Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Bengaluru City

ಹಾಲಿ 3 ಉಪಮುಖ್ಯಮಂತ್ರಿ ಸ್ಥಾನಗಳು ರದ್ದು? – ಬಿಜೆಪಿಯಲ್ಲಿ ನಡೆಯುತ್ತಿದೆ ಗಂಭೀರ ಮಂಥನ

Public TV
Last updated: December 17, 2019 2:52 pm
Public TV
Share
2 Min Read
bs yeddyurppa
SHARE

ಬೆಂಗಳೂರು: ಸಚಿವ ಸಂಪುಟ ವಿಳಂಬ, ಸಚಿವ ಸ್ಥಾನಗಳಿವೆ ಲಾಬಿಗಳು ನಡೆಯುತ್ತಿರುವ ನಡುವೆಯೇ ಮಹತ್ವದ ಚಿಂತನ-ಮಂಥನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ. ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಚಿವ ಸ್ಥಾನಗಳ ಜೊತೆ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಲಾಬಿ ಜೋರಾಗಿದೆ.

ಒಂದೇ ಸಮುದಾಯದ ಇಬ್ಬರು ಪ್ರಭಾವಿಗಳು ಸಚಿವ ಸ್ಥಾನಕ್ಕಾಗಿ ಜಟಾಪಟಿ ನಡೆಸುತ್ತಿದ್ದಾರೆ. ಒಬ್ಬ ಹಾಲಿ ಉಪಮುಖ್ಯಮಂತ್ರಿಗಳು ಸ್ಥಾನ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಇದು ಸಿಎಂ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪಮುಖ್ಯಮಂತ್ರಿ ಸ್ಥಾನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ತಲೆಯಲ್ಲಿ ಮತ್ತೊಂದು ಆಲೋಚನೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಉಪಮುಖ್ಯಮಂತ್ರಿ ಸ್ಥಾನ ಕೊಡುವುದು ಬೇಡ. ಜೊತೆಗೆ ಇರುವ ಹಾಲಿ ಮೂರು ಉಪಮುಖ್ಯಮಂತ್ರಿ ಸ್ಥಾನಗಳನ್ನೂ ರದ್ದು ಮಾಡುವುದು. ಈ ಆಲೋಚನೆಗೆ ಈಗಾಗಲೇ ರೆಕ್ಕೆ ಪುಕ್ಕ ಹುಟ್ಟಿಕೊಂಡು ಬಿಜೆಪಿ ಪಾಳಯದಲ್ಲಿ ಬಿಸಿ ಬಿಸಿ ಚರ್ಚೆ, ವಿವಾದ ಹುಟ್ಟು ಹಾಕಿದೆ.

yeddyurppa bsy Smile A

ಮುಖ್ಯಮಂತ್ರಿ ಯಡಿಯೂರಪ್ಪ ಸಹ ಆಪ್ತರ ಜೊತೆ ಈ ಬಗ್ಗೆ ಗಹನವಾದ ಚರ್ಚೆಯಲ್ಲಿ ಮುಳುಗಿದ್ದಾರೆ. ಸದ್ಯದಲ್ಲೇ ಹೈಕಮಾಂಡ್ ಜೊತೆಗೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ವಿಚಾರದ ಕುರಿತು ಯಡಿಯೂರಪ್ಪ ಚರ್ಚೆ ಮಾಡಲಿದ್ದಾರೆ. ಯಡಿಯೂರಪ್ಪನವರ ಈ ನಡೆ ಇದೀಗ ಹಾಲಿ ಉಪ ಮುಖ್ಯಮಂತ್ರಿಗಳಲ್ಲಿ ಆತಂಕ ಹೆಚ್ಚಿಸಿದೆ.

ಸದ್ಯದ ಸಂಕೀರ್ಣ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಬಹಿರಂಗವಾಗಿ ಎಲ್ಲೂ ಉಪಮುಖ್ಯಮಂತ್ರಿ ಸ್ಥಾನಗಳನ್ನು ರದ್ದು ಮಾಡುವ ಪ್ರಸ್ತಾಪದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬದಲಾಗಿ ತಮ್ಮ ಆಪ್ತ ಶಾಸಕರ ಮೂಲಕ ಡಿಸಿಎಂ ಹುದ್ದೆಗಳ ರದ್ದು ವಿಷಯವನ್ನು ಚರ್ಚೆಗೆ ತೇಲಿಸಿಬಿಟ್ಟುದ್ದಾರೆ. ಯಡಿಯೂರಪ್ಪ ಅವರ ಆಪ್ತ ಎಂಪಿ ರೇಣುಕಾಚಾರ್ಯ ಈಗಾಗಲೇ ಎರಡು ಸಲ ಬಹಿರಂಗವಾಗಿ ಹಾಲಿ ಉಪಮುಖ್ಯಮಂತ್ರಿ ಸ್ಥಾನಗಳ ರದ್ದು ಮಾಡುವ ಬಗ್ಗೆ ಮಾಧ್ಯಮಗಳಲ್ಲಿ ಮಾತಾಡಿದ್ದಾರೆ.

ಇವತ್ತು ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಮತ್ತೊಮ್ಮೆ ಭೇಟಿ ಮಾಡಿದ ರೇಣುಕಾಚಾರ್ಯ ಡಿಸಿಎಂ ಹುದ್ದೆಗಳನ್ನು ರದ್ದು ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಹೊರಬಂದು ಮಾಧ್ಯಮಗಳಿಗೂ ರೇಣುಕಾಚಾರ್ಯ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದರು. ಮುಖ್ಯಮಂತ್ರಿ ಆಗಿ ಖುದ್ದು ಯಡಿಯೂರಪ್ಪ ಅವರೇ ಸಮರ್ಥರಾಗಿದ್ದಾರೆ. ಎಲ್ಲ ನಿರ್ಧಾರಗಳನ್ನು ಯಡಿಯೂರಪ್ಪ ಅವರೇ ಕೈಗೊಳ್ಳಲು ಸಮರ್ಥರಿದ್ದಾರೆ. ಹಾಗಾಗಿ ಉಪಮುಖ್ಯಮಂತ್ರಿ ಸ್ಥಾನಗಳ ಅಗತ್ಯ, ಅನಿವಾರ್ಯತೆ ಇಲ್ಲ. ಇದರಿಂದ ಅನಗತ್ಯ ಪವರ್ ಸೆಂಟರ್ ಗಳ ಸೃಷ್ಟಿಯಾಗುವುದಲ್ಲದೇ ಗುಂಪುಗಾರಿಕೆಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ ಅನ್ನೋದು ಶಾಸಕ ರೇಣುಕಾಚಾರ್ಯ ಅವರ ಅಭಿಪ್ರಾಯ.

BSY AMITH

ಅಷ್ಟಕ್ಕೂ ಉಪಮುಖ್ಯಮಂತ್ರಿ ಸ್ಥಾನಗಳ ಸೃಷ್ಟಿಗೆ ಯಡಿಯೂರಪ್ಪ ನವರ ವಿರೋಧ ಮೊದಲಿಂದಲೂ ಇದೆ. ಉಪಮುಖ್ಯಮಂತ್ರಿ ಸ್ಥಾನಗಳನ್ನು ಯಾರಿಗೂ ಕೊಡೋದು ಬೇಡ ಅಂತ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಯಡಿಯೂರಪ್ಪ ಹೈಕಮಾಂಡಿಗೆ ಮನವಿ ಮಾಡಿಕೊಂಡಿದ್ದರು. ಆದರೆ ಆಗ ಹೈಕಮಾಂಡ್ ಯಡಿಯೂರಪ್ಪರನ್ನು ಕಂಟ್ರೋಲ್ ಮಾಡಬೇಕೆಂಬ ಉದ್ದೇಶದಿಂದ ಅವರ ಮನವಿ ನಿರಾಕರಿಸಿ ಮೂವರಿಗೆ ಉಪಮುಖ್ಯಮಂತ್ರಿ ಮಾಡಿತ್ತು. ಆದರೆ ಈಗ ಸನ್ನಿವೇಶ ಬದಲಾಗಿದೆ. ಉಪಚುನಾವಣೆ ಬಳಿಕ ಪಕ್ಷದಲ್ಲಿ, ಸರ್ಕಾರದಲ್ಲಿ, ರಾಜ್ಯದಲ್ಲಿ ಯಡಿಯೂರಪ್ಪ ಶಕ್ತಿ, ಸಾಮರ್ಥ್ಯ ವರ್ಚಸ್ಸು ಹೆಚ್ಚಾಗಿದೆ.

ಈಗ ಯಡಿಯೂರಪ್ಪನವರನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವ ಹೈಕಮಾಂಡ್ ನಾಯಕರ ಪ್ರಯತ್ನಗಳೂ ಕೈ ಹಿಡಿಯಲ್ಲ. ಹಾಗಾಗಿ ಈಗ ಯಡಿಯೂರಪ್ಪ ಹೈಕಮಾಂಡಿಗೆ ಉಪಮುಖ್ಯಮಂತ್ರಿ ಸ್ಥಾನ ಬೇಡ ಅಂತ ಮತ್ತೊಮ್ಮೆ ಒತ್ತಾಯ ಹಾಕಿದರೆ ಅಷ್ಟು ಸುಲಭಕ್ಕೆ ಅದನ್ನು ಹೈಕಮಾಂಡ್ ನಿರಾಕರಿಸುವ ಪರಿಸ್ಥಿತಿಯಲ್ಲಿ ಇಲ್ಲ. ಆದರೂ ರಾಜ್ಯದ ಮಟ್ಟಿಗೆ ಹೈಕಮಾಂಡ್ ಯಾವಾಗಲೂ ಬಿಜೆಪಿಯಲ್ಲಿ ಸ್ಟ್ರಾಂಗೇ ಆಗಿರುವುದರಿಂದ ಅದರ ನಿರ್ಧಾರ ಏನು ಅನ್ನುವುದು ಯಾರಿಗೂ ಗೊತ್ತಿಲ್ಲ. ಸದ್ಯ ತೂಗುವ ತಕ್ಕಡಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ರದ್ದು ಮಾಡುವ ಪ್ರಸ್ತಾಪ ಇದೆ. ತಕ್ಕಡಿ ಯಾವ ಕಡೆಗೆ ವಾಲುತ್ತದೋ ಕಾದು ನೋಡಬೇಕಿದೆ.

TAGGED:bjpDeputy CMkarnatakapoliticsyeddyurappaಉಪಮುಖ್ಯಮಂತ್ರಿಕನ್ನಡ ನ್ಯೂಸ್ಕರ್ನಾಟಕಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
3 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?