Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ

Bengaluru City

ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ

Public TV
Last updated: August 18, 2025 4:44 pm
Public TV
Share
4 Min Read
g.parameshwara session
SHARE

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಶೋಧ (Dharmasthala Burial Case) ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ತಿಳಿಸಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಉತ್ತರಿಸಿದ ಪರಮೇಶ್ವರ್, ಧರ್ಮಸ್ಥಳ ಒಂದು ದೇವಸ್ಥಾನಕ್ಕೆ ಕೋಟಿ ಭಕ್ತರು ಇದ್ದಾರೆ. ಸಮಾಜದಲ್ಲಿ ಅದಕ್ಕೇ ಆದ ಸ್ಥಾನ ಇದೆ. 2025ರ ಜು.3 ರಂದು ಒಬ್ಬ ವ್ಯಕ್ತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಯಿತು. ಅದರಲ್ಲಿ ನನಗೆ ನಿರಂತರ ಪ್ರಾಣ ಬೆದರಿಕೆ ಹಾಕಿ ಧರ್ಮಸ್ಥಳ ಹಾಗೂ ಸುತ್ತಮುತ್ತ ಕೊಲೆಯಾದ ಅನೇಕ ಹೆಣ್ಣುಮಕ್ಕಳ ಶವಗಳನ್ನು ನನ್ನಿಂದ ಹೂಳಿಸಲಾಗಿದೆ ಅಂತ ವ್ಯಕ್ತಿ ದೂರು ಕೊಟ್ಟ. ಪಶ್ಚಾತ್ತಾಪದಿಂದ ದೂರು ಕೊಡುತ್ತಿರುವುದಾಗಿ ಹೇಳಿದ. ಕೊಲೆಯಾದ ಅನೇಕ ಪುರುಷರು, ಅತ್ಯಾಚಾರಕ್ಕೊಳಗಾದ ಅನೇಕ ಹೆಣ್ಣುಮಕ್ಕಳ ಬಗ್ಗೆ ತನಿಖೆ ಮಾಡಿ ಅಂತ ದೂರಿನಲ್ಲಿ ಉಲ್ಲೇಖಿಸಿದ್ದ. ನಂತರ ದೂರು ಆಧರಿಸಿ ಎಫ್‌ಐಆರ್ ದಾಖಲಾಯಿತು. ನಿರಂತರ ಪ್ರಾಣ ಬೆದರಿಕೆ ಇದೆ ನನಗೆ, ಶವಗಳನ್ನು ಹೂತು ಹಾಕಿಸಿದ್ರು ನನ್ನಿಂದ ಅನ್ನೋದು ದೂರಿನ ಸಾರಾಂಶ. ಕೋರ್ಟಿನಲ್ಲೂ ಆ ವ್ಯಕ್ತಿಯಿಂದ ಹೇಳಿಕೆ ನೀಡಲಾಯಿತು. ಮ್ಯಾಜಿಸ್ಟ್ರೇಟ್ ಅವರು ತನಿಖೆಗೆ ಆದೇಶ ಮಾಡಿದರು. ಪೊಲೀಸರಿಂದ ತನಿಖೆ ಆರಂಭಿಸಲಾಯಿತು. ಈ ಮಧ್ಯೆ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ ಬಂದಿತು. ಧರ್ಮಸ್ಥಳದಲ್ಲಿ ಶವಗಳನ್ನು ಹೂಳಿರುವ ಬಗ್ಗೆ ವ್ಯಕ್ತಿಯ ಹೇಳಿಕೆ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ವರದಿಗಳು ಬರ್ತಿವೆ. ಹಾಗಾಗಿ, ಎಸ್‌ಐಟಿ ರಚಿಸಿ ಅಂತ ಮಹಿಳಾ ಆಯೋಗ ಮನವಿ ಮಾಡಿತು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು

Dharmasthala Mass Burial Case 6 hour operation in Point 13

ಇದಾದ ನಂತರ ನಾನು, ಸಿಎಂ ಚರ್ಚಿಸಿದೆವು. ನಂತರ ಎಸ್‌ಐಟಿಗೆ ಆದೇಶ ಮಾಡಿದೆವು. ಅದಕ್ಕೆ ಏನೇನು ತನಿಖೆ ಮಾಡಬೇಕು ಅಂತ ಟರ್ಮ್ಸ್ ಆಫ್ ರೆಫರೆನ್ಸ್ ನಿಗದಿ ಮಾಡಿದ್ದೇವೆ. ಜು.19 ರಂದು ಎಸ್‌ಐಟಿ ರಚಿಸಲಾಗಿದೆ. ಎಸ್‌ಐಟಿ ತಂಡದಿಂದ ಸೌಮ್ಯಲತಾ ಪತ್ರ ಬರೆದು ಬದಲಾವಣೆಗೆ ಕೋರಿದರು. ಅವರ ಬದಲಾವಣೆ ಆಗಿದೆ. ಧರ್ಮಸ್ಥಳ ಪೊಲೀಸರ ವ್ಯಾಪ್ತಿಯಲ್ಲಿ ಇದ್ದ ಕೇಸ್ ಎಸ್‌ಐಟಿಗೆ ಹೋಗುತ್ತೆ. ಎಸ್‌ಐಟಿಯವರು ಮತ್ತೆ ಆ ವ್ಯಕ್ತಿ ಕರೆದು ಹೇಳಿಕೆ ಪಡೆಯುತ್ತಾರೆ. ಅದರಲ್ಲಿ ಎಲ್ಲೆಲ್ಲಿ ಶವ ಹೂತು ಹಾಕಿದ್ದ ಅಂತ ಹೇಳ್ತಾನೆ. ಆತ ಹೇಳಿದ ಪಾಯಿಂಟ್‌ಗಳ ಮ್ಯಾಪ್ ಹಾಕಿಕೊಳ್ತಾರೆ. ಅಸ್ಥಿಪಂಜರಗಳನ್ನು ತೆಗೆಯಲು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಯುತ್ತದೆ. ಎರಡು ಜಾಗಗಳಲ್ಲಿ ಅಸ್ಥಿಪಂಜರ ಸಿಗುತ್ತದೆ. ಒಂದರಲ್ಲಿ ಅಸ್ಥಿಪಂಜರ ಸಿಗುತ್ತೆ, ಅದನ್ನು ಎಫ್‌ಎಸ್‌ಎಲ್‌ಗೆ ಕಳಿಸಿಕೊಡ್ತಾರೆ. ಎರಡನೇ ಜಾಗದಲ್ಲೂ ಒಂದಷ್ಟು ಮೂಳೆಗಳು ಸಿಗ್ತವೆ, ಅದನ್ನೂ ಎಫ್‌ಎಸ್‌ಎಲ್‌ಗೆ ಕಳಿಸ್ತಾರೆ ಎಂದು ಪರಮೇಶ್ವರ್ ವಿವರ ನೀಡಿದರು.

ಇನ್ನೊಂದಷ್ಟು ಕಡೆಯೂ ಮಣ್ಣು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿದೆ. ಅಸ್ಥಿಪಂಜರದ ಪರಿಶೀಲನೆ ಆಗಬೇಕು, ಸ್ಯಾಂಪಲ್‌ಗಳ ಅನಾಲಿಸಿಸ್ ಆಗಬೇಕು. ಆಗ ಮಾತ್ರ ತನಿಖೆ ಪ್ರಾರಂಭ ಆಗಿದೆ ಅಂತ ಹೇಳಬಹುದು. ಇನ್ನೂ ಎಫ್‌ಎಸ್‌ಎಲ್ ವರದಿ ಬಂದಿಲ್ಲ, ವರದಿ ಬಂದನಂತರ ಮುಂದಿನ ತನಿಖೆ. ಇಲ್ಲಿಯ ವರೆಗೆ ಆಗಿರೋದು ಉತ್ಖನನ ಅಷ್ಟೇ, ತನಿಖೆ ಅಲ್ಲ. ಇನ್ನು ಆ ವ್ಯಕ್ತಿ ನಿತ್ಯ ಬರ್ತಾನೆ ಹೋಗ್ತಾನೆ, ಯಾಕೆ ವಶಕ್ಕೆ ಪಡೆದಿಲ್ಲ ಅಂತ ವಿಪಕ್ಷದವರು ಪ್ರಶ್ನೆ ಮಾಡಿದ್ದಾರೆ. ವಿಟ್ನೆಸ್ ಪ್ರೊಟೆಕ್ಷನ್ ಆಕ್ಟ್ನಂತೆ ಕ್ರಮವಹಿಸಲಾಗಿದೆ. ವಿಟ್ನೆಸ್ ಪ್ರೊಟೆಕ್ಷನ್ ಆಕ್ಟ್ ಪ್ರಕಾರ ನಡೆದುಕೊಂಡಿದ್ದೇವೆ. ಹಾಗಾಗಿ ಬಂಧಿಸಿಲ್ಲ. ಪಾರದರ್ಶಕ ತನಿಖೆ, ಯಾರ ಒತ್ತಡಕ್ಕೂ ಮಣಿಯದೇ, ಯಾರ ಮಧ್ಯಪ್ರವೇಶ ಇಲ್ಲದೇ ತನಿಖೆ ನಡೀತಿದೆ. ಇನ್ನೂ ಎಷ್ಟು ಅಗೆಯುತ್ತೀರಿ ಅಂತ ಹಲವರು ಕೇಳ್ತಿದ್ದಾರೆ. ಮುಂದೆಯೂ ಗುಂಡಿ ಅಗೆಯಬೇಕಾ ಬೇಡವಾ ಅಂತ ಸರ್ಕಾರ ತೀರ್ಮಾನ ಮಾಡಲ್ಲ, ಎಸ್‌ಐಟಿ ತೀರ್ಮಾನ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

Dharmasthala Mass Burial Case 6 locals likely to come forward on behalf of the witness

ಮುಂದಿನ ತನಿಖೆ ಅಥವಾ ಗುಂಡಿ ಅಗೆಯುವ ಬಗ್ಗೆ ಈಗ ಸಂಗ್ರಹಿಸಿರುವ ಸ್ಯಾಂಪಲ್‌ಗಳ ವರದಿ ಆಧರಿಸಿ ತೀರ್ಮಾನ. ಎಫ್‌ಎಸ್‌ಎಲ್ ವರದಿ ಬರೋವರೆಗೂ ಉತ್ಖನನ ತಾತ್ಕಾಲಿಕ ಸ್ಥಗಿತ ಆಗಿದೆ. ಇದು ಎಸ್‌ಐಟಿ ತೀರ್ಮಾನ. ಎಫ್‌ಎಸ್‌ಎಲ್‌ಗೆ ಕಳಿಸಿರುವ ಸ್ಯಾಂಪಲ್‌ಗಳ ವರದಿ ಬಂದ ನಂತರ ಮುಂದಿನ ಹಂತದ ತನಿಖೆ ಎಂದು ತಿಳಿಸಿದರು.

ಬಹಳ ಜನ ಊಹೆ ಮಾಡಿ ಮಾತಾಡ್ತಾರೆ, ಊಹೆ ಮಾಡಿ ಬರೀತಿದ್ದಾರೆ ಇದಾಗಬಾರದು. ವಿಪಕ್ಷ ಸದಸ್ಯರು ಎಸ್‌ಐಟಿಗೆ ಕೆಲವರು ಸ್ವಾಗತ ಮಾಡಿದರು. ಕೆಲವರು ವಿರೋಧಿಸಿದರು. ಆದರೆ, ಹದಿನೈದು ದಿನದ ನಂತರ ಏಕಾಏಕಿ ವಿಪಕ್ಷದವರು ಈ ವಿಚಾರ ತೆಗೆದುಕೊಂಡು ಬೇರೆ ಬೇರೆ ವ್ಯಾಖ್ಯಾನ ಮಾಡ್ತಿದ್ದಾರೆ. ಅವರ ಉದ್ದೇಶ ಏನು? ತನಿಖೆಯೇ ಆಗಬಾರದು ಅಂತನಾ? ಆರೋಪ ಸುಳ್ಳಾದ್ರೆ ಧರ್ಮಸ್ಥಳ ಮೇಲೆ ಗೌರವ ಹೆಚ್ಚಾಗುತ್ತೆ, ಭಕ್ತರು ಹೆಚ್ಚಾಗ್ತಾರೆ. ಆರೋಪ ಸಾಬೀತಾದರೆ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಕ್ಕಂತಾಗುತ್ತೆ. ಸತ್ಯ ಹೊರಗೆ ಬರಲಿ. ಇದರಲ್ಲಿ ರಾಜಕೀಯ ಬೆರೆಸೋದು ಬೇಡ. ಸತ್ಯ ಹೊರಗೆ ಬಂದಾಗ ಎಲ್ಲರೂ ಒಪ್ಕೋಬೇಕಾಗುತ್ತೆ. ಹಾಗಾಗಿ, ಬೇರೆ ಬೇರೆ ವ್ಯಾಖ್ಯಾನ ಬೇಡ ಎಂದು ಮನವಿ ಮಾಡಿದರು.

ಪ್ರಕರಣದ ತನಿಖೆ ನಡೀತಿದೆ. ಮಧ್ಯಂತರ ವರದಿ ನಮಗೆ ಕೊಟ್ಟಿಲ್ಲ. ಮಧ್ಯಂತರ ವರದಿ ಬಂದಿದ್ದರೆ ಅದರ ಮಾಹಿತಿಯೂ ಕೊಡ್ತಿದ್ದೆ. ಸಂಪೂರ್ಣ ತನಿಖೆ ನಡೆದು ವರದಿ ಬರೋವರೆಗೂ ನಾವೂ ಎಸ್‌ಐಟಿಗೆ ಏನೂ ಸೂಚನೆ ಕೊಡಕ್ಕಾಗಲ್ಲ. ಇದಕ್ಕೆ ಹೊರತುಪಡಿಸಿ ಬೇರೆ ಬೇರೆ ವಿಚಾರ ನಾನು ಮಾತಾಡಲ್ಲ. ಅದನ್ನು ನಾವು ಬೇರೆ ಹಂತದಲ್ಲಿ ನಿರ್ವಹಿಸ್ತೇವೆ. ನಾನು ವಸ್ತುಸ್ಥಿತಿಯನ್ನು ಸದನದ ಮುಂದಿಟ್ಟಿದ್ದೇನೆ. ನಾವು ಯಾರ ಒತ್ತಡಕ್ಕೂ ಮಣಿದಿಲ್ಲ, ಯಾರದ್ದೋ ಒತ್ತಡಕ್ಕೆ ಮಣಿದು ಎಸ್‌ಐಟಿ ರಚಿಸಿಲ್ಲ. ಧರ್ಮಸ್ಥಳ ಪೊಲೀಸರಿಗೆ ತನಿಖೆ ಮಾಡಲು ಸಾಧ್ಯವಿಲ್ಲ ಅಂತ ಎಸ್‌ಐಟಿ ರಚನೆ ಎಂದು ಸ್ಪಷ್ಟಪಡಿಸಿದರು.

Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
31 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
58 minutes ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
1 hour ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
2 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
2 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?