ಬೀದರ್: ಕರ್ತವ್ಯ ನಿರತ ಬಸ್ ಕಂಡಕ್ಟರ್ (Bus Conductor) ಗೆ ದಿಢೀರನೆ ಎದೆನೋವು (Chest Pain) ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಸಿಗದೆ ಕಂಡಕ್ಟರ್ ಆಸ್ಪತ್ರೆಯಲ್ಲಿ ನರಳಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಆಸ್ಪತ್ರೆಯಲ್ಲಿ ನಡೆದಿದೆ.
ಬಸವಕಲ್ಯಾಣದಿಂದ ವಿಕೆ ಸಲಗರ್ ಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಗೋಪಾಲ್ ರೆಡ್ಡಿ ಎಂಬ ಬಸ್ ಕಂಡಕ್ಟರ್ ದಿಢೀರನೆ ಎದೆ ನೋವು ಕಾಣಿಸಿಕೊಂಡ ಬಳಿಕ ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ಬಸ್ ಕಂಡಕ್ಟರ್ ಕೆಲವತ್ತು ಚಿಕಿತ್ಸೆ ಸಿಗದೆ ಆಸ್ಪತ್ರೆಯಲ್ಲಿ ನರಳಾಡಿದ್ದಾರೆ.
ಬಳಿಕ ಬಸವಕಲ್ಯಾಣ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ಚಿಕಿತ್ಸೆ ಸಿಗದಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ವಾಭಿಮಾನಿ ಅನ್ನೋ ಪದ ಬಳಸಬೇಡಿ: ಸುಮಲತಾ ವಿರುದ್ಧ ರವೀಂದ್ರ ವಾಗ್ದಾಳಿ