ಮುಂಬೈ: ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ. ಒಗ್ಗಟ್ಟಿನಿಂದ ನಾವು ಇನ್ನೂ ಎತ್ತರಕ್ಕೆ ಏರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ (Maharashtra Assembly Election) ಬಿಜೆಪಿ (BJP) ನೇತೃತ್ವದ ಮಹಾಯುತಿ (Mahayuti) ಒಕ್ಕೂಟ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಕುರಿತು ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್ಎಸ್ಎಸ್ ಏನೇನು ಕಾರ್ಯತಂತ್ರ ಮಾಡಿತ್ತು?
ಟ್ವೀಟ್ನಲ್ಲಿ ಏನಿದೆ?
ಎನ್ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಇದನ್ನೂ ಓದಿ: 11 ಮುಸ್ಲಿಂ ಸ್ಪರ್ಧಿಗಳನ್ನು ಹಿಂದಿಕ್ಕಿ ಏಕೈಕ ಹಿಂದೂ ಅಭ್ಯರ್ಥಿ ಮುನ್ನಡೆ
ನಮ್ಮ ಮೈತ್ರಿಯು ಮಹಾರಾಷ್ಟ್ರದ ಪ್ರಗತಿಗಾಗಿ ಶ್ರಮಿಸುತ್ತದೆ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ. ವಿವಿಧ ಉಪಚುನಾವಣೆಗಳಲ್ಲಿ ಎನ್ಡಿಎ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ವಿವಿಧ ರಾಜ್ಯಗಳ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪ್ರತಿಯೊಬ್ಬ ಎನ್ಡಿಎ (NDA) ಕಾರ್ಯಕರ್ತರ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ. ಅವರು ಕಷ್ಟಪಟ್ಟು ಕೆಲಸ ಮಾಡಿ ಜನರ ನಡುವೆ ಹೋಗಿ ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ವಿವರಿಸಿದರು. ಜೈ ಮಹಾರಾಷ್ಟ್ರ. ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ: ಬೊಮ್ಮಾಯಿ
ನಮಗೆ ಬೆಂಬಲ ನೀಡಿದ ಜಾರ್ಖಂಡ್ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯಕ್ಕಾಗಿ ದುಡಿಯಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ರಾಜ್ಯದಲ್ಲಿ ಜೆಎಂಎಂ ಅಭೂತಪೂರ್ವ ಗೆಲುವು ಸಾಧಿಸಿದೆ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯತ್ನಾಳ್ ನಡೆ ಜನರ ದಾರಿ ತಪ್ಪಿಸ್ತಿದೆ, ಅದಕ್ಕೆ ನಮಗೆ ಸೋಲಾಗಿದೆ: ಶರಣು ಸಲಗರ್