Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಅಭಿವೃದ್ಧಿ Vs ಅನುದಾನ: ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡ್ಬೇಡಿ- ಸಿದ್ದರಾಮಯ್ಯ ಸೇಡಿನ ಆರೋಪಕ್ಕೆ ಕೇಂದ್ರ ತಿರುಗೇಟು

Public TV
Last updated: October 30, 2023 7:58 pm
Public TV
Share
3 Min Read
Siddaramaiah Gajendra Singh Shekhawat
SHARE

ಬೆಂಗಳೂರು: ಅಭಿವೃದ್ಧಿ ಮತ್ತು ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕದನ ಶುರುವಾಗಿದೆ. ಕೇಂದ್ರ ಸರ್ಕಾರ (Union Government) ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ತಳೆದಿದೆ ಎಂದು ಆರೋಪಿಸಿ ಕಳೆದ ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ (CM Siddaramaiah) ಇಲಾಖಾವಾರು ಅಂಕಿ ಅಂಶ ಪ್ರಕಟಿಸುತ್ತಾ ಸಂಘರ್ಷಕ್ಕೆ ಮುನ್ನುಡಿ ಬರೆದಿದ್ದಾರೆ.

ಲೋಕಸಭೆ ಚುನಾವಣೆ ಸನಿಹದಲ್ಲಿರುವ ಈ ಸಂದರ್ಭದಲ್ಲಿ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ (Karnataka) ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಉತ್ತರ ಕೊಡಿ ಮೋದಿ ಎಂದು ಪ್ರಶ್ನಿಸುತ್ತಾ ಪೋಸ್ಟರ್ ಅಭಿಯಾನ ಮಾಡತೊಡಗಿದ್ದಾರೆ. ಇದು ಸಹಜವಾಗಿಯೇ ಬಿಜೆಪಿಗರಿಗೆ (BJP) ಮುಜುಗರ ತಂದಿಟ್ಟಿತ್ತು. ಮೂರು ದಿನಗಳ ನಂತರ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ಈಗ ಆಯಾ ಇಲಾಖೆಗಳ ಸಚಿವರ ಮೂಲಕವೇ ಉತ್ತರ ಕೊಡಿಸಲು ಹೊರಟಂತಿದೆ.

ಇದರ ಮೊದಲ ಭಾಗವಾಗಿ ಕೇಂದ್ರ ಜಲಶಕ್ತಿ ಮಂತ್ರಿ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಟ್ವೀಟ್ ಮೂಲಕ ಸಿಎಂಗೆ ತಿರುಗೇಟು ನೀಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ. ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ ಎಂದು ಉತ್ತರ ನೀಡಿದ್ದಾರೆ.  ಇದನ್ನೂ ಓದಿ: ನೀವು ಕರ್ನಾಟಕದ ಚೀಫ್‌ ಲೈಯರ್‌ ಆಗಿದ್ದೀರಿ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ,
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

ಮೇಕೆದಾಟು ಯೋಜನೆಯ…

— Gajendra Singh Shekhawat (@gssjodhpur) October 30, 2023

ಸಿದ್ದರಾಮಯ್ಯ Vs ಗಜೇಂದ್ರ ಸಿಂಗ್ ಶೇಖಾವತ್
ಸಿದ್ದು ಆರೋಪ – ಕೇಂದ್ರ ಅನುಮತಿ ನೀಡದ ಕಾರಣ ಮೇಕೆದಾಟು ಯೋಜನೆ ನೆನೆಗುದಿಗೆ
ಜಲಮಂತ್ರಿ ಪ್ರತ್ಯುತ್ತರ – ಈ ಕಾರ್ಯಸೂಚಿ ಬಗ್ಗೆ ನೆರೆಯ ರಾಜ್ಯಗಳಲ್ಲಿ ಒಮ್ಮತ ಮೂಡಿಲ್ಲ. ಹೀಗಾಗಿ ಚರ್ಚೆ ಸಾಧ್ಯವಾಗಿಲ್ಲ. ಇದು ಕೇಂದ್ರ ಸರ್ಕಾರದ ತಪ್ಪಲ್ಲ

ಸಿದ್ದು ಆರೋಪ – ಕೇಂದ್ರದ ನಿರ್ಲ್ಯಕ್ಷದ ಕಾರಣ ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿದೆ. ಕುಡಿಯುವ ನೀರಿನ ವಿಚಾರದಲ್ಲೂ ಕೀಳು ರಾಜಕೀಯ ಮಾಡುತ್ತಿದೆ
ಜಲಮಂತ್ರಿ ಪ್ರತ್ಯುತ್ತರ – ಕಳಸಾ ಬಂಡೂರಿ ಯೋಜನೆ ಡಿಪಿಆರ್‌ಗೆ ಕೆಲ ಷರತ್ತುಗಳೊಂದಿಗೆ ಕೇಂದ್ರ ಜಲ ಆಯೋಗ ಅನುಮೋದಿಸಿದೆ. ನೀವು ಈ ಮಾಹಿತಿ ಮುಚ್ಚಿಟ್ಟಿದ್ದೀರಿ?

ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದೇನು?
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.

ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.

DK Shivakumar siddaramaiah mekedatu padayatra scaled

ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಸಮಗ್ರ ಯೋಜನಾ ವರದಿ(DPR) ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 2023ರ ಅಕ್ಟೋಬರ್‌ 10ರವರೆಗೆ  ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.

ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು.

 

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:bjpGajendra Singh Shekhawatsiddaramaiahunion governmentಕರ್ನಾಟಕಕಾವೇರಿಕೇಂದ್ರ ಸರ್ಕಾರಗಜೇಂದ್ರ ಸಿಂಗ್ ಶೇಖಾವತ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Actress Nabha Natesh
ಬ್ಲಾಕ್‌ ಸೀರೆಯಲ್ಲಿ ಕಲರ್‌ಫುಲ್‌ ಆಗಿ ಮಿಂಚಿದ ನಭಾ!
24 minutes ago
anurag kashyap 1
ʻಪ್ಯಾನ್‌ ಇಂಡಿಯಾʼ ದುಡ್ಡು ಮಾಡುವ ದೊಡ್ಡ ಹಗರಣ; `KGF, ಬಾಹುಬಲಿ’ ಸಿನಿಮಾ ಉದಾಹರಣೆ ಕೊಟ್ಟ ಕಶ್ಯಪ್
1 hour ago
lokesh rakesh poojari
ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ
2 hours ago
ankita amar upendra
ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ
3 hours ago

You Might Also Like

Pakistan Earthquake
Latest

ಪಾಕ್ ಮೇಲೆ ಪ್ರಕೃತಿಗೂ ಮುನಿಸು – ಮತ್ತೆ ಭೂಕಂಪ

Public TV
By Public TV
11 minutes ago
Virat Kohli
Cricket

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

Public TV
By Public TV
1 hour ago
Yatnal
Districts

ನೆಹರು, ಇಂದಿರಾ ಗಾಂಧಿ ಮಾಡಿದ ತಪ್ಪನ್ನ ಮೋದಿ ಮಾಡಬಾರದು: ಯತ್ನಾಳ್

Public TV
By Public TV
2 hours ago
PM Modi JD Vance
Latest

ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

Public TV
By Public TV
3 hours ago
Karnataka Army
Bellary

ಭಾರತ-ಪಾಕ್ ಯುದ್ಧ ಕಾರ್ಮೋಡ – ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ಯೋಧ ಕರ್ತವ್ಯಕ್ಕೆ ವಾಪಸ್

Public TV
By Public TV
3 hours ago
Rakesh Poojari
Bengaluru City

ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?