ಬೆಂಗಳೂರು: ಕುಮಾರಸ್ವಾಮಿ (HD Kumaraswamy) ಅವರು ಬಿಜೆಪಿ (BJP) ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ (HD Devegowda) ಹೇಳಿಕೆ ಬಗ್ಗೆ ಡಿಸಿಎಂ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಹನುಮ ಧ್ವಜ ತೆರವು ವೇಳೆ ಲಾಠಿಚಾರ್ಜ್ – ಕಾನೂನು ಹೋರಾಟಕ್ಕೆ ಮುಂದಾದ ಗ್ರಾಮಸ್ಥರು
- Advertisement
ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದರು.
ಇದನ್ನೂ ಓದಿ: ಕೋರ್ಟ್ ಅಂಗಳ ತಲುಪಿದ ಡಿಕೆಸು ಭಾರತ ವಿಭಜನೆ ಹೇಳಿಕೆ
- Advertisement
ಕನಕಪುರದಲ್ಲಿ ಕಲ್ಲು ಹೊಡೆಯುವವರನ್ನು ಶಾಸಕರು ಸಂಸದರನ್ನಾಗಿ ಮಾಡಿದರೆ ದೇಶ ಒಡೆಯುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿದ ಅವರು ಕನಕಪುರದ ಜನರನ್ನು ಕೇಳಿ. ಅವರು ಅವರ ಮನೆಯವರೂ ಕಲ್ಲು ಹೊಡೆಯುತ್ತಿದ್ದರಲ್ಲ. ಅದರ ಪಟ್ಟಿ ನೀಡಲಾ? ಎಲ್ಲ ಪಟ್ಟಿ ನೀಡಲು ಕಳೆದ ಅಧಿವೇಶನದಲ್ಲಿ ಎಲ್ಲಾ ಬಹಿರಂಗಕ್ಕೆ ಕಾದು ಕುಳಿತಿದ್ದೆ ಎಂದು ತಿರುಗೇಟು ನೀಡಿದರು.