Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

Bengaluru City

ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

Public TV
Last updated: August 30, 2025 4:49 pm
Public TV
Share
3 Min Read
Jayanth 3
SHARE

– ಜಯಂತ್ ಮನೆಯಲ್ಲೇ 8 ದಿನಗಳ ಕಾಲ ಹೆಣೆಯಲಾಗಿತ್ತಾ ಷಡ್ಯಂತ್ರದ ಬಲೆ?

ಮಂಗಳೂರು: ಬುರುಡೆ ಪ್ರಕರಣದಲ್ಲಿ (Dharmasthala Case) ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬುರುಡೆ ಪ್ರಕರಣದಲ್ಲಿ ರಾಜಧಾನಿ ಬೆಂಗಳೂರಿನ (Bengaluru) ನಂಟು ಬೆಸೆದುಕೊಂಡಿದೆ. ಧರ್ಮಸ್ಥಳ ಷಡ್ಯಂತ್ರಕ್ಕೆ ಬೆಂಗಳೂರಿನಲ್ಲೇ ಸ್ಕೆಚ್ ನಡೆದಿರೋದು ಬೆಳಕಿಗೆ ಬಂದಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು (SIT Officers) ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಳ್ಳಂಬೆಳಗ್ಗೆ ಚಿನ್ನಯ್ಯನನ್ನು ಮಹಜರು ಟ್ರಾವೆಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ. ಚಿನ್ನಯ್ಯ ಹೇಳಿಕೆಯಲ್ಲಿ ತಿಳಿಸಿರುವ ಕೆಲವು ಸ್ಥಳಗಳ ಮಹಜರಿಗೆ ಕರೆತರಲಾಗಿದೆ. ಆದರೆ ಆರಂಭದಲ್ಲಿ ತಮಿಳುನಾಡು, ಮಂಡ್ಯ ಕಡೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೀಗ ಪ್ರಕರಣದಲ್ಲಿ ಅತಿದೊಡ್ಡ ರಹಸ್ಯ ರಿವೀಲ್ ಆಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್

ಬೆಂಗಳೂರು ಲಿಂಕ್‌
ಧರ್ಮಸ್ಥಳ ಬರುಡೆ ಪ್ರಕರಣಕ್ಕೆ ಬೆಂಗಳೂರು ಲಿಂಕ್ ಇರೋದು ಬೆಳಕಿಗೆ ಬಂದಿದೆ. ಧರ್ಮಸ್ಥಳದ ಷಡ್ಯಂತ್ರದ ಸ್ಕೆಚ್ ಬೆಂಗಳೂರಿನಲ್ಲೇ ನಡಿದಿದ್ದು, ತಿಮರೋಡಿ ಆಪ್ತ ಜಯಂತ್ (Jayanth) ಬುರುಡೆ ಷಡ್ಯಂತ್ರದ ಸೂತ್ರಧಾರಿಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ತಿಮರೋಡಿ ಆಪ್ತ ಜಯಂತ್, ಚಿನ್ನಯ್ಯನಿಗೆ ತಲೆಬುರುಡೆ ಕೊಟ್ಟಿದ್ನಾ ಅನ್ನೋ ಅನುಮಾನ ಮೂಡಿದ್ದು, ವಿಚಾರಣೆ ವೇಳೆ ಚಿನ್ನಯ್ಯ ಜಯಂತ್ ಹೆಸರು ಬಾಯ್ಬಿಟ್ಟಿದ್ದಾನೆ. ಷಡ್ಯಂತ್ರದ ಪ್ರಮುಖ ಪಾತ್ರಧಾರಿಯೇ ಜಯಂತ್ ಎನ್ನಲಾಗ್ತಿದ್ದು, ಚಿನ್ನಯ್ಯನ ಹೇಳಿಕೆ ಆಧಾರದ ಮೇಲೆ ಬೆಂಗಳೂರಿನ ಮಲ್ಲಸಂದ್ರದಲ್ಲಿರುವ ಮನೆ ಮೇಲೆ ಎಸ್‌ಐಟಿ ರೇಡ್ ಮಾಡಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

ಚಿನ್ನಯ್ಯ ಸಮ್ಮುಖದಲ್ಲಿ ಮಲ್ಲಸಂದ್ರದಲ್ಲಿರುವ ಜಯಂತ್ ಮನೆಯಲ್ಲಿ ಮಹಜರ್ ನಡೆದಿದ್ದು, ಎಸ್‌ಐಟಿ ಇಂಚಿಂಚೂ ಶೋಧ ನಡೆಸಿದೆ. ಬಾಡಿಗೆ ಮನೆ ಹೊಂದಿರುವ ಜಯಂತ್, ಪಿತೂರಿ ಸಾಧಕರ ಕೂಟದ ಸಭೆ ನಡೆಸಿದ್ದರು ಅನ್ನೋ ಅನುಮಾನ ಇದೆ. ಇಲ್ಲೇ ಬುರುಡೆ ಗ್ಯಾಂಗ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರದ ಮಸಲತ್ತು ಹೆಣೆಯಲಾಗಿತ್ತಾ ಅನ್ನೋ ಶಂಕೆ ಇದ್ದು, ಮಸಲತ್ತಿನ ಸಭೆಯಲ್ಲಿ ಚಿನ್ನಯ್ಯ ಭಾಗಿಯಾಗಿದ್ದ ಅನ್ನೋ ಆಧಾರದಲ್ಲಿ ಸಾಕ್ಷಿಗಾಗಿ ಎಸ್‌ಐಟಿ ತಲಾಶ್ ನಡೆಸಿದೆ. ಕ್ರೈಂ ಸೀನ್ ಮರು ಸೃಷ್ಟಿಸಿ ಮನೆಯ ಮುಂಬಾಗಿಲಿನಿಂದಲೇ ಎಸ್‌ಐಟಿ ಮಹಜರು ನಡೆಸಿದೆ. ಇದನ್ನೂ ಓದಿ: SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!

8 ದಿನಗಳ ಕಾಲ ನಡೆದಿತ್ತಾ ಮಹಾ ಪ್ಲ್ಯಾನ್‌
ಮಂಗಳೂರಿಗೆ ಭೇಟಿ ಕೊಡುವ ಮುನ್ನ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಹೆಣೆಯಲಾಗಿದೆ ಎನ್ನುವ ಅನುಮಾನ ಇದೆ. ಜಯಂತ್ ಮನೆಯಲ್ಲಿಯೇ ಕುಳಿತು ನಿರಂತರ ಪ್ಲ್ಯಾನ್ ಮಾಡಿದ್ದು, ಜಡ್ಜ್ ಮುಂದೆ ಹೇಳಿಕೆ ನೀಡಲು ಸ್ಕ್ರಿಪ್ಟ್ ನೀಡಲಾಗಿತ್ತಾ ಅನ್ನೊ ಶಂಕೆಯೂ ವ್ಯಕ್ತವಾಗಿದೆ. ಮಲ್ಲಸಂದ್ರದಲ್ಲಿರುವ ಜಯಂತ್ ಬಾಡಿಗೆ ಮನೆಯಲ್ಲಿ ಚಿನ್ನಯ್ಯ ಕಳೆದ ಏಪ್ರಿಲ್‌ನಲ್ಲಿ 8 ದಿನಗಳ ಕಾಲ ಇದ್ದ. ಇದೇ ವೇಳೆ ಬುರುಡೆ ಷಡ್ಯಂತ್ರ ಹೆಣೆಯಲಾಗಿದೆ ಎನ್ನಲಾಗ್ತಿದೆ.

ಸುಜಾತ ಭಟ್‌ರನ್ನು ವಶಕ್ಕೆ ಪಡೆಯೋದು ಅನುಮಾನ
ಈ ನಡುವೆ ಸುಜಾತಾ ಭಟ್‌ಗೆ ಎಸ್‌ಐಟಿಯಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಜಾತ ಭಟ್‌ರನ್ನು ಎಸ್‌ಐಟಿ ವಶಕ್ಕೆ ಪಡೆಯೋದು ಅನುಮಾನ ಎನ್ನಲಾಗಿದೆ. ವಯಸ್ಸು ಹಾಗೂ ಅನಾರೋಗ್ಯದ ಕಾರಣ ವಶಕ್ಕೆ ಪಡೆಯದಿರಲು ತೀರ್ಮಾನಿಸಲಾಗಿದೆ. ಸುಜಾತ ಭಟ್ ಮೇಲೆ ಇರುವುದು ತಪ್ಪು ಮಾಹಿತಿ ನೀಡಿದ ಆರೋಪ. ತಪ್ಪು ಮಾಹಿತಿಯಲ್ಲೂ ತಮ್ಮದೇ ಕಥೆ ಹೇಳಿಕೊಂಡಿದ್ದಾರೆಯೇ ಹೊರತು ನೇರವಾಗಿ, ನಿರ್ದಿಷ್ಟವಾಗಿ ಯಾರ ಮೇಲೂ ಆರೋಪ ಮಾಡುತ್ತಿಲ್ಲ. ತಮ್ಮ ಸಮಸ್ಯೆಯನ್ನು ಯಾರು ಕೇಳಿಸಿಕೊಳ್ಳದಿದ್ದಾಗ ಮಗಳ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಆಗ ಸುಜಾತ ಭಟ್‌ರನ್ನ ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಬುರುಡೆ ಗ್ಯಾಂಗ್ ಮುಂದಾಗಿದೆ. ಅಲ್ಲದೇ ವಿಚಾರಣೆ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಇವರ ಕುಟುಂಬದ ಆಸ್ತಿ ಸೇರಿರುವುದು ಗೊತ್ತಾಗಿದೆ. ಅದರ ಲೆಕ್ಕದಲ್ಲಿ ಈಗ ನನಗೆ ಹಣ ಸಿಕ್ಕರೆ ನನ್ನ ಜೀವನ ನಿರ್ವಾಹಣೆಗೆ ಸಹಾಯ ಆಗುತ್ತದೆ ಎಂದು ಕಣ್ಣೀರಿಟ್ಟಿದ್ದಾರೆ. ತೀರ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಬಹುದಾದ ಪ್ರಕರಣ ಅಲ್ಲ ಎಂಬ ಕಾರಣಕ್ಕೆ ಸಧ್ಯಕ್ಕೆ ವಶಕ್ಕೆ ಪಡೆಯುವ ಅಥವ ಬಂಧನ ಮಾಡದಿರಲು ಎಸ್‌ಐಟಿ ತೀರ್ಮಾನಿಸಿದೆ.

TAGGED:bengaluruChinnayyaDharmasthala CasejayanthMahesh Shetty Thimarodysitಎಸ್‍ಐಟಿಜಯಂತ್ಧರ್ಮಸ್ಥಳ ಪ್ರಕರಣಮಹೇಶ್‌ ಶೇಟ್ಟಿ ತಿಮರೋಡಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
8 minutes ago
karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
28 minutes ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
2 hours ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
3 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?