Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

Latest

ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಗೆ ಫಡ್ನವಿಸ್ ಪ್ರತಿಕ್ರಿಯೆ

Public TV
Last updated: December 2, 2019 2:09 pm
Public TV
Share
2 Min Read
Devendra Fadnavis Ananth Kumar Hegde
SHARE

ಮುಂಬೈ: ಕೇಂದ್ರ ಸರ್ಕಾರದ ಹಣವನ್ನು ವಾಪಸ್ ಕಳುಹಿಸಲು ದೇವೇಂದ್ರ ಫಡ್ನವಿಸ್ ಅವರನ್ನು 80 ಗಂಟೆಗಳ ಕಾಲ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಸಂಸದ ಅನಂತ್‍ಕುಮಾರ್ ಹೆಗ್ಡೆ ಹೇಳಿಕೆಯನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿರಸ್ಕರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 80 ಗಂಟೆಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ನಾನು ಯಾವುದೇ ಹಣಕಾಸು ನಿರ್ಧಾರವನ್ನು ಕೈಗೊಂಡಿಲ್ಲ. ಈ ಕುರಿತು ನಾನು ಗಂಭೀರವಾಗಿ ಹೇಳಲು ಬಯಸುತ್ತೇನೆ ಯಾವುದೇ ಹಣವನ್ನು ಕೇಂದ್ರ ಸರ್ಕಾರಕ್ಕೆ ಮರಳಿ ಕಳುಹಿಸಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಪರಿಶೀಲಿಸಿದರೆ ಈ ಕುರಿತು ತಿಳಿಯುತ್ತದೆ ಸ್ಪಷ್ಟಪಡಿಸಿದರು.

No policy decision was taken in that period.
कोणताही धोरणात्मक निर्णय त्या काळात घेतला नाही!#Maharashtra pic.twitter.com/w8rzhB7bEf

— Devendra Fadnavis (@Dev_Fadnavis) December 2, 2019

ಈ ಎಲ್ಲ ಹೇಳಿಕೆಗಳು ಸುಳ್ಳು, ಬುಲೆಟ್ ರೈಲು ಯೋಜನೆಯಲ್ಲಿ ಸಹ ಕೇಂದ್ರ ಸರ್ಕಾರ ನಿಯೋಜಿಸಿದ ಕಂಪನಿ ಕಾಮಗಾರಿ ನಡೆಸುತ್ತಿದೆ. ರಾಜ್ಯ ಸರ್ಕಾರ ಬುಲೆಟ್ ರೈಲಿಗೆ ಕೇವಲ ಭೂಮಿಯನ್ನು ಮಾತ್ರ ನೀಡುತ್ತಿದೆ. ಇದನ್ನು ಹೊರತು ಪಡಿಸಿದರೆ ಯಾವುದೇ ಹಣಕಾಸು ವ್ಯವಹಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ನಡೆದಿಲ್ಲ. ಹೀಗಿರುವಾಗ ಹಣ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಹೇಳಿಕೆಗಳು ಸುಳ್ಳು ಎಂದು ತಿಳಿಸಿದರು.

ನಾನು ಯಾವುದೇ ಪ್ರಮುಖ ನಿರ್ಧಾರವನ್ನು ಕೈಗೊಂಡಿಲ್ಲ, ಸರ್ಕಾರದ ವಿತ್ತ ವಿಭಾಗವನ್ನು ಪರಿಶೀಲಿಸಿದರೆ ಸತ್ಯ ತಿಳಿಯುತ್ತದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದು ಡ್ರಾಮಾ, ಕೇಂದ್ರ ಸರ್ಕಾರದ ಹಣವನ್ನು ಸಿಎಂ ಖಾತೆಯಿಂದ ಮರಳಿ ಕೇಂದ್ರಕ್ಕೆ ಕಳುಹಿಸಲು ಫಡ್ನವಿಸ್ 80 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು ಎಂದು ಸಂಸದ ಅನಂತ್‍ಕುಮಾರ್ ಹೆಗ್ಡೆ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಹೆಗ್ಡೆ ಮಾತನಾಡಿದ್ದರು.

fadnavis ajit pawar

ವಿಡಿಯೋದಲ್ಲಿ ಹೇಳಿದ್ದೇನು..?
ನಿಮಗೆಲ್ಲ ಗೊತ್ತಿದೆ. ಮಹರಾಷ್ಟ್ರದಲ್ಲಿ ಕೇವಲ 80 ತಾಸಿಗೆ ನಮ್ಮವರು ಮುಖ್ಯಮಂತ್ರಿಯಾದರು. ನಂತರ ಫಡ್ನವಿಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಯಾಕೆ ಈ ನಾಟಕ ಮಾಡಬೇಕಿತ್ತು?. ನಮಗೇನೂ ಗೊತ್ತಿರಲಿಲ್ವ. ಬಹುಮತ ಇಲ್ಲ ಎಂದು ಗೊತ್ತಿದ್ದರೂ ಯಾಕೆ ಸಿಎಂ ಆಗಲು ಹೋದ್ರು? ಇಂದು ಸಾಮಾನ್ಯವಾಗಿ ಎಲ್ಲರನ್ನೂ ಕೇಳಬಹುದಾದ ಪ್ರಶ್ನೆಯಾಗಿದೆ.

ಸುಮಾರು 40 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಸಿಎಂ ಅವರ ನಿಯಂತ್ರಣದಲ್ಲಿತ್ತು. ಕಾಂಗ್ರೆಸ್ಸಿನವರು, ಎನ್‍ಸಿಪಿ ಮತ್ತು ಶಿವಸೇನೆಯವರು ಬಂದರೆ ಖಂಡಿತವಾಗಿ ಆ 40 ಸಾವಿರ ಕೋಟಿ ರೂ. ಹಣಕ್ಕೂ ತುಳಸಿ ನೀರು ಬಿಡುತ್ತಿದ್ದರು. ಅದು ಅಭಿವೃದ್ಧಿಗೆ ಹೋಗುತ್ತಿರಲಿಲ್ಲ. ಯಾಕಂದರೆ ಅದಷ್ಟೂ ಕೇಂದ್ರ ಸರ್ಕಾರದ್ದಾಗಿತ್ತು.

HEGDE ANANTH

ಈ ಎಲ್ಲಾನು ಮುಂಚೆನೇ ಪ್ಲಾನ್ ಮಾಡಿದ್ದರು. ಹೀಗಾಗಿ ಏನಾದ್ರೂ ಆಗಲಿ ಒಂದು ದೊಡ್ಡ ನಾಟಕ ಆದರೂ ಮಾಡಲೇಬೇಕು ಅಂತ ತೀರ್ಮಾನವಾಯಿತು. ಅದಕ್ಕೋಸ್ಕರ ಸ್ವಲ್ಪ ಮಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಮಾಡಿ 15 ಗಂಟೆಯೊಳಗಡೆ ಅದಷ್ಟೂ ಗಣವನ್ನು ಎಲ್ಲೆಲ್ಲಿ ತಲುಪಿಸಬೇಕಿತ್ತೋ ಅಲ್ಲಲ್ಲಿ ತಪಿಸುವ ಮೂಲಕ ವ್ಯವಸ್ಥಿತವಾಗಿ ಅದನ್ನು ರಕ್ಷಣೆ ಮಾಡುವ ಕೆಲಸವನ್ನು ಫಡ್ನವಿಸ್ ಮಾಡಿದರು.

ಸಂಪೂರ್ಣವಾಗಿ ಹಣವನ್ನು ಕೇಂದ್ರ ಸರ್ಕಾರಕ್ಕೆ ವಾಪಸ್ ನೀಡಿದರು. ಇಲ್ಲೇ ಇದ್ದರೆ ಮುಂದಿನ ಮುಖ್ಯಮಂತ್ರಿ ಮುಂದೇನು ಮಾಡಬಹುದೆಂದು ನಿಮಗೆ ಗೊತ್ತಿದೆ ಅಲ್ವ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯ ಖಾತೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಇತ್ತು. ಈ ದುಡ್ಡನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಖಾತೆಗೆ ವರ್ಗಾ ಮಾಡಬೇಕಿತ್ತು. ಅದಕ್ಕಾಗಿ ನಾಟಕ ಮಾಡಿದರು ಎಂದು ಹೇಳಿದ್ದು, ಸದ್ಯ ಸಂಸದರ ಈ ಹೇಳಿಕೆ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಫಡ್ನವಿಸ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

TAGGED:anant kumar hegdebjpbullet trainCentral Governmentdevendra fadnavisgrantmaharashtraPublic TVಅನಂತ್‍ಕುಮಾರ್ ಹೆಗ್ಡೆಅನುದಾನಕೇಂದ್ರ ಸರ್ಕಾರದೇವೇಂದ್ರ ಫಡ್ನವಿಸ್ಪಬ್ಲಿಕ್ ಟಿವಿಬಿಜೆಪಿಬುಲೆಟ್ ಟ್ರೈನ್ಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
5 minutes ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
31 minutes ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
1 hour ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
1 hour ago
Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
2 hours ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?