ಬೆಂಗಳೂರು: ವಿಧಾನಸಭೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಧರ್ಮಸ್ಥಳ ಬಗ್ಗೆ ಈಗ ಬಿಜೆಪಿಯವರು ಚಳವಳಿ ಮಾಡುತ್ತಿದ್ದಾರೆ. ಧರ್ಮಸ್ಥಳ ತನಿಖೆ ಬಗ್ಗೆ ವೀರೇಂದ್ರ ಹೆಗಡೆ (Veerendra Heggade) ಅವರೇ ಸ್ವಾಗತ ಮಾಡಿದ್ದಾರೆ. ಎಸ್ಐಟಿ ರಚನೆ ಮಾಡಿದಾಗ ಬಿಜೆಪಿಗರು ಮಾತನಾಡಲೇ ಇಲ್ಲ. 15 ಜಾಗದಲ್ಲಿ ಅಗೆದು ಎರಡು ಕಡೆ ಮಾತ್ರ ಅಸ್ಥಿಪಂಜರ ಪತ್ತೆಯಾಗಿತ್ತು. 13 ಕಡೆ ಏನೂ ಸಿಗದ ಬಳಿಕ ಬಿಜೆಪಿಯವರು ಮಾತನಾಡಲು ಶುರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ – ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಅಮಿತ್ ಶಾಗೆ ಸ್ವಾಮೀಜಿಗಳಿಂದ ಪತ್ರ
ಗೃಹ ಸಚಿವ ಪರಮೇಶ್ವರ್ ಕೂಡ ಯಾವುದೇ ಸಂಖ್ಯೆ ಹೇಳದೇ ಜಾರಿಕೊಂಡಿದ್ದರೂ ಈಗ ಸಿಎಂ ಎರಡು ಕಡೆ ಸಿಕ್ಕಿದೆ, 13 ಕಡೆ ಸಿಕ್ಕಿಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ. ಆದರೆ ಸಿಎಂ ತನಿಖೆಯ ಸಾರಾಂಶದ ಬಗ್ಗೆ ಯಾವುದೇ ವಿವರಣೆ ನೀಡಲಿಲ್ಲ.