Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ವರ್ಷಗಳಿಂದ ಸೆಕ್ಸ್ ನಿರಾಕರಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

10 ವರ್ಷಗಳಿಂದ ಸೆಕ್ಸ್ ನಿರಾಕರಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

Public TV
Last updated: March 10, 2017 2:53 pm
Public TV
Share
2 Min Read
knife
SHARE

ಲಕ್ನೋ: 10 ವರ್ಷಗಳಿಂದ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕೆ 30 ವರ್ಷದ ಮಹಿಳೆಯೊಬ್ಬರು ತನ್ನ ಗಂಡನ ಮರ್ಮಾಂಗವನ್ನೇ ಕತ್ತರಿಸಿರೋ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್‍ನಲ್ಲಿ ನಡೆದಿದೆ.

ಗುರುವಾರ ಸುಮಾರು 9.30ರ ಸುಮಾರಿಗೆ ಈ ಘಟನೆ ನಡೆದಿದೆ. ದಂಪತಿ ಬುಲಂದ್‍ಶಹರ್‍ನಿಂದ ಬಂದು 8 ವರ್ಷಗಳಿಂದ ಘಾಜಿಯಾಬಾದ್‍ನಲ್ಲಿ ವಾಸವಿದ್ದರು. ಇವರಿಗೆ ಮಕ್ಕಳಾಗಿರಲಿಲ್ಲ. ಆಗಾಗ ಇದೇ ವಿಷಯವಾಗಿ ಜಗಳವಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮಹಿಳೆಯ ಗಂಡ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದದೆ ಮಾನಸಿಕ ಹಿಂಸೆ ನೀಡುತ್ತಿದ್ದರು. ಆಕೆಯೊಂದಿಗೆ ಮಕ್ಕಳಾಗದಂತೆ ತಡೆದಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಗಂಡನ ವರ್ತನೆಯಿಂದ ಬೇಸತ್ತು ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಬಾತ್‍ರೂಮಿನಿಂದ ಹೊರಬಂದ ಪತಿಯ ಮೇಲೆ ಮಹಿಳೆ ದಾಳಿ ಮಾಡಿದ್ದಾರೆ ಅಂತ ಪೊಲೀಸ್ ಅಧಿಕರಿ ಅನಿಲ್ ಕುಮಾರ್ ಯಾದವ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಘಟನೆ ಬಗ್ಗೆ ಖೋಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ನನ್ನ ಗಂಡನಿಗೆ ಈ ರೀತಿ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಹಲ್ಲೆಗೊಳಗಾದ ಪತಿ ಕ್ಯಾಬ್ ಆಪರೇಟರ್ ಆಗಿದ್ದು, ಎರಡು ಇನ್ನೋವಾ ಕಾರ್‍ಗಳನ್ನ ಹೊಂದಿದ್ದಾರೆಂದು ವರದಿಯಾಗಿದೆ.

ಮಕ್ಕಳಾಗಿರಲಿಲ್ಲ: ನನ್ನ ಗಂಡ ತನ್ನ ಪುರುಷತ್ವದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಬೇರೆ ಮಹಿಳೆಯರೊಂದಿಗೆ ನನಗೆ ಮಕ್ಕಳಾಗುತ್ತವೆ. ಆದ್ರೆ ನಿನ್ನೊಂದಿಗೆ ಆಗಲ್ಲ ಎಂದು ಹೇಳುತ್ತಿದ್ದರು. ಆದರೂ ನಾನು ಅವರನ್ನು ಸಹಿಸಿಕೊಂಡಿದ್ದೆ. ಅವರು ನನ್ನನ್ನು ಯಾಕೆ ದ್ವೇಷಿಸುತ್ತಾರೆಂದು ಗೊತ್ತಿಲ್ಲ. ಅವರು ಆಗಾಗ ನನ್ನನ್ನು ದೂರ ಹೋಗುವಂತೆ ಹೇಳುತ್ತಿದ್ದರು. ನಮಗೆ 2006ರಲ್ಲಿ ಮದುವೆಯಾಯಿತು. ನನ್ನನ್ನು ಮತ್ತು ನನ್ನ ತಂಗಿಯರನ್ನು ಅವರು ಆಗಾಗ ನಿಂದಿಸುತ್ತಿದ್ದರು. ನನ್ನ ಮೇಲೆ ಹಲ್ಲೆ ಮಾಡುತ್ತಿದ್ದರು. ನಮಗೆ ಮಕ್ಕಳಾಗಬೇಕೆಂದು ನಾನು ಸಾಕಷ್ಟು ಬಾರಿ ಅವರನ್ನು ಒತ್ತಾಯಿಸಿದ್ದೆ. ಆದರೆ ಅವರು ನನ್ನೊಂದಿಗೆ ಸಂಭೋಗ ಮಾಡುತ್ತಿರಲಿಲ್ಲ ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

ಪಶ್ಚಾತ್ತಾಪವಿಲ್ಲ: ಇದೇ ಕಾರಣಕ್ಕೆ ನಮ್ಮ ಮಧ್ಯೆ ಬುಧವಾರದಂದು ಜಗಳ ನಡೆದಿತ್ತು. ನಾನು ಸಾಕಷ್ಟು ಮಾನಸಿಕ ಹಿಂಸೆ ಮತ್ತು ಅವಮಾನ ಅನುಭವಿಸಿದ್ದೇನೆ. ಆದ್ದರಿಂದ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಸಂಬಂಧಿಕರು ಮಕ್ಕಳಾಗದಿರುವ ಬಗ್ಗೆ ನನ್ನನ್ನು ಪ್ರಶ್ನಿಸಿದಾಗ ನನ್ನ ಬಳಿ ಯಾವುದೇ ಉತ್ತರವಿರಲಿಲ್ಲ ಎಂದು ಆಕೆ ಹೇಳಿದ್ದಾರೆ.

ಘಟನೆ ಬಳಿಕ ಹಲ್ಲೆಗೊಳಗಾದ ಪತಿಯನ್ನು ನೋಯ್ಡಾದ ಜೇಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ಹಲ್ಲೆಗೊಳಗಾದ ವ್ಯಕ್ತಿಯ ಸಹೋದರ ಹೇಳಿಕೆ ನೀಡಿದ್ದು, ವೈದ್ಯರು ನನ್ನ ಸಹೋದರನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆತ ಆಗ ತಾನೇ ಬಾತ್‍ರೂಮಿನಿಂದ ಹೊರಗೆ ಬಂದಿದ್ದ. ನನ್ನ ಸಹೋದರ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ ಆಕೆ ಹೊರಗಿನಿಂದ ಬಾಗಿಲನ್ನು ಲಾಕ್ ಮಾಡಿ ಹೋಗಿದ್ದಳು. ನಂತರ ನನ್ನ ಸಹೋದರ ಪೊಲೀಸರಿಗೆ ಕರೆ ಮಾಡಿದ ಎಂದು ಹೇಳಿದ್ದಾರೆ.

ಪತಿಯ ಸ್ಥಿತಿ ಗಂಭೀರ: ಹಲ್ಲೆಗೊಳಗಾದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ನಾವು ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಸ್ಥಿತಿ ಗಂಭಿರವಾಗಿದೆ. ಅವರು ಬದುಕುಳಿತಯುತ್ತಾರೆ ಅಂತ ಅಂದುಕೊಂಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನಂತರವೂ ಮಕ್ಕಳಾಗುತ್ತವೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಸೌರಭ್ ಗುಪ್ತಾ ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article KPL MAN DIED small ಹಣವೆಂದು ಬ್ಯಾಗ್ ತೆರೆದು ನೋಡಿದ್ರೆ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು
Next Article cng elephant F small ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಆನೆಯ ರಕ್ಷಣೆ

Latest Cinema News

Actor Vijay
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ
Cinema Latest Main Post National South cinema
Rishab Shetty
ಬರದಿರುವ ಭಾಷೆ ಮಾತಾಡಿ ಅಗೌರವ ತೋರಿಸೋದು ಬೇಡ – ಹೈದ್ರಾಬಾದ್‌ನಲ್ಲಿ ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ
Cinema Districts Latest Sandalwood Top Stories
Darshan 6
ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Bengaluru City Cinema Court Districts Karnataka Latest Sandalwood Top Stories
trump maga
ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌
Cinema Latest Top Stories World
Bigg Boss Kannada 12 YouTuber Rakshita Shetty Eliminated
ಮೊದಲ ದಿನವೇ ಮನೆಯಿಂದ ಔಟ್‌ – ಕರಾವಳಿಯ ಯೂಟ್ಯೂಬರ್ ರಕ್ಷಿತಾ ಶೆಟ್ಟಿಗೆ ಗೇಟ್‌ಪಾಸ್‌
Cinema Latest South cinema Top Stories

You Might Also Like

G Parameshwar
Bengaluru City

ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್

57 seconds ago
Bengaluru Traffic
Bengaluru City

ಪೀಕ್‌ ಅವರ್‌ನಲ್ಲಿ ಬೆಂಗಳೂರಿನಲ್ಲಿ ಒಬ್ಬರೇ ಕಾರ್‌ನಲ್ಲಿ ಸಂಚರಿಸಿದ್ರೆ ಟ್ಯಾಕ್ಸ್‌?

22 minutes ago
Tumkur Dasara
Districts

ತುಮಕೂರು ದಸರಾ – ಇಂದಿನಿಂದ ಮೂರು ದಿನ ವಾಹನ ಸಂಚಾರ ಬದಲಾವಣೆ

27 minutes ago
Quetta Blast
Latest

ಕ್ವೆಟ್ಟಾದ ಪೊಲೀಸ್‌ ಹೆಡ್‌ಕ್ವಾರ್ಟರ್ಸ್‌ ಬಳಿ ಪ್ರಬಲ ಸ್ಫೋಟ – ಕನಿಷ್ಠ 10 ಜನರು ಸಾವು

28 minutes ago
Tumakuru Accident
Crime

Tumakuru | ಬೈಕ್, ಆಕ್ಟಿವಾ ನಡುವೆ ಭೀಕರ ಅಪಘಾತ – ಮೂವರು ದುರ್ಮರಣ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?