ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ (Dharmasthala Mass Burials) ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ. ಎಸ್ಐಟಿ ತಂಡ ಶುಕ್ರವಾರ ಮಂಗಳೂರು ತಲುಪಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನ ಭೇಟಿ ಮಾಡಿದೆ.
ಶುಕ್ರವಾರ ತಡರಾತ್ರಿಯೇ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ ಎಸ್ಐಟಿ ತನಿಖಾಧಿಕಾರಿ, ಕೇಸ್ ಫೈಲ್ ಪಡೆದಿದ್ದಾರೆ.ಬೆಳ್ತಂಗಡಿಯಲ್ಲಿ ಕಚೇರಿ ತೆರದಿರೋ ಎಸ್ಐಟಿ ಇಂದೇ ತನಿಖೆಗೆ ಇಳಿಯಲಿದ್ದು, ಧರ್ಮಸ್ಥಳಕ್ಕೂ ಭೇಟಿ ನೀಡಲಿದೆ. ಇದನ್ನೂ ಓದಿ: ಥೈಲ್ಯಾಂಡ್ನಲ್ಲಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
ಕಳೆದ ಜುಲೈ 3 ರಂದು ದೂರುದಾರನ ಪರವಾಗಿ ವಕೀಲರು ಧರ್ಮಸ್ಥಳ ಪೊಲೀಸ್ ಠಾಣೆಗೆ ಆತನ ಹಸ್ತಾಕ್ಷರದ ಪ್ರತಿಯನ್ನು ಸಲ್ಲಿಸಿದ್ದರು. ಮಾರನೇ ದಿನ ಎಫ್ಐಆರ್ ದಾಖಲಾಗಿದ್ದು, ಸ್ಥಳ ಮಹಜರು ನಡೆಸಿ ದೂರುದಾರನ ಸಮ್ಮುಖದಲ್ಲಿ ಶವಗಳನ್ನ ಅಗೆದು ತೆಗೆಯಲು ಪೊಲೀಸರು ನ್ಯಾಯಾಲಯದ ಅನುಮತಿಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಪ್ರಕರಣ ತನಿಖೆಯನ್ನು ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ನಾಲ್ಕು ಐಪಿಎಸ್ ಅಧಿಕಾರಿಗಳ ಸಹಿತ ಒಟ್ಟು 20 ಮಂದಿಯ ಎಸ್ಐಟಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ಶುಕ್ರವಾರ ರಾತ್ರಿ ಮಂಗಳೂರಿಗೆ ಆಗಮಿಸಿದ ಎಸ್ಐಟಿ ತಂಡ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಡೆತ್ನೋಟ್ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ
ಇನ್ನು ಡಿಐಜಿ ಅನುಚೇತ್ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ತಡರಾತ್ರಿ ಧರ್ಮಸ್ಥಳ ಠಾಣೆಗೆ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮ ಆಗಮಿಸಿ ಕೇಸ್ ಫೈಲ್ ಪಡೆದಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್, ಪ್ರಕರಣದ ಈವರೆಗಿನ ತನಿಖಾಧಿಕಾರಿ ಸಮರ್ಥ್ ಗಾಣಿಗೇರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ
ಇಡೀ ಪ್ರಕರಣದ ತನಿಖೆಯನ್ನು ಎಸ್ಐಟಿ ಇಂದಿನಿಂದಲೇ ಆರಂಭಿಸಲಿದೆ. ಬೆಳ್ತಂಗಡಿಯಲ್ಲಿ ಕಚೇರಿ ತೆರೆದಿದ್ದು, ತನಿಖೆಗೆ ಬೇಕಾದ ಎಲ್ಲಾ ತಯಾರಿಗಳನ್ನ ಮಾಡಿಕೊಂಡಿದ್ದಾರೆ. ಪ್ರಕರಣದ ಎಲ್ಲಾ ದಾಖಲೆಗಳನ್ನ ಸಂಗ್ರಹಿಸಿದ ಅಧಿಕಾರಿಗಳು, ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೂ ಆಗಮಿಸಲಿದ್ದಾರೆ. ತನಿಖೆ ಒಂದು ಹಂತಕ್ಕೆ ಬಂದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ದೂರುದಾರನನ್ನ ಶವ ಹೂತಿಟ್ಟ ಸ್ಥಳಗಳಿಗೆ ಕರೆದುಕೊಂಡು ಹೋಗಿ ಆತನ ಸಮ್ಮುಖದಲ್ಲೇ ಮಣ್ಣು ಅಗೆದು ಶವಗಳನ್ನ ಹೊರ ತೆಗೆಯೋ ಪ್ರಕ್ರಿಯೆ ನಡೆಯಲಿದೆ. ಆತನ ದೂರಿನಂತೆ ಸುಮಾರು 20 ವರ್ಷಗಳ ಹಿಂದೆ ಶವಗಳನ್ನ ಹೂತಿಟ್ಟಿರೋದು ನಿಜವಾಗಿದ್ದರೆ ಅದರ ಅಸ್ತಿಪಂಜರಗಳು ಸಿಗೋ ಸಾಧ್ಯತೆ ಇದೆ. ಆ ಬಳಿಕ ಅದರ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ. ಇದನ್ನೂ ಓದಿ: ಆರ್ಎಸ್ಎಸ್ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ
ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿಯನ್ನ ರಚನೆ ಮಾಡಿರೋದನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅದೇ ದಿನ ಮಾಧ್ಯಮ ಪ್ರಕಟಣೆ ನೀಡಿದ್ದರು. ಇದನ್ನೂ ಓದಿ: ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ