ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಕಾವೇರಿ ರುದ್ರ ರಮಣೀಯತೆ ಕಾಣಲು ನಿರ್ಬಂಧದ ನಡುವೆಯೂ ಜನರು ಕಳ್ಳದಾರಿ ಹಿಡಿದಿದ್ದಾರೆ. ಮಹಿಳೆಯರು ಸೇರಿದಂತೆ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದವರಿಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್
ಕಳ್ಳದಾರಿ ಹಿಡಿದು ನಿರ್ಬಂಧವನ್ನು ಉಲ್ಲಂಘಿಸಿದವರ ಪೈಕಿ ಪುಂಡರಂತೆ ಕಂಡ 7-8 ಮಂದಿಗೆ ಪೊಲೀಸರು ಬಸ್ಕಿ ಹೊಡೆಸಿದ್ದಾರೆ. ಕಾನೂನು ಉಲ್ಲಂಘಿಸದಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಭರಚುಕ್ಕಿಯಲ್ಲಿ ಸೆಲ್ಫಿ ತೆಗೆಯಲು ಬಂದವರು ಬಸ್ಕಿ ಹೊಡೆದು ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಹಳೆ ಮೈಸೂರು ಜೀವನಾಡಿ KRS ಭರ್ತಿ- ನಾಳೆ ಸಿಎಂ ಬಾಗಿನ ಅರ್ಪಣೆ