ನವದೆಹಲಿ: ನೋಟ್ ಬ್ಯಾನ್ ಬಳಿಕ ಮೂಲೆಗುಂಪಾಗಿದ್ದ ಹಳೆಯ 500, ಸಾವಿರ ನೋಟಿಗೆ ಸುಪ್ರೀಂಕೋರ್ಟ್ ಮತ್ತೆ ಮರುಜೀವ ನೀಡಿದೆ.
ಯಾವ ವ್ಯಕ್ತಿ ಪ್ರಾಮಾಣಿಕವಾಗಿ ಹಳೆಯ ನೋಟುಗಳನ್ನು ಇಟ್ಟುಕೊಂಡಿದ್ದಾರೋ ಅಂಥವರಿಗೆ ಮತ್ತೊಮ್ಮೆ ಹಣವನ್ನು ಠೇವಣಿ ಇಡಲು ಅವಕಾಶ ನೀಡಬೇಕು. ಈ ಬಗ್ಗೆ ನಿಮ್ಮ ನಿಲುವು ಏನು ಎನ್ನುವುದನ್ನು ತಿಳಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಹಣಕಾಸು ಸಚಿವಾಲಯ ಈ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಬೇಕು. ಇದಕ್ಕಾಗಿ 2 ವಾರಗಳ ಕಾಲ ಕಾಲಾವಕಾಶ ನೀಡುತ್ತಿದ್ದೇವೆ. ಒಂದುವೇಳೆ ನೀವು ಉತ್ತರ ನೀಡದೇ ಇದ್ದರೆ ಇದೊಂದು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜುಲೈ 18ರಂದು ಮತ್ತೆ ಅರ್ಜಿ ವಿಚಾರಣೆಗೆ ಕೋರ್ಟ್ ಸಮಯ ನಿಗದಿಪಡಿಸಿದ್ದು, ಇಂದಿನ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್, ಪ್ರಾಮಾಣಿಕವಾಗಿ ಹಣವನ್ನು ಇಟ್ಟುಕೊಂಡವರಿಗೆ ಅವರಿಗೆ ಮತ್ತೊಮ್ಮೆ ಠೇವಣಿ ಇಡಲು ಅವಕಾಶ ನೀಡಬೇಕು. ಒಂದು ವೇಳೆ ಅವಕಾಶ ನೀಡದೇ ಇದ್ದಲ್ಲಿ ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನವೆಂಬರ್ 8ರಂದು ನೋಟು ಬ್ಯಾನ್ ನಿರ್ಧಾರ ಕೈಗೊಂಡ ಬಳಿಕ ಮಾರ್ಚ್ 31ರ ವರೆಗೆ ಹಳೆಯ ನೋಟುಗಳನ್ನು ಠೇವಣಿ ಇಡಲು ಆರ್ಬಿಐ ಅನುಮತಿ ನೀಡಿತ್ತು.
Demonetisation case: Central govt told division bench of Supreme Court that it would file an affidavit in the case. Next hearing on July 18.
— ANI (@ANI) July 4, 2017