ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ (B C Patil) ಒತ್ತಾಯಿಸಿದ್ದಾರೆ.
ಹಾವೇರಿ (Haveri) ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಉತ್ಕನನ: 2 ಕಾರ್ಡ್, ಹರಿದ ರವಿಕೆ ಪತ್ತೆ
ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.