Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು

Districts

ಅವಸರದಲ್ಲಿ ಭರ್ಜರಿ ಅಭಿವೃದ್ಧಿ – ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತಯಾರಿ ಜೋರು

Public TV
Last updated: June 24, 2019 2:37 pm
Public TV
Share
2 Min Read
rcr grama vastavya
SHARE

ರಾಯಚೂರು: ಸಿಎಂ ಗ್ರಾಮವಾಸ್ತವ್ಯ ಮಾಡಲಿರುವ ರಾಯಚೂರಿನ ಕರೇಗುಡ್ಡ ಈಗ ಅವಸರದ ಅಭಿವೃದ್ಧಿ ಕಾಣುತ್ತಿದೆ. ಗ್ರಾಮಕ್ಕೆ ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಶರವೇಗದಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಜೂನ್ 26ರಂದು ರಾಯಚೂರಿನ ಮಾನ್ವಿಯ ಕರೇಗುಡ್ಡದಲ್ಲಿ ವ್ಯಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಭರ್ಜರಿ ಕಾಮಗಾರಿಗಳು ಆರಂಭವಾಗಿದೆ. ಜನರು ಗೋಳಾಡಿದರೂ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗ್ರಾಮಕ್ಕೆ ಸಿಎಂ ಬರಲಿದ್ದಾರೆ ಎಂದು ಅವಸರದಲ್ಲಿ ಗ್ರಾಮವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ.

rcr grama vastavya 1

ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಂತೂ ಇತಿಹಾಸದಲ್ಲೇ ಕಾಣದಷ್ಟು ಸುಂದರವಾಗಿದೆ. ಅಚ್ಚುಕಟ್ಟಾದ ಹೈಟೆಕ್ ಶೌಚಾಲಯವೂ ಅಂತಿಮ ಹಂತಕ್ಕೆ ಬಂದಿದೆ. ಯಾರೂ ಕಿವಿಗೆ ಹಾಕಿಕೊಳ್ಳದ ರಸ್ತೆಯ ಸಮಸ್ಯೆಯೂ ತೀರಿದೆ. ವಿದ್ಯುತ್ ಸಮಸ್ಯೆ ಸದ್ಯಕ್ಕೆ ನಿಂತಿದೆ. ಗ್ರಾಮಲ್ಲಿ ಎಂದೂ ಕಾಣದ ಚರಂಡಿ ಕಾಮಗಾರಿಯೂ ಭರದಿಂದ ಸಾಗುತ್ತಿದೆ.

ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಮೂರು ಬೋರ್‍ವೆಲ್ ಗಳನ್ನು ಕೊರೆಯಲಾಗಿದೆ. ಇದರಲ್ಲಿ ಎರಡು ಬೋರ್‍ವೆಲ್‍ನಲ್ಲಿ ಉತ್ತಮ ನೀರು ಸಿಕ್ಕಿದೆ. ಗ್ರಾಮದಲ್ಲಿ ಸಿಸಿ ರಸ್ತೆ, ಗ್ರಾಮದ ಹೊರಗಡೆ ಡಾಂಬರ್ ರಸ್ತೆಯ ಕಾಮಗಾರಿ ನಡೆದಿದೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ಗ್ರಾಮದ ಚಿತ್ರಣವನ್ನೇ ಇಲ್ಲಿ ಜನಪ್ರತಿನಿಧಿಗಳು ಬದಲಿಸಿದ್ದಾರೆ.

rcr grama vastavya 2

ಸುಮಾರು 22 ಎಕರೆ ಪ್ರದೇಶದಲ್ಲಿ ಮುಖ್ಯಮಂತ್ರಿ ಜನಸಂಪರ್ಕ ಸಭೆಗೆ ಹಾಗೂ ವೇದಿಕೆಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಸುತ್ತಮುತ್ತಲ ಗ್ರಾಮಗಳಿಂದ ಅಹವಾಲುಗಳನ್ನ ಹಿಡಿದು ಬರುವ ಜನರಿಗಾಗಿ ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಲಾಗುತ್ತಿದೆ. ಸಿಎಂ ವಾಸ್ತವ್ಯ ಮಾಡಲಿರುವ ಗ್ರಾಮ ಶಾಲೆಯಂತೂ ಮಧುವಣಗಿತ್ತಿಯಂತೆ ಅಲಂಕಾರಗೊಳ್ಳುತ್ತಿದೆ. ಸಿಎಂ ಬರುವ ನೆಪದಲ್ಲಾದರೂ ಗ್ರಾಮ ಅವಸರದ ಅಭಿವೃದ್ಧಿ ಕಾಣುತ್ತಿದೆಯಲ್ಲ ಎಂದು ಗ್ರಾಮಸ್ಥರು ಖುಷಿಪಟ್ಟಿದ್ದಾರೆ.

rcr grama vastavya 3

ಬಿಜೆಪಿ ಪಾದಯಾತ್ರೆ
ಸಿಎಂ ವಾಸ್ತವ್ಯಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿರುವುದು ನಿಜ. ಆದರೆ ಜ್ವಲಂತ ಸಮಸ್ಯೆಗಳ ಗೂಡಾಗಿರುವ ರಾಯಚೂರಿನಲ್ಲಿ ಮುಖ್ಯಮಂತ್ರಿಗಳಿಗೆ ಹೋರಾಟ, ಪ್ರತಿಭಟನೆಗಳ ಬಿಸಿಯೂ ಜೋರಾಗಿ ತಟ್ಟುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡುವ ಹಿನ್ನೆಲೆ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಪಾದಯಾತ್ರೆ ಆರಂಭಿಸಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ, ಕನಿಷ್ಠ ಈಗಲಾದರೂ ಸಿಎಂ ಜಿಲ್ಲೆಯ ಕಡಗೆ ನೋಡಲಿ ಅಂತ ಪಾದಯಾತ್ರೆ ಕೈಗೊಂಡಿದ್ದಾರೆ.

rcr grama vastavya new

ಸಿಎಂ ಮಲತಾಯಿ ಧೋರಣೆ ತೋರಿಸುತ್ತಿದ್ದು ಹೈಕ ಭಾಗಕ್ಕೆ ಅನುದಾನ ನೀಡದೇ ತಾರತಮ್ಯ ಮಾಡುತ್ತಿದ್ದಾರೆ ಅಂತ ಶಿವನಗೌಡ ನಾಯಕ್ ಆರೋಪಿಸಿದ್ದಾರೆ. ದೇವದುರ್ಗದ ಗೂಗಲ್ ಗ್ರಾಮದಿಂದ ಪಾದಯಾತ್ರೆ ಆರಂಭಿಸಿ ಜೂನ್ 26 ರಂದು ಕರೇಗುಡ್ಡ ತಲುಪಲಿದ್ದಾರೆ.

rcr grama vastavya 5

ನೂರಾರು ಜನರೊಂದಿಗೆ ಪಾದಯಾತ್ರೆಗೆ ಮುಂದಾಗಿರುವ ಶಿವನಗೌಡ ತಮ್ಮ ಕ್ಷೇತ್ರದ ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಪುನರಾರಂಭವಾಗಬೇಕು, ಎನ್ ಆರ್ ಬಿಸಿ ಕಾಲುವೆ ಆಧುನಿಕರಣಗೊಳ್ಳಬೇಕು ಅನ್ನೋ ಬೇಡಿಕೆ ಸೇರಿ ನಾನಾ ಸಮಸ್ಯೆಗೆ ಸಿಎಂ ಪರಿಹಾರ ಒದಗಿಸಬೇಕು ಅಂತ ಆಗ್ರಹಿಸಿದ್ದಾರೆ. ಸುಮಾರು 86 ಕಿ.ಮೀ ಪಾದಯಾತ್ರೆ ಮಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

TAGGED:cmdevelopmental workGrama vastavyaPublic TVraichuruRepresentativesಅಭಿವೃದ್ಧಿ ಕಾರ್ಯಜನಪ್ರತಿನಿಧಿಗಳುಪಬ್ಲಿಕ್ ಟಿವಿರಾಯಚೂರುಸಿಎಂ ಗ್ರಾಮ ವಾಸ್ತವ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
3 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
8 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
23 minutes ago
R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
59 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
1 hour ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?