ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
- Advertisement 2
ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಭಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಬರೆದುಕೊಂಡಿದ್ದನು.
- Advertisement 3
A terrorist belonging to the Hindu extremist group #BajrangDal, which carried out a wave of terrorist attacks against Muslims in Tripura in November, was killed in Karnataka – last night.
— CJ Werleman (@cjwerleman) February 21, 2022
- Advertisement 4
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ್ ಸೂದ್, ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ. ಹತ್ಯೆಯಾದ ವ್ಯಕ್ತಿಗೆ ಭಯೋತ್ಪಾದನೆ ಅಥವಾ ತ್ರಿಪುರ ಹಿಂಸಾಚಾರದೊಂದಿಗೆ ಯಾವುದೇ ಸಂಬಂಧವಿಲ್ಲ. ಈ ವ್ಯಕ್ತಿಯ ಸಾವಿಗೂ, ಭಯೋತ್ಪಾದನೆಗೂ ಹಾಗೂ ತ್ರಿಪುರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸುವ ಮೂಲಕ ವಾರ್ಲೆನ್ ಆರೋಪವನ್ನು ಡಿಜಿಪಿ ನಿರಾಕರಿಸಿದ್ದಾರೆ. ಇದನ್ನೂ ಓದಿ: ಪ್ರಕ್ಷುಬ್ಧಗೊಂಡ ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ – ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ, ಖಾಕಿ ಭದ್ರತೆ
https://twitter.com/DgpKarnataka/status/1495715992361926658
ಭಾನುವಾರ ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಫ್ರ್ಯೂ ಜಾರಿ ಮಾಡಲಾಗಿದೆ.