ಧಾರಾಕಾರ ಮಳೆಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ (Andhra- Telangana Flood) ತತ್ತರಿಸಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ತನ್ನೂರಿನ ಜನರ ಸಂಕಷ್ಟಕ್ಕೆ ಜ್ಯೂ.ಎನ್ಟಿಆರ್ (Jr.Ntr) ನೆರವಾಗಿದ್ದಾರೆ. ಸಿಎಂ ಫಂಡ್ಗೆ ಒಂದು ಕೋಟಿ ರೂ. ದಾನ ಮಾಡಿ ನಟ ಮಾನವೀಯತೆ ಮೆರೆದಿದ್ದಾರೆ.
రెండు తెలుగు రాష్ట్రాల్లో ఇటీవల కురిసిన భారీ వర్షాల వల్ల జరుగుతున్న వరద భీభత్సం నన్ను ఎంతగానో కలచివేసింది. అతిత్వరగా ఈ విపత్తు నుండి తెలుగు ప్రజలు కోలుకోవాలని నేను ఆ దేవుడిని ప్రార్థిస్తున్నాను.
వరద విపత్తు నుండి ఉపశమనం కోసం రెండు తెలుగు రాష్ట్రాల ప్రభుత్వాలు తీసుకొనే చర్యలకి…
— Jr NTR (@tarak9999) September 3, 2024
ಭಯಂಕರ ಮಳೆಗೆ ತತ್ತರಿಸಿರುವ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಎರಡು ಕಡೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಒಟ್ಟು ಒಂದು ಕೋಟಿ ರೂ. ದೇಣಿಗೆ ನೀಡುವ ಮೂಲಕ ಕಷ್ಟದಲ್ಲಿರುವ ಜನರ ನೆರವಿಗೆ ತಾರಕ್ ರಾಮ್ ಕೈಜೋಡಿಸಿದ್ದಾರೆ. ಇದನ್ನೂ ಓದಿ:ಬಾಲಿವುಡ್ ಸಿನಿಮಾ ಶೂಟಿಂಗ್ಗಾಗಿ ಹಂಪಿಗೆ ಬರಲಿದ್ದಾರೆ ರಶ್ಮಿಕಾ ಮಂದಣ್ಣ
ಅಂದಹಾಗೆ, ಉಡುಪಿ ಜಿಲ್ಲೆಯಲ್ಲಿ ಜ್ಯೂ.ಎನ್ಟಿಆರ್, ಕೃಷ್ಣಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದರು. ಬಳಿಕ ಅಮ್ಮನ ಆಸೆ ತೀರಿಸಲು ಸೆ.2ರಂದು ಕುಂದಾಪುರದ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದರು.