Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು, ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು, ಎಚ್‍ಡಿಡಿ

Bengaluru City

12 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು, ಎಚ್‍ಡಿಡಿ

Public TV
Last updated: October 20, 2018 4:36 pm
Public TV
Share
3 Min Read
HDD SIDDARAMAIAH
SHARE

ಬೆಂಗಳೂರು: ಬರೋಬ್ಬರಿ 12 ವರ್ಷಗಳ ಬಳಿಕ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ನಗರದ ಅಶೋಕ ಹೋಟೆಲ್ ನಲ್ಲಿ ಉಪ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಜೆಡಿಎಸ್, ಕಾಂಗ್ರೆಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಇಬ್ಬರು ನಾಯಕರು ಕಾಣಿಸಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಡಿ, ರಾಜ್ಯದಲ್ಲಿ ಎರಡು ಪಕ್ಷಗಳು ಜಂಟಿ ಸರ್ಕಾರ ರಚಿಸಿದ್ದೇವೆ. 12 ವರ್ಷದ ಮೇಲೆ ನಾನು ಮತ್ತು ಸಿದ್ದರಾಮಯ್ಯನವರು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದೇವೆ. ಯಾವುದೇ ತಪ್ಪುಮಾಡಿದ್ದರು ಕ್ಷಮಿಸಿ ಎಂದು ರಾಜ್ಯದ ಜನರ ಮುಂದೆ ಹೋಗುತ್ತೇವೆ. ನಾನು ಸಿದ್ದರಾಮಯ್ಯ ಒಳ್ಳೆಯ ಸ್ನೇಹಿತರು. ಒಟ್ಟಿಗೆ ಪ್ರಚಾರ ಹೋಗಲು ಈ ಮೊದಲೇ ತೀರ್ಮಾನ ಮಾಡಿದ್ದೇವೆ. ಸದ್ಯ ನಡೆಯುತ್ತಿರುವ ಮೂರು ಲೋಕಸಭಾ ಹಾಗೂ 2 ವಿಧಾನಸಭಾ ಉಪ ಚುನಾವಣೆಯಲ್ಲಿ ಜಾತ್ಯಾತೀತ ಶಕ್ತಿಯನ್ನು ಎದುರಿಸಲು ಕರ್ನಾಟಕದಲ್ಲಿ ಒಟ್ಟಾಗಿ ಹೋಗುತ್ತೇವೆ. 5 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಟ್ಟಿಗೆ ಶಕ್ತಿ ಪ್ರದರ್ಶಿಸುತ್ತೇವೆ. ಯಾವುದೇ ಸನ್ನಿವೇಶದಲ್ಲಿ ಕಿಂಚಿತ್ತು ಅನುಮಾನಕ್ಕೆ ಎಡೆಮಾಡಿಕೊಡದೇ ಹೋರಾಟ ಮಾಡಿ ಉಪಚುನಾವಣೆ ಗೆಲ್ಲುತ್ತೇವೆ ಎಂದರು.

“ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಆಡಳಿತದಲ್ಲಿ ಒಡಕಿದೆ- ಬಿರುಕಿದೆ ಎಂದೆಲ್ಲಾ ಗುಲ್ಲು ಹಬ್ಬಿಸಲಾಗುತ್ತಿದೆ. ಬಿಜೆಪಿಗೆ ನಮ್ಮಲ್ಲಿ ಒಡಕು ಉಂಟುಮಾಡುವುದೇ ಕಾಯಕವಾಗಿದೆ. ಆದರೆ ಈ ಜಂಟಿ ಪತ್ರಿಕಾ ಗೋಷ್ಠಿಯ ಮುಖಾಂತರ ನಮ್ಮ ಒಗ್ಗಟ್ಟು ತೋರಿಸಬೇಕಾಗಿದೆ” –ದಿನೇಶ್ ಗುಂಡೂರಾವ್, @dineshgrao #KarnatakaByElection2018

— Karnataka Congress (@INCKarnataka) October 20, 2018

ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಒಟ್ಟಿಗೆ ಪ್ರಚಾರಕ್ಕೆ ಹೋಗುತ್ತೇವೆ. ಎರಡು ಪಕ್ಷದ ನಾಯಕರು ಒಟ್ಟಿಗೆ ಪ್ರಚಾರ ಮಾಡುತ್ತಾರೆ. ವೈಯಕ್ತಿಕ ಪ್ರತಿಷ್ಠೆ ಬಿಟ್ಟು ರಾಜ್ಯ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು. ಒಂದು ಕಾಲದಲ್ಲಿ ಎದುರಾಳಿಗಳಾಗಿ ಇದ್ದವರೇ ನಾವು ಒಂದಾಗಿದ್ದೇವೆ. ಆ ಮೂಲಕ ಜಾತ್ಯಾತೀತ ವ್ಯವಸ್ಥೆಯನ್ನು ಪ್ರಬಲಗೊಳಿಸುತ್ತೇವೆ. ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಸ್ವಲ್ಪ ಬೇಸರವಿದೆ. ಆದರೆ ಅವರನ್ನು ನಾವು ಮನವೊಲಿಸಿದ್ದೇವೆ. ಹಳ್ಳಿಗಳಲ್ಲಿ ಎರಡು ಗುಂಪಾಗಿ ಪಕ್ಷದ ಪರ ಹೋರಾಟ ಮಾಡಿದವರು. ಆದರೆ ದೇಶದ ದೃಷ್ಟಿಯಿಂದ ಅದೆಲ್ಲವನ್ನು ಮರೆತು ಒಟ್ಟಿಗೆ ಹೋಗಬೇಕು. ಈ ಮೂಲಕ ನಾವು ಒಂದು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ. ಈ ಮಹತ್ವದ ಕಾರ್ಯಕ್ಕೆ ಎಲ್ಲರು ಸಹಕರಿಸಬೇಕು. ರಾಜ್ಯದ ಜನರ ಕೂಡ ಸಹಕಾರ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ಈ ಉಪ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕು. ಕೈ ಮುಗಿದು ಕೇಳಿಕೊಳ್ಳುತ್ತೇವೆ, ಹಿಂದೆ ನಾವು ವಿರುದ್ಧವಾಗಿ ನಿಂತು ಸಾಕಷ್ಟು ಮಾತನಾಡಿದ್ದೇವೆ. ಅದು ಯಾವುದನ್ನು ಜನರು ಮನಸಿನಲ್ಲಿಟ್ಟುಕೊಳ್ಳಬಾರದು. ಕಾರ್ಯಕರ್ತರು ಒಂದಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕದಿಂದಲೇ ಕೋಮುವಾದಿ ಬಿ.ಜೆ.ಪಿಯನ್ನು ಸೋಲಿಸಲು ಮುನ್ನುಡಿ ಬರೆಯಬೇಕು ಎಂಬ ಉದ್ದೇಶದಿಂದ ಜಾತ್ಯಾತೀತ ಪಕ್ಷಗಳು ಒಂದುಗೂಡಬೇಕು, ಜಾತ್ಯಾತೀತ ಮತಗಳು ವಿಭಜನೆಯಾಗಬಾರದು. ಆ ಉದ್ದೇಶದಿಂದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಉಪಚುನಾವಣೆಯನ್ನು ಎದುರಿಸುತ್ತಿದ್ದೇವೆ. ಎಲ್ಲಾ 5ಸ್ಥಾನಗಳಲ್ಲೂ ಗೆಲುವು ಸಾಧಿಸಲಿದ್ದೇವೆ.@siddaramaiah pic.twitter.com/ifY0g2iVpl

— Karnataka Congress (@INCKarnataka) October 20, 2018

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೇವೇಗೌಡರು, ಕೇಂದ್ರ ಸರ್ಕಾರದಿಂದ ಹಲವು ಸಮಸ್ಯೆಗಳು ಹುಟ್ಟಿಕೊಂಡಿವೆ. ಇಡೀ ದೇಶದಲ್ಲಿ ರೈತರು ಸೇರಿದಂತೆ, ನಾನಾ ಸಮಸ್ಯೆ ಪ್ರಾರಂಭವಾಗಿವೆ. ಗುಜರಾತ್, ಕಾಶ್ಮೀರ, ಉತ್ತರ ಪ್ರದೇಶದಲ್ಲಿ ಸಮಸ್ಯೆಗಳು ಕಾಣುತ್ತಿವೆ. ಕಾಶ್ಮೀರದಲ್ಲಿ ನೆಮ್ಮದಿಯ ವಾತಾವರಣವಿಲ್ಲ. ನಾನು ಐದು ಬಾರಿ ಕಾಶ್ಮೀರಕ್ಕೆ ಭೇಟಿ ನೀಡಿದ್ದೆ. ಆದರೆ ನನ್ನ ಅವಧಿಯಲ್ಲಿ 13 ಪಕ್ಷಗಳ ಸರ್ಕಾರವಿದ್ದರೂ ಉತ್ತಮ ಆಡಳಿತ ನಡೆಸಿದ್ದೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಮಾತನಾಡಿ, ಕೋಮವಾದಿ ಪಕ್ಷವನ್ನು ಸೋಲಿಸಲು ನಾವು ಜೊತೆಯಾಗಿರುವುದು ಅನಿವಾರ್ಯ. 2019ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಮೈತ್ರಿ ನಡೆಸಿದ್ದೇವೆ. ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಅಂತ ಸರ್ಕಾರ ರಚಿಸಿದ್ದೇವೆ. ಅಂತೆಯೇ ಇಡೀ ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಟ್ಟಾಗಬೇಕು ಎಂದು ದೇವೇಗೌಡರು ಅವಿರತವಾಗಿ ಪ್ರಯತ್ನ ಪಡುತ್ತಿದ್ದಾರೆ. ಅದ್ದರಿಂದ ಈ ಚುನಾವಣೆಯಲ್ಲಿಯೂ ಒಂದಾಗಿ ಪ್ರಚಾರ ನಡೆಸುತ್ತೇವೆ. ರಾಮನಗರದಲ್ಲೂ ಪ್ರಚಾರ ನಡೆಸುತ್ತೇನೆ. ಅಕ್ಟೋಬರ್ 30 ರಂದು ಶಿವಮೊಗ್ಗದಲ್ಲಿ ಬೃಹತ್ ಜಂಟಿ ಸಭೆ ಮಾಡುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಎರಡು ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:by electioncongressformer CM SiddaramaiahFormer PM Deve GowdajdsJoint Press MeetPublic TVಉಪ ಚುನಾವಣೆಕಾಂಗ್ರೆಸ್ಜಂಟಿ ಸುದ್ದಿಗೋಷ್ಠಿಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುಮಾಜಿ ಪ್ರಧಾನಿ ದೇವೇಗೌಡಮಾಜಿ ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
2 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
2 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
2 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
2 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?