Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Bengaluru City

ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Public TV
Last updated: December 17, 2019 2:52 pm
Public TV
Share
2 Min Read
bs yeddyurppa
SHARE

ಬೆಂಗಳೂರು: ಸಚಿವ ಸಂಪುಟ ವಿಳಂಬ, ಸಚಿವ ಸ್ಥಾನಗಳಿವೆ ಲಾಬಿಗಳು ನಡೆಯುತ್ತಿರುವ ನಡುವೆಯೇ ಮಹತ್ವದ ಚಿಂತನ-ಮಂಥನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ. ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಚಿವ ಸ್ಥಾನಗಳ ಜೊತೆ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಲಾಬಿ ಜೋರಾಗಿದೆ.

ಒಂದೇ ಸಮುದಾಯದ ಇಬ್ಬರು ಪ್ರಭಾವಿಗಳು ಸಚಿವ ಸ್ಥಾನಕ್ಕಾಗಿ ಜಟಾಪಟಿ ನಡೆಸುತ್ತಿದ್ದಾರೆ. ಒಬ್ಬ ಹಾಲಿ ಉಪಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಇದು ಸಿಎಂ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪಮುಖ್ಯಮಂತ್ರಿ ಸ್ಥಾನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ತಲೆಯಲ್ಲಿ ಮತ್ತೊಂದು ಆಲೋಚನೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡುವುದು ಬೇಡ. ಜೊತೆಗೆ ಇರುವ ಹಾಲಿ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನೂ ರದ್ದು ಮಾಡುವುದು. ಈ ಆಲೋಚನೆಗೆ ಈಗಾಗಲೇ ರೆಕ್ಕೆ ಪುಕ್ಕ ಹುಟ್ಟಿಕೊಂಡು ಬಿಜೆಪಿ ಪಾಳಯದಲ್ಲಿ ಬಿಸಿ ಬಿಸಿ ಚರ್ಚೆ, ವಿವಾದ ಹುಟ್ಟು ಹಾಕಿದೆ.

yeddyurppa bsy Smile A

ಮುಖ್ಯಮಂತ್ರಿ ಯಡಿಯೂರಪ್ಪ ಸಹ ಆಪ್ತರ ಜೊತೆ ಈ ಬಗ್ಗೆ ಗಹನವಾದ ಚರ್ಚೆಯಲ್ಲಿ ಮುಳುಗಿದ್ದಾರೆ. ಸದ್ಯದಲ್ಲೇ ಹೈಕಮಾಂಡ್ ಜೊತೆಗೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ವಿಚಾರದ ಕುರಿತು ಯಡಿಯೂರಪ್ಪ ಚರ್ಚೆ ಮಾಡಲಿದ್ದಾರೆ. ಯಡಿಯೂರಪ್ಪನವರ ಈ ನಡೆ ಇದೀಗ ಹಾಲಿ ಉಪ ಮುಖ್ಯಮಂತ್ರಿಗಳಲ್ಲಿ ಆತಂಕ ಹೆಚ್ಚಿಸಿದೆ.

ಸದ್ಯದ ಸಂಕೀರ್ಣ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಬಹಿರಂಗವಾಗಿ ಎಲ್ಲೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ಪ್ರಸ್ತಾಪದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬದಲಾಗಿ ತಮ್ಮ ಆಪ್ತ ಶಾಸಕರ ಮೂಲಕ ಡಿಸಿಎಂ ಹುದ್ದೆಗಳ ರದ್ದು ವಿಷಯವನ್ನು ಚರ್ಚೆಗೆ ತೇಲಿಸಿಬಿಟ್ಟುದ್ದಾರೆ. ಯಡಿಯೂರಪ್ಪ ಅವರ ಆಪ್ತ ಎಂಪಿ ರೇಣುಕಾಚಾರ್ಯ ಈಗಾಗಲೇ ಎರಡು ಸಲ ಬಹಿರಂಗವಾಗಿ ಹಾಲಿ ಉಪಮುಖ್ಯಮಂತ್ರಿ ಸ್ಥಾನಗಳ ರದ್ದು ಮಾಡುವ ಬಗ್ಗೆ ಮಾಧ್ಯಮಗಳಲ್ಲಿ ಮಾತಾಡಿದ್ದಾರೆ.

ಇವತ್ತು ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಭೇಟಿ ಮಾಡಿದ ರೇಣುಕಾಚಾರ್ಯ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಗಳಿಗೂ ರೇಣುಕಾಚಾರ್ಯ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದರು. ಮುಖ್ಯಮಂತ್ರಿ ಆಗಿ ಖುದ್ದು ಯಡಿಯೂರಪ್ಪ ಅವರೇ ಸಮರ್ಥರಾಗಿದ್ದಾರೆ. ಎಲ್ಲ ನಿರ್ಧಾರಗಳನ್ನು ಯಡಿಯೂರಪ್ಪ ಅವರೇ ಕೈಗೊಳ್ಳಲು ಸಮರ್ಥರಿದ್ದಾರೆ. ಹಾಗಾಗಿ ಉಪಮುಖ್ಯಮಂತ್ರಿ ಸ್ಥಾನಗಳ ಅಗತ್ಯ, ಅನಿವಾರ್ಯತೆ ಇಲ್ಲ. ಇದರಿಂದ ಅನಗತ್ಯ ಪವರ್ ಸೆಂಟರ್ ಗಳ ಸೃಷ್ಟಿಯಾಗುವುದಲ್ಲದೇ ಗುಂಪುಗಾರಿಕೆಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ ಅನ್ನೋದು ಶಾಸಕ ರೇಣುಕಾಚಾರ್ಯ ಅವರ ಅಭಿಪ್ರಾಯ.

BSY AMITH

ಅಷ್ಟಕ್ಕೂ ಉಪಮುಖ್ಯಮಂತ್ರಿ ಸ್ಥಾನಗಳ ಸೃಷ್ಟಿಗೆ ಯಡಿಯೂರಪ್ಪ ನವರ ವಿರೋಧ ಮೊದಲಿಂದಲೂ ಇದೆ. ಉಪಮುಖ್ಯಮಂತ್ರಿ ಸ್ಥಾನಗಳನ್ನು ಯಾರಿಗೂ ಕೊಡೋದು ಬೇಡ ಅಂತ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಯಡಿಯೂರಪ್ಪ ಹೈಕಮಾಂಡಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಆಗ ಹೈಕಮಾಂಡ್ ಯಡಿಯೂರಪ್ಪರನ್ನು ಕಂಟ್ರೋಲ್ ಮಾಡಬೇಕೆಂಬ ಉದ್ದೇಶದಿಂದ ಅವರ ಮನವಿ ನಿರಾಕರಿಸಿ ಮೂವರಿಗೆ ಉಪಮುಖ್ಯಮಂತ್ರಿ ಮಾಡಿತ್ತು. ಆದರೆ ಈಗ ಸನ್ನಿವೇಶ ಬದಲಾಗಿದೆ. ಉಪಚುನಾವಣೆ ಬಳಿಕ ಪಕ್ಷದಲ್ಲಿ, ಸರ್ಕಾರದಲ್ಲಿ, ರಾಜ್ಯದಲ್ಲಿ ಯಡಿಯೂರಪ್ಪ ಶಕ್ತಿ, ಸಾಮರ್ಥ್ಯ ವರ್ಚಸ್ಸು ಹೆಚ್ಚಾಗಿದೆ.

ಈಗ ಯಡಿಯೂರಪ್ಪನವರನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವ ಹೈಕಮಾಂಡ್ ನಾಯಕರ ಪ್ರಯತ್ನಗಳೂ ಕೈ ಹಿಡಿಯಲ್ಲ. ಹಾಗಾಗಿ ಈಗ ಯಡಿಯೂರಪ್ಪ ಹೈಕಮಾಂಡಿಗೆ ಉಪಮುಖ್ಯಮಂತ್ರಿ ಸ್ಥಾನ ಬೇಡ ಅಂತ ಮತ್ತೊಮ್ಮೆ ಒತ್ತಾಯ ಹಾಕಿದರೆ ಅಷ್ಟು ಸುಲಭಕ್ಕೆ ಅದನ್ನು ಹೈಕಮಾಂಡ್ ನಿರಾಕರಿಸುವ ಪರಿಸ್ಥಿತಿಯಲ್ಲಿ ಇಲ್ಲ. ಆದರೂ ರಾಜ್ಯದ ಮಟ್ಟಿಗೆ ಹೈಕಮಾಂಡ್ ಯಾವಾಗಲೂ ಬಿಜೆಪಿಯಲ್ಲಿ ಸ್ಟ್ರಾಂಗೇ ಆಗಿರುವುದರಿಂದ ಅದರ ನಿರ್ಧಾರ ಏನು ಅನ್ನುವುದು ಯಾರಿಗೂ ಗೊತ್ತಿಲ್ಲ. ಸದ್ಯ ತೂಗುವ ತಕ್ಕಡಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ರದ್ದು ಮಾಡುವ ಪ್ರಸ್ತಾಪ ಇದೆ. ತಕ್ಕಡಿ ಯಾವ ಕಡೆಗೆ ವಾಲುತ್ತದೋ ಕಾದು ನೋಡಬೇಕಿದೆ.

TAGGED:bjpDeputy CMkarnatakapoliticsyeddyurappaಉಪಮುಖ್ಯಮಂತ್ರಿಕನ್ನಡ ನ್ಯೂಸ್ಕರ್ನಾಟಕಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
40 minutes ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
54 minutes ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
57 minutes ago
Lok Sabha Election 2024 Rs. 4650 crores seized even before polling begins Higher than total seizures in 2019 polls rs 500
Latest

ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV
By Public TV
1 hour ago
Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
1 hour ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?