Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
Last updated: August 12, 2025 8:19 pm
Public TV
Share
2 Min Read
Dharmasthala 6
SHARE

– ತನಿಖೆಗಿಳಿದ ಮಾನವ ಹಕ್ಕುಗಳ ಆಯೋಗ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ (Dharmasthala Burials Case) ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ. ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಕಳೆದೆರಡು ವಾರಗಳಿಂದ ಎಸ್‌ಐಟಿ (SIT) ಕಾಲಿಗೆ ಚಕ್ರ ಕಟ್ಟಿಕೊಂಡು ಸಮಾಧಿ ಅಗೆದು ಶೋಧ ನಡೆಸಲಾಗುತ್ತಿದೆ.

ಅನಾಮಿಕ ಕೊಟ್ಟ ದೂರು ಸತ್ಯನಾ ಸುಳ್ಳಾ? ಎಂದು ವಿಚಾರಣೆ ಜೊತೆ ತನಿಖೆ ನಡೆಸುತ್ತಿದೆ. ಇಂದು ತೀವ್ರ ಕುತೂಹಲ ಕೆರಳಿದ್ದ ಪಾಯಿಂಟ್‌ ನಂ.13ರಲ್ಲಿ ಶೋಧ ನಡೆಸುತ್ತಿದೆ. ಮೊದಲಿಗೆ ಮೌಂಡೆಟ್‌ ಜಿಪಿಆರ್‌ ಡ್ರೋನ್‌ನಲ್ಲಿ (GPR Drone) ಶೋಧ ನಡೆಸಿದ ಬಳಿಕ ಏಕಕಾಲಕ್ಕೆ ಎರಡು ಹಿಟಾಚಿ ಬಳಸಿ ಗುಂಡಿ ಅಗೆಯಲಾಗುತ್ತಿದೆ. 20 ವರ್ಷಗಳಲ್ಲಿ ಹಿಂದೆ ಭೌಗೋಳಿಕವಾಗಿ ಬದಲಾವಣೆ ಆಗಿರುವ ಹಿನ್ನೆಲೆ, ಗುರುತು ಮಾಡಿರುವ ಪ್ರದೇಶವನ್ನ ಸಮತಟ್ಟುಗೊಳಿಸಲಾಗುತ್ತದೆ. ಬಳಿಕ ಮತ್ತೊಮ್ಮೆ ಡ್ರೋನ್‌ ಜಿಪಿಆರ್‌ ಮೂಲಕ ತಪಾಸಣೆ ನಡೆಸಿ ಶವಕ್ಕಾಗಿ ಶೋಧಿಸಲು ಎಸ್‌ಐಟಿ ಮುಂದಾಗಲಿದೆ. ಇದನ್ನೂ ಓದಿ: ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

Dharmasthala 3 1

ಎಸ್‌ಐಟಿ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಎಲ್ಲಾ ತನಿಖೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು ಮತ್ತು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಪಂಚಾಯತ್, ಠಾಣೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಆ ಕಾಲಮಾನದಲ್ಲಿ ಕೆಲಸ ಮಾಡಿದ ಎಲ್ಲರ ಸಾಕ್ಷಿಗಳ ಸಂಗ್ರಹ ನಡೆಸಲಾಗುತ್ತಿದೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

Dharmasthala 2 3

ತನಿಖೆಗಿಳಿದ ಮಾನವ ಹಕ್ಕುಗಳ ಆಯೋಗ
ಇನ್ನೂ ಜಿಪಿಆರ್ ಮೂಲಕ ಶೋಧಕಾರ್ಯ ನಡೆಯುತ್ತಿರುವಾಗಲೇ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡು ಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿಯಿದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿದ್ದಾರೆ. ಎಸ್‌ಐಟಿ, ಪೊಲೀಸ್ ಸ್ಟೇಷನ್, ದೇವಸ್ಥಾನ, ಗ್ರಾಮ ಪಂಚಾಯಿತಿಯಿಂದ ದಾಖಲೆಗಳನ್ನು ಕೇಳಿದ ಮಾನವ ಹಕ್ಕುಗಳ ಆಯೋಗ, ಸ್ವಚ್ಛತಾ ಕಾರ್ಮಿಕರಿಂದ ಹೇಳಿಕೆಗಳನ್ನ ಸಂಗ್ರಹ ಮಾಡುತ್ತಿದೆ. ಆಯೋಗ ಗೌಪ್ಯವಾಗಿ ಹಲವರ ಭೇಟಿ ಮಾಡಿ ವಿಚಾರಣೆಗೈದಿದೆ. ಮುಂದಿನ ನಾಲ್ಕೈದು ದಿನ ಧರ್ಮಸ್ಥಳದಲ್ಲಿ ಬೀಡು ಬಿಡಲಿರುವ ಮಾನವ ಹಕ್ಕುಗಳ ಆಯೋಗ ಹಲವಾರು ಆಯಾಮಗಳಲ್ಲಿ ತನಿಖೆ ನಡೆಸಿ ವರದಿ ಸಿದ್ಧಪಡಿಸಲಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

ಸ್ವಯಂಪ್ರೇರಿತ ಪ್ರಕರಣ ದಾಖಲು
ಧರ್ಮಸ್ಥಳದಲ್ಲಿ ಅನಾಮಿಕ ಶವ ಹೂತ ಕೇಸ್‌ಗೆ ಸಂಬಂಧಿಸಿದಂತೆ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕಾರ್ಯಾಚರಣೆ ನಡೆಸುತ್ತಿದ್ದು, ಎಸ್‌ಐಟಿ ಪೊಲೀಸ್ ಠಾಣೆ, ಧರ್ಮಸ್ಥಳ ಠಾಣೆಗಳಿಗೂ ಭೇಟಿ ಕೊಟ್ಟಿದೆ. ಕಳೆದ ರಾತ್ರಿ 10 ಗಂಟೆವರೆಗೂ ತನಿಖೆಯ ಅಖಾಡದಲ್ಲಿದ್ದ ಎನ್‌ಎಚ್‌ಆರ್‌ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹ ಮಾಡಿದೆ. ಈಗಾಗಲೇ ಶೋಧ ನಡೆಸಿರುವ ಪಾಯಿಂಟ್‌ಗಳಿಗೆ ಭೇಟಿ ಕೊಟ್ಟಿರುವ ತಂಡ, ಒಂದು ವಾರಗಳ ಕಾಲ ತಾಲೂಕಿನಲ್ಲಿದ್ದುಕೊಂಡು ಹಲವು ಆಯಾಮಗಳಲ್ಲಿ ತನಿಖೆ ನಡೆಸಲು ಸಿದ್ಧತೆ ನಡೆಸಿದೆ.

ಒಟ್ಟಾರೆ, ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ನಿಗೂಢ ಪ್ರಕರಣಕ್ಕೆ ಧುಮುಕಿರುವ ಮಾನವ ಹಕ್ಕುಗಳ ಆಯೋಗ ಗೌಪ್ಯವಾಗಿ ಹಲವರ ವಿಚಾರಣೆ ನಡೆಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ವಿಚಾರಣೆಗೊಳಪಡಿಸಿ ಶವಗಳ ಹೂತಿಟ್ಟ ಕೇಸ್‌ಗೆ ಅಂತ್ಯ ಹಾಡುತ್ತಾ ಕಾದುನೋಡಬೇಕಿದೆ. ಇದನ್ನೂ ಓದಿ: ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

TAGGED:dakshina kannadaDharmasthala Burials CaseDharmasthala SITdroneGPRಧರ್ಮಸ್ಥಳ ಪ್ರಕರಣಮಂಗಳೂರುಮಾನವ ಹಕ್ಕುಗಳ ಆಯೋಗ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
6 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
29 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
41 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?