– ಪ್ರಧಾನ ಮಂತ್ರಿ ಸಹಾಯ ನಿಧಿ ಹೆಸರಲ್ಲಿ ಟ್ರಸ್ಟ್ಗೆ ಪೋಸ್ಟ್
ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರ (Ram Mandir) ಟ್ರಸ್ಟ್ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ಮೊತ್ತದ ಚೆಕ್ ಕಳಿಸಿದ್ದಾರೆ. ಈ ಚೆಕ್ ಮೇಲೆ ದಾನಿ ಹೆಸರು, ವಿಳಾಸ, ಫೋನ್ ನಂಬರ್ ಇದೆ.
ಆದರೆ, ಈ ಚೆಕ್ ಅನ್ನು ಪ್ರಧಾನ ಮಂತ್ರಿ ಸಹಾಯ ನಿಧಿ ಹೆಸರಲ್ಲಿ ಟ್ರಸ್ಟ್ಗೆ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಚೆಕ್ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಪ್ರಧಾನಿ ಸಚಿವಾಲಯವನ್ನು ಸಂಪರ್ಕಿಸಲು ಟ್ರಸ್ಟ್ ಮುಂದಾಗಿದೆ. ಅಂದ ಹಾಗೇ, ರಾಮಮಂದಿರ ಟ್ರಸ್ಟ್ 2,600 ಕೋಟಿ ಹಣವನ್ನು ಬ್ಯಾಂಕ್ನಲ್ಲಿ ಎಫ್ಡಿ ಮಾಡಿದೆ. ಇದನ್ನೂ ಓದಿ: J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತ – ಮೆಹಬೂಬಾ ಮುಫ್ತಿ
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಅವರು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿ ಬರೆದ ಚೆಕ್ ಅನ್ನು ಅಂಚೆ ಮೂಲಕ ಟ್ರಸ್ಟ್ಗೆ ಕಳುಹಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗುರುವಾರ 2023-24ನೇ ಹಣಕಾಸು ವರ್ಷದ ಆದಾಯ ಮತ್ತು ವೆಚ್ಚದ ವಿವರಗಳನ್ನು ಬಹಿರಂಗಪಡಿಸಿದೆ. ಕಳೆದ ವರ್ಷ ದೇವಸ್ಥಾನ ನಿರ್ಮಾಣಕ್ಕೆ 776 ಕೋಟಿ ರೂ., ದೇವಸ್ಥಾನಕ್ಕೆ 540 ಕೋಟಿ ರೂ., ಹಾಗೂ ಇತರೆ ವೆಚ್ಚಕ್ಕೆ 136 ಕೋಟಿ ವೆಚ್ಚ ಮಾಡಲಾಗಿದೆ ಎಂದು ವಿವರಿಸಿದೆ. ಸಭೆಯ ಅಧ್ಯಕ್ಷತೆಯನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ವಹಿಸಿದ್ದರು. ಇಡೀ ದೇವಾಲಯ ನಿರ್ಮಾಣಕ್ಕೆ ಈವರೆಗೆ 1,850 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ವಿವರಿಸಿದರು. ಈ ಆರ್ಥಿಕ ವರ್ಷದಲ್ಲಿ 850 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: New Delhi| ಡಿಜಿಟಲ್ ಜಾಹೀರಾತು ಫಲಕದಲ್ಲಿ ಪ್ರಸಾರವಾಯ್ತು ಸೆಕ್ಸ್ ವೀಡಿಯೋ – ಮುಂದೇನಾಯ್ತು?
ಕಳೆದ ಆರ್ಥಿಕ ವರ್ಷದಲ್ಲಿ 363.34 ಕೋಟಿ ರೂ. ಬ್ಯಾಂಕ್ ಬಡ್ಡಿ ರೂಪದಲ್ಲಿ ಬಂದಿದ್ದು, 58 ಕೋಟಿ ರೂ. ಹುಂಡಿ ಮೂಲಕ 24.50 ಕೋಟಿ ರೂ., ಆನ್ಲೈನ್ ಮೂಲಕ 71 ಕೋಟಿ ರೂ. ಅನಿವಾಸಿ ಭಾರತೀಯರಿಂದ 10.43 ಕೋಟಿ ದೇಣಿಗೆ ಬಂದಿದೆ. ದೇವಸ್ಥಾನದ ಹೆಸರಿನಲ್ಲಿ ಬ್ಯಾಂಕ್ ಖಾತೆಯಲ್ಲಿ ಎಫ್ಡಿ ರೂಪದಲ್ಲಿ 2,600 ಕೋಟಿ ರೂ. ಇದೆ ಎಂದು ಚಂಪತ್ರಾಯ್ ಬಹಿರಂಗಪಡಿಸಿದ್ದಾರೆ. 900 ಕೆಜಿ ಬೆಳ್ಳಿ ಹಾಗೂ 20 ಕೆಜಿ ಚಿನ್ನವನ್ನು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ಗೆ ಕಳುಹಿಸಲಾಗಿದೆ.