ಮೈಸೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ನ ಶ್ರೀದೇವಿ ಬಳಗದ ಮಹಿಳೆಯರು ಮೈಸೂರಿನ ಶ್ರೀಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಶ್ರೀದೇವಿ ಪಾರಾಯಣ ಮಾಡಿದರು.
ಕಳೆದ ಮೂರು ತಿಂಗಳಿಂದ ನಮ್ಮ ತಂಡ ಸೌಂದರ್ಯ ಲಹರಿ ಸಂಗೀತಾಭ್ಯಾಸ ಮಾಡಿದೆ. ಅಂತಿಮವಾಗಿ ತಾಯಿ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಾರಾಯಣ ಮಾಡಲು ನಮ್ಮ ಶಾಸಕರು ಹಾಗೂ ಸಹಕಾರ ಸಚಿವರು ಅವಕಾಶ ಮಾಡಿಸಿಕೊಟ್ಟರು ಎಂದು ಮಹಿಳೆಯರು ಖುಷಿಪಟ್ಟರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ
ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ಶ್ರೀಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ನ ಯಶಸ್ವಿನಿ ಮತ್ತು ತಂಡದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?