ಅಸನಿ ಎಫೆಕ್ಟ್‌ನಿಂದ ಬಿಟ್ಟು ಬಿಡದೆ ಮಳೆ – ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ ಭೀತಿ

Public TV
1 Min Read
fever

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ. ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗ್ತಾ ಇದೆ ಈಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆವ ಅಲರ್ಟ್ ಮಾಡ್ತಿದೆ.

DRAINAGE 2

ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗ್ತಿದೆ. ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಮಳೆಗಾಲ ಆರಂಭ ಹಿನ್ನೆಲೆ ಪ್ರಮುಖವಾಗಿ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸ್ತಿದ್ದಾರೆ. ಇದನ್ನೂ ಓದಿ: ಕೊರೊನಾಗೂ ಟೊಮ್ಯಾಟೊ ಫ್ಲೂಗೂ ಸಂಬಂಧವಿಲ್ಲ, ಇದು ಈಗಾಗಲೇ ಇರುವ ಕಾಯಿಲೆ: ಸುಧಾಕರ್‌

DRAINAGE 1

ಆರೋಗ್ಯ ಇಲಾಖೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಮನೆ ಮುಂದೆ ನೀರು ನಿಂತುಕೊಳ್ಳದಂತೆ ಸ್ವಚ್ಛತೆ ಕಾಪಾಡಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಡ್ರಮ್‍ಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು. ನೀರು ಸಂಗ್ರಹ ತೊಟ್ಟಿ, ಡ್ರಮ್‍ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನ ಬಳಸಿ. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನ ಬಳಸಬೇಕು.

DRAINAGE

ಮಲೇರಿಯಾ ಮತ್ತು ಡೆಂಗ್ಯೂ ಕೇಸ್‍ಗಳ ಸಂಖ್ಯೆ ಹೆಚ್ಚಾಗ್ತಿದ್ದು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ವಹಿಸದಿದ್ದರೆ ಅಪಾಯ ಎಂದು ವೈದ್ಯರು ತಿಳಿಸಿದ್ದಾರೆ. ಒಟ್ಟಾರೆ ಮಳೆಗಾಲ ಆರಂಭದ ಹೊತ್ತಲ್ಲೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಆರೋಗ್ಯ ಇಲಾಖೆ ಜನರ ಜಾಗೃತಿ ಮೂಡಿಸ್ತಾ ಇದೆ. ಜನ ಇದನ್ನ ಎಷ್ಟರ ಮಟ್ಟಿಗೆ ಪಾಲನೇ ಮಾಡ್ತಾರೋ ಕಾದು ನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *