Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು

Districts

ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು

Public TV
Last updated: June 24, 2019 2:37 pm
Public TV
Share
2 Min Read
rcr grama vastavya
SHARE

ರಾಯಚೂರು: ಸಿಎಂ ಗ್ರಾಮವಾಸ್ತವ್ಯ ಮಾಡಲಿರುವ ರಾಯಚೂರಿನ ಕರೇಗುಡ್ಡ ಈಗ ಅವಸರದ ಅಭಿವೃದ್ಧಿ ಕಾಣುತ್ತಿದೆ. ಗ್ರಾಮಕ್ಕೆ ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಶರವೇಗದಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಜೂನ್ 26ರಂದು ರಾಯಚೂರಿನ ಮಾನ್ವಿಯ ಕರೇಗುಡ್ಡದಲ್ಲಿ ವ್ಯಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಭರ್ಜರಿ ಕಾಮಗಾರಿಗಳು ಆರಂಭವಾಗಿದೆ. ಜನರು ಗೋಳಾಡಿದರೂ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗ್ರಾಮಕ್ಕೆ ಸಿಎಂ ಬರಲಿದ್ದಾರೆ ಎಂದು ಅವಸರದಲ್ಲಿ ಗ್ರಾಮವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ.

rcr grama vastavya 1

ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಂತೂ ಇತಿಹಾಸದಲ್ಲೇ ಕಾಣದಷ್ಟು ಸುಂದರವಾಗಿದೆ. ಅಚ್ಚುಕಟ್ಟಾದ ಹೈಟೆಕ್ ಶೌಚಾಲಯವೂ ಅಂತಿಮ ಹಂತಕ್ಕೆ ಬಂದಿದೆ. ಯಾರೂ ಕಿವಿಗೆ ಹಾಕಿಕೊಳ್ಳದ ರಸ್ತೆಯ ಸಮಸ್ಯೆಯೂ ತೀರಿದೆ. ವಿದ್ಯುತ್ ಸಮಸ್ಯೆ ಸದ್ಯಕ್ಕೆ ನಿಂತಿದೆ. ಗ್ರಾಮಲ್ಲಿ ಎಂದೂ ಕಾಣದ ಚರಂಡಿ ಕಾಮಗಾರಿಯೂ ಭರದಿಂದ ಸಾಗುತ್ತಿದೆ.

ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಮೂರು ಬೋರ್‍ವೆಲ್ ಗಳನ್ನು ಕೊರೆಯಲಾಗಿದೆ. ಇದರಲ್ಲಿ ಎರಡು ಬೋರ್‍ವೆಲ್‍ನಲ್ಲಿ ಉತ್ತಮ ನೀರು ಸಿಕ್ಕಿದೆ. ಗ್ರಾಮದಲ್ಲಿ ಸಿಸಿ ರಸ್ತೆ, ಗ್ರಾಮದ ಹೊರಗಡೆ ಡಾಂಬರ್ ರಸ್ತೆಯ ಕಾಮಗಾರಿ ನಡೆದಿದೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ಗ್ರಾಮದ ಚಿತ್ರಣವನ್ನೇ ಇಲ್ಲಿ ಜನಪ್ರತಿನಿಧಿಗಳು ಬದಲಿಸಿದ್ದಾರೆ.

rcr grama vastavya 2

ಸುಮಾರು 22 ಎಕರೆ ಪ್ರದೇಶದಲ್ಲಿ ಮುಖ್ಯಮಂತ್ರಿ ಜನಸಂಪರ್ಕ ಸಭೆಗೆ ಹಾಗೂ ವೇದಿಕೆಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಸುತ್ತಮುತ್ತಲ ಗ್ರಾಮಗಳಿಂದ ಅಹವಾಲುಗಳನ್ನ ಹಿಡಿದು ಬರುವ ಜನರಿಗಾಗಿ ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಲಾಗುತ್ತಿದೆ. ಸಿಎಂ ವಾಸ್ತವ್ಯ ಮಾಡಲಿರುವ ಗ್ರಾಮ ಶಾಲೆಯಂತೂ ಮಧುವಣಗಿತ್ತಿಯಂತೆ ಅಲಂಕಾರಗೊಳ್ಳುತ್ತಿದೆ. ಸಿಎಂ ಬರುವ ನೆಪದಲ್ಲಾದರೂ ಗ್ರಾಮ ಅವಸರದ ಅಭಿವೃದ್ಧಿ ಕಾಣುತ್ತಿದೆಯಲ್ಲ ಎಂದು ಗ್ರಾಮಸ್ಥರು ಖುಷಿಪಟ್ಟಿದ್ದಾರೆ.

rcr grama vastavya 3

ಬಿಜೆಪಿ ಪಾದಯಾತ್ರೆ
ಸಿಎಂ ವಾಸ್ತವ್ಯಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿರುವುದು ನಿಜ. ಆದರೆ ಜ್ವಲಂತ ಸಮಸ್ಯೆಗಳ ಗೂಡಾಗಿರುವ ರಾಯಚೂರಿನಲ್ಲಿ ಮುಖ್ಯಮಂತ್ರಿಗಳಿಗೆ ಹೋರಾಟ, ಪ್ರತಿಭಟನೆಗಳ ಬಿಸಿಯೂ ಜೋರಾಗಿ ತಟ್ಟುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡುವ ಹಿನ್ನೆಲೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಪಾದಯಾತ್ರೆ ಆರಂಭಿಸಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ, ಕನಿಷ್ಠ ಈಗಲಾದರೂ ಸಿಎಂ ಜಿಲ್ಲೆಯ ಕಡಗೆ ನೋಡಲಿ ಅಂತ ಪಾದಯಾತ್ರೆ ಕೈಗೊಂಡಿದ್ದಾರೆ.

rcr grama vastavya new

ಸಿಎಂ ಮಲತಾಯಿ ಧೋರಣೆ ತೋರಿಸುತ್ತಿದ್ದು ಹೈಕ ಭಾಗಕ್ಕೆ ಅನುದಾನ ನೀಡದೇ ತಾರತಮ್ಯ ಮಾಡುತ್ತಿದ್ದಾರೆ ಅಂತ ಶಿವನಗೌಡ ನಾಯಕ್ ಆರೋಪಿಸಿದ್ದಾರೆ. ದೇವದುರ್ಗದ ಗೂಗಲ್ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ ಜೂನ್ 26 ರಂದು ಕರೇಗುಡ್ಡ ತಲುಪಲಿದ್ದಾರೆ.

rcr grama vastavya 5

ನೂರಾರು ಜನರೊಂದಿಗೆ ಪಾದಯಾತ್ರೆಗೆ ಮುಂದಾಗಿರುವ ಶಿವನಗೌಡ ತಮ್ಮ ಕ್ಷೇತ್ರದ ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಪುನರಾರಂಭವಾಗಬೇಕು, ಎನ್ ಆರ್ ಬಿಸಿ ಕಾಲುವೆ ಆಧುನಿಕರಣಗೊಳ್ಳಬೇಕು ಅನ್ನೋ ಬೇಡಿಕೆ ಸೇರಿ ನಾನಾ ಸಮಸ್ಯೆಗೆ ಸಿಎಂ ಪರಿಹಾರ ಒದಗಿಸಬೇಕು ಅಂತ ಆಗ್ರಹಿಸಿದ್ದಾರೆ. ಸುಮಾರು 86 ಕಿ.ಮೀ ಪಾದಯಾತ್ರೆ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

TAGGED:cmdevelopmental workGrama vastavyaPublic TVraichuruRepresentativesಅಭಿವೃದ್ಧಿ ಕಾರ್ಯಜನಪ್ರತಿನಿಧಿಗಳುಪಬ್ಲಿಕ್ ಟಿವಿರಾಯಚೂರುಸಿಎಂ ಗ್ರಾಮ ವಾಸ್ತವ್ಯ
Share This Article
Facebook Whatsapp Whatsapp Telegram

Cinema news

Gilli Nata 3
ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
Cinema Latest Main Post TV Shows
Gilli
BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ
Bengaluru City Cinema Latest Main Post TV Shows
Ashwini Gouda 1
BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!
Cinema Latest Main Post TV Shows
Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows

You Might Also Like

Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
7 hours ago
big bulletin 18 January 2026 part 1
Big Bulletin

ಬಿಗ್‌ ಬುಲೆಟಿನ್‌ 18 January 2026 ಭಾಗ-1

Public TV
By Public TV
7 hours ago
big bulletin 18 January 2026 part 2
Big Bulletin

ಬಿಗ್‌ ಬುಲೆಟಿನ್‌ 18 January 2026 ಭಾಗ-2

Public TV
By Public TV
7 hours ago
Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
8 hours ago
Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
9 hours ago
Kavya 01
Bengaluru City

BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?