Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Bengaluru City

ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Public TV
Last updated: December 17, 2019 2:52 pm
Public TV
Share
2 Min Read
bs yeddyurppa
SHARE

ಬೆಂಗಳೂರು: ಸಚಿವ ಸಂಪುಟ ವಿಳಂಬ, ಸಚಿವ ಸ್ಥಾನಗಳಿವೆ ಲಾಬಿಗಳು ನಡೆಯುತ್ತಿರುವ ನಡುವೆಯೇ ಮಹತ್ವದ ಚಿಂತನ-ಮಂಥನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ. ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಚಿವ ಸ್ಥಾನಗಳ ಜೊತೆ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಲಾಬಿ ಜೋರಾಗಿದೆ.

ಒಂದೇ ಸಮುದಾಯದ ಇಬ್ಬರು ಪ್ರಭಾವಿಗಳು ಸಚಿವ ಸ್ಥಾನಕ್ಕಾಗಿ ಜಟಾಪಟಿ ನಡೆಸುತ್ತಿದ್ದಾರೆ. ಒಬ್ಬ ಹಾಲಿ ಉಪಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಇದು ಸಿಎಂ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪಮುಖ್ಯಮಂತ್ರಿ ಸ್ಥಾನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ತಲೆಯಲ್ಲಿ ಮತ್ತೊಂದು ಆಲೋಚನೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡುವುದು ಬೇಡ. ಜೊತೆಗೆ ಇರುವ ಹಾಲಿ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನೂ ರದ್ದು ಮಾಡುವುದು. ಈ ಆಲೋಚನೆಗೆ ಈಗಾಗಲೇ ರೆಕ್ಕೆ ಪುಕ್ಕ ಹುಟ್ಟಿಕೊಂಡು ಬಿಜೆಪಿ ಪಾಳಯದಲ್ಲಿ ಬಿಸಿ ಬಿಸಿ ಚರ್ಚೆ, ವಿವಾದ ಹುಟ್ಟು ಹಾಕಿದೆ.

yeddyurppa bsy Smile A

ಮುಖ್ಯಮಂತ್ರಿ ಯಡಿಯೂರಪ್ಪ ಸಹ ಆಪ್ತರ ಜೊತೆ ಈ ಬಗ್ಗೆ ಗಹನವಾದ ಚರ್ಚೆಯಲ್ಲಿ ಮುಳುಗಿದ್ದಾರೆ. ಸದ್ಯದಲ್ಲೇ ಹೈಕಮಾಂಡ್ ಜೊತೆಗೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ವಿಚಾರದ ಕುರಿತು ಯಡಿಯೂರಪ್ಪ ಚರ್ಚೆ ಮಾಡಲಿದ್ದಾರೆ. ಯಡಿಯೂರಪ್ಪನವರ ಈ ನಡೆ ಇದೀಗ ಹಾಲಿ ಉಪ ಮುಖ್ಯಮಂತ್ರಿಗಳಲ್ಲಿ ಆತಂಕ ಹೆಚ್ಚಿಸಿದೆ.

ಸದ್ಯದ ಸಂಕೀರ್ಣ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಬಹಿರಂಗವಾಗಿ ಎಲ್ಲೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ಪ್ರಸ್ತಾಪದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬದಲಾಗಿ ತಮ್ಮ ಆಪ್ತ ಶಾಸಕರ ಮೂಲಕ ಡಿಸಿಎಂ ಹುದ್ದೆಗಳ ರದ್ದು ವಿಷಯವನ್ನು ಚರ್ಚೆಗೆ ತೇಲಿಸಿಬಿಟ್ಟುದ್ದಾರೆ. ಯಡಿಯೂರಪ್ಪ ಅವರ ಆಪ್ತ ಎಂಪಿ ರೇಣುಕಾಚಾರ್ಯ ಈಗಾಗಲೇ ಎರಡು ಸಲ ಬಹಿರಂಗವಾಗಿ ಹಾಲಿ ಉಪಮುಖ್ಯಮಂತ್ರಿ ಸ್ಥಾನಗಳ ರದ್ದು ಮಾಡುವ ಬಗ್ಗೆ ಮಾಧ್ಯಮಗಳಲ್ಲಿ ಮಾತಾಡಿದ್ದಾರೆ.

ಇವತ್ತು ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಭೇಟಿ ಮಾಡಿದ ರೇಣುಕಾಚಾರ್ಯ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಗಳಿಗೂ ರೇಣುಕಾಚಾರ್ಯ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದರು. ಮುಖ್ಯಮಂತ್ರಿ ಆಗಿ ಖುದ್ದು ಯಡಿಯೂರಪ್ಪ ಅವರೇ ಸಮರ್ಥರಾಗಿದ್ದಾರೆ. ಎಲ್ಲ ನಿರ್ಧಾರಗಳನ್ನು ಯಡಿಯೂರಪ್ಪ ಅವರೇ ಕೈಗೊಳ್ಳಲು ಸಮರ್ಥರಿದ್ದಾರೆ. ಹಾಗಾಗಿ ಉಪಮುಖ್ಯಮಂತ್ರಿ ಸ್ಥಾನಗಳ ಅಗತ್ಯ, ಅನಿವಾರ್ಯತೆ ಇಲ್ಲ. ಇದರಿಂದ ಅನಗತ್ಯ ಪವರ್ ಸೆಂಟರ್ ಗಳ ಸೃಷ್ಟಿಯಾಗುವುದಲ್ಲದೇ ಗುಂಪುಗಾರಿಕೆಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ ಅನ್ನೋದು ಶಾಸಕ ರೇಣುಕಾಚಾರ್ಯ ಅವರ ಅಭಿಪ್ರಾಯ.

BSY AMITH

ಅಷ್ಟಕ್ಕೂ ಉಪಮುಖ್ಯಮಂತ್ರಿ ಸ್ಥಾನಗಳ ಸೃಷ್ಟಿಗೆ ಯಡಿಯೂರಪ್ಪ ನವರ ವಿರೋಧ ಮೊದಲಿಂದಲೂ ಇದೆ. ಉಪಮುಖ್ಯಮಂತ್ರಿ ಸ್ಥಾನಗಳನ್ನು ಯಾರಿಗೂ ಕೊಡೋದು ಬೇಡ ಅಂತ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಯಡಿಯೂರಪ್ಪ ಹೈಕಮಾಂಡಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಆಗ ಹೈಕಮಾಂಡ್ ಯಡಿಯೂರಪ್ಪರನ್ನು ಕಂಟ್ರೋಲ್ ಮಾಡಬೇಕೆಂಬ ಉದ್ದೇಶದಿಂದ ಅವರ ಮನವಿ ನಿರಾಕರಿಸಿ ಮೂವರಿಗೆ ಉಪಮುಖ್ಯಮಂತ್ರಿ ಮಾಡಿತ್ತು. ಆದರೆ ಈಗ ಸನ್ನಿವೇಶ ಬದಲಾಗಿದೆ. ಉಪಚುನಾವಣೆ ಬಳಿಕ ಪಕ್ಷದಲ್ಲಿ, ಸರ್ಕಾರದಲ್ಲಿ, ರಾಜ್ಯದಲ್ಲಿ ಯಡಿಯೂರಪ್ಪ ಶಕ್ತಿ, ಸಾಮರ್ಥ್ಯ ವರ್ಚಸ್ಸು ಹೆಚ್ಚಾಗಿದೆ.

ಈಗ ಯಡಿಯೂರಪ್ಪನವರನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವ ಹೈಕಮಾಂಡ್ ನಾಯಕರ ಪ್ರಯತ್ನಗಳೂ ಕೈ ಹಿಡಿಯಲ್ಲ. ಹಾಗಾಗಿ ಈಗ ಯಡಿಯೂರಪ್ಪ ಹೈಕಮಾಂಡಿಗೆ ಉಪಮುಖ್ಯಮಂತ್ರಿ ಸ್ಥಾನ ಬೇಡ ಅಂತ ಮತ್ತೊಮ್ಮೆ ಒತ್ತಾಯ ಹಾಕಿದರೆ ಅಷ್ಟು ಸುಲಭಕ್ಕೆ ಅದನ್ನು ಹೈಕಮಾಂಡ್ ನಿರಾಕರಿಸುವ ಪರಿಸ್ಥಿತಿಯಲ್ಲಿ ಇಲ್ಲ. ಆದರೂ ರಾಜ್ಯದ ಮಟ್ಟಿಗೆ ಹೈಕಮಾಂಡ್ ಯಾವಾಗಲೂ ಬಿಜೆಪಿಯಲ್ಲಿ ಸ್ಟ್ರಾಂಗೇ ಆಗಿರುವುದರಿಂದ ಅದರ ನಿರ್ಧಾರ ಏನು ಅನ್ನುವುದು ಯಾರಿಗೂ ಗೊತ್ತಿಲ್ಲ. ಸದ್ಯ ತೂಗುವ ತಕ್ಕಡಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ರದ್ದು ಮಾಡುವ ಪ್ರಸ್ತಾಪ ಇದೆ. ತಕ್ಕಡಿ ಯಾವ ಕಡೆಗೆ ವಾಲುತ್ತದೋ ಕಾದು ನೋಡಬೇಕಿದೆ.

TAGGED:bjpDeputy CMkarnatakapoliticsyeddyurappaಉಪಮುಖ್ಯಮಂತ್ರಿಕನ್ನಡ ನ್ಯೂಸ್ಕರ್ನಾಟಕಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

bus collides with bike in channarayapatna head constable dies
Crime

ಚನ್ನರಾಯಪಟ್ಟಣ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸಾವು

Public TV
By Public TV
8 seconds ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
4 minutes ago
PM Modi PT Usha
Latest

IOA ಅಧ್ಯಕ್ಷೆ ಪಿಟಿ ಉಷಾ ಪತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Public TV
By Public TV
4 minutes ago
ajit pawar sunetra pawar
Latest

ಅಜಿತ್ ಪವಾರ್ ನಿಧನ ಬಳಿಕ ಪತ್ನಿ ಸುನೇತ್ರಾ ಕ್ಯಾಬಿನೆಟ್ ಸೇರ್ಪಡೆಗೆ ಒತ್ತಡ

Public TV
By Public TV
20 minutes ago
Marriage
Chikkaballapur

ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌!

Public TV
By Public TV
27 minutes ago
B Nagendra
Districts

ಬಳ್ಳಾರಿ ಬ್ಯಾನರ್‌ ಗಲಭೆ; ಸದನದಲ್ಲಿ ಶಾಸಕ ನಾಗೇಂದ್ರ – ಜನಾರ್ದನ ರೆಡ್ಡಿ ನಡುವೆ ಮಾತಿನ ʻಫೈರಿಂಗ್‌ʼ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?