳಾಂತರ, ಅನಿವಾರ್ಯವಿದ್ದಾಗ ಮಾತ್ರ ತೆರವು ಮಾಡಲು ಕ್ರಮ ಜರುಗಿಸಬೇಕೆಂದಿದ್ದರೂ ಸಹ ಮೈಸೂರಿನ ಜಿಲ್ಲಾಡಳಿತವು ಮೇಲ್ಕಡ ಯಾವುದೇ ಕ್ರಮ ತೆಗೆದುಕೊಳ್ಳದೆ ಹಿಂದು ದೇವಸ್ಥಾನವನ್ನು ಮಾತ್ರ ಕೆಡವಿರುವುದು ಖಂಡನೀಯ. ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ

TEMPLE 5

ಕೇವಲ ಹಿಂದೂ ಸಮಾಜಕ್ಕೆ ಸೇರಿರುವ ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತೊಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿರುವುದನ್ನು ವಿಶ್ವಹಿಂದು ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಇದರಿಂದ ಇಡೀ ಹಿಂದು ಸಮಾಜದ ಭಾವನೆಗೆ ಅತೀವ ನೋವುಂಟಾಗಿರುತ್ತದೆ. ಕಳೆದ ಎರಡು ವರ್ಷದ ಹಿಂದೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ನಿಟ್ಟಿನಲ್ಲಿ ಇದೇ ರೀತಿಯಾಗಿ ಹಲವಾರು ಹಿಂದೂ ದೇವಾಲಯಗಳನ್ನು ಮಾತ್ರ ಕೆಡವಿದ್ದು, ಮೈಸೂರಿನ ಹೃದಯ ಭಾಗದಲ್ಲಿರುವ ದೇವರಾಜ ಅರಸು ರಸ್ತೆಯಲ್ಲಿರುವ ಘೋರಿಯು ನಿಜವಾಗಿಯೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತಿದ್ದರೂ ಸಹ ಜಿಲ್ಲಾಡಳಿತವು ಅದನ್ನು ಭಾಗಶಃ ತೆರವು ಗೊಳಿಸಿ, ಮತ್ತೆ ಈಗ ಎರಡು ವರ್ಷಗಳ ನಂತರ ಅರ್ಧಕ್ಕೆ ನಿಲ್ಲಿಸಿದ್ದ ಆ ಕೆಲಸವನ್ನು ಪೂರ್ಣಗೊಳಿಸದೆ ಕೈಬಿಟ್ಟು ಕೇವಲ ಹಿಂದೂ ದೇವಾಲಯಗಳನ್ನು ತೆರವು ಗೊಳಿಸುವ ಮೂಲಕ ತಾರತಮ್ಯ ತೋರಿದ ಜಿಲ್ಲಾಡಳಿತದ ಕ್ರಮವು ಕೋಮು ಸೌಹಾರ್ದತೆಯನ್ನು ಕದಡುವ, ಕೋಮು ವಾದವನ್ನು ಸೃಷ್ಟಿಮಾಡಿರುತ್ತದೆ. ಇದನ್ನೂ ಓದಿ: ಮೈಸೂರಿನಲ್ಲಿ ದೇವಸ್ಥಾನ ತೆರವು ಕಾರ್ಯಚರಣೆಗೆ ಜಿಲ್ಲಾಡಳಿತ ಬ್ರೇಕ್

ಜಿಲ್ಲಾಡಳಿತದ ಈ ದ್ವಂದ್ವ ನೀತಿಯನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ, ಜಿಲ್ಲಾಡಳಿತ ಸುಪ್ರೀಂಕೋರ್ಟ್‍ನ ಆದೇಶವನ್ನು ಸರಿಯಾಗಿ ಗ್ರಹಿಸದೆ ರಾತ್ರೋರಾತ್ರಿ ಹಲವಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಗಳನ್ನು ಕೆಡವಿ ಹಿಂದು ಸಮಾಜಕ್ಕೆ ನೋವುಂಟುಮಾಡಿದೆ. ಮಾನ್ಯ ಸುಪ್ರೀಂ ಕೋರ್ಟ್ ಪ್ರತಿಯೊಂದು ಪ್ರಕರಣದಲ್ಲಿಯೂ ಪ್ರತ್ಯೇಕವಾಗಿ ಜಿಲ್ಲಾ ಸಮಿತಿ ದೇವಸ್ಥಾನದ ಮಂಡಳಿ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಆ ದೇವಸ್ಥಾನದ ಇತಿಹಾಸ, ದೇವಸ್ಥಾನ ಇರುವ ಸ್ಥಳದಲ್ಲಿ ಇತ್ತೀಚೆಗೆ ರಸ್ತೆ ನಿರ್ಮಾಣವಾಗಿರುವ ವಿಚಾರ ಪರಿಶೀಲಿಸಿ ನಂತರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದರೂ ಸಹ ಜಿಲ್ಲಾಡಳಿತ ಅವೈಜ್ಞಾನಿಕವಾಗಿ ದೇವಸ್ಥಾನಗಳನ್ನು ಕೆಡವಿರುವುದು ಖಂಡನೀಯ. ಇದನ್ನೂ ಓದಿ: ಮುನ್ಸೂಚನೆ ನೀಡದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ: ಎಸ್‍ಡಿಪಿಐ

ವಿಶ್ವ ಹಿಂದೂ ಪರಿಷತ್ ಈ ಮೂಲಕ ಎಚ್ಚರಿಕೆ ಹಾಗೂ ಆಗ್ರಹ ಪಡಿಸುವುದೇನೆಂದರೆ ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿಯೊಂದು ದೇವಸ್ಥಾನಗಳಿಗೂ ಪ್ರತ್ಯೇಕ ನೋಟಿಸ್ ಜಾರಿ ಮಾಡಿ, ಉರ್ಜಿತಗೊಳಿಸಲು ಮತ್ತು ಸ್ಥಾಳಾಂತರಿಸಲು ಬೇಕಾಂದತಹ ಕ್ರಮ ಜರುಗಿಸಿ ದೇವಸ್ಥಾನಗಳನ್ನು ಉಳಿಸಿ ರಕ್ಷಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿ ಈ ಮೂಲಕ ಆಗ್ರಹಿಸುತ್ತೇವೆ.

TAGGED:CarchmysuruPublic TVSupreme CourttemplesVishwa Hindu Parishatಚರ್ಚ್ದೇವಸ್ಥಾನಪಬ್ಲಿಕ್ ಟಿವಿಮಸೀದಿಮೈಸೂರುವಿಶ್ವ ಹಿಂದೂ ಪರಿಷತ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

Bengaluru College Student Alleges Rape and Blackmail Threats 2 Moodabidri College Lecturers Among 3 Arrested 1
Bengaluru City

ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

Public TV
By Public TV
24 minutes ago
Siddaramaiah 1 1
Bengaluru City

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

Public TV
By Public TV
47 minutes ago
Uttara Kannada Russian Woman Rescue
Bengaluru City

ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

Public TV
By Public TV
1 hour ago
tesla model y
Automobile

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

Public TV
By Public TV
2 hours ago
Umashree Saroja devi
Cinema

ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

Public TV
By Public TV
2 hours ago
Kolar KSRTC Employee Heart Attack
Districts

ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?