Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಘಟನೆ ನಡೆದ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗಿದೆ: ಸಿಎಂ ಎಚ್‍ಡಿಕೆ

Public TV
Last updated: March 21, 2019 9:50 pm
Public TV
Share
3 Min Read
DWD CM HDK A
SHARE

– ಧಾರವಾಡದ ಘಟನೆ ನನ್ನ ಕಣ್ಣು ತೆರೆಸಿದೆ
– ತಡವಾಗಿ ಬಂದಿದ್ದಕ್ಕೆ ನನ್ನಿಂದ ಅಪಚಾರವಾಗಿದೆ ಏನೋ ಅನಿಸುತ್ತಿದೆ

ಧಾರವಾಡ: ನಗರದ ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 12 ಮೃತ ದೇಹಗಳನ್ನು ಹೊರತೆಗೆದಿದ್ದು, 58 ಜನರನ್ನು ರಕ್ಷಿಸಲಾಗಿದೆ. ಗುರುವಾರ ಘಟನಾ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಘಟನೆ ನಡೆದ ಮೊದಲ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗುತ್ತಿದೆ. ಈ ಅವಘಡದಲ್ಲಿ ಮೃತಪಟ್ಟವರು ಯಾರೂ ಶ್ರೀಮಂತರಲ್ಲ. ಎಲ್ಲರೂ ಬಡವರೇ. ರಕ್ಷಣಾ ಕಾರ್ಯ, ಚಿಕಿತ್ಸೆ ಸೇರಿದಂತೆ ಎಲ್ಲಾ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಗಳೇ ನಿರ್ಧಾರ ತೆಗೆದುಕೊಳ್ಳಲಿ. ಈಗಾಗಲೇ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ನೀತಿ ಸಂಹಿತೆಗೆ ಧಕ್ಕೆ ಬರದಂತೆ ಮುಖ್ಯ ಕಾರ್ಯದರ್ಶಿ ಮೂಲಕ ಪರಿಹಾರ ಕೊಡಿಸಲಾಗುವುದು ಎಂದು ತಿಳಿಸಿದರು. ಇದನ್ನು ಓದಿ: ಧಾರವಾಡ ದುರಂತ – ಮಾಜಿ ಸಚಿವ ವಿನಯ್ ಕುಲಕರ್ಣಿ ಮಾವ ಅರೆಸ್ಟ್

DWD CM

ಘಟನಾ ಸ್ಥಳಕ್ಕೆ ತಡವಾಗಿ ಬಂದಿದ್ದಕ್ಕೆ ನನ್ನಿಂದ ಅಪಚಾರವಾಗಿದೆ ಏನೋ ಅನಿಸುತ್ತಿದೆ. ಕಳಪೆ ಕಟ್ಟಡದ ಕಾಮಗಾರಿಯಿಂದ ಬಡವರು ಜೀವ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ನನ್ನ ಕಣ್ಣು ತೆರೆಸಿದೆ. ಈ ರೀತಿಯ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಲಾಗುತ್ತದೆ. ಮಹಾನಗರ ಪಾಲಿಕೆಯ ಬೇಜವಾಬ್ದಾರಿ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಕಟ್ಟಡ ನಿರ್ಮಾಣದ ಅಕ್ರಮ ಇಪ್ಪತ್ತು ವರ್ಷದಿಂದ ನಡೆದು ಬಂದಿದೆ. ಆದರೆ ನಾನು ಅಧಿಕಾರಕ್ಕೆ ಬಂದಿರುವುದೇ ಈಗ. ಹೀಗಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

DWD CM HDK

ಕಟ್ಟಡ ನಿರ್ಮಾಣಕ್ಕೂ ಮುನ್ನ ಎಷ್ಟು ಮಹಡಿಗೆ ಅನುಮತಿಗೆ ಅರ್ಜಿ ಹಾಕಿದ್ದರು? ನಿರ್ಮಾಣ ಕಾರ್ಯವು ಕಾನೂನು ಬಾಹಿರ ಆಗಿದೇಯೇ? ಕಟ್ಟಡ ಉಪಯೋಗಕ್ಕೆ ಮುಂಚೆ ಎನ್‍ಒಸಿ ನೀಡಿದಾಗ ಏನಾಗಿತ್ತು? ಇಲಾಖೆಯ ಅಧಿಕಾರಿಗಳು ಜಾಗ ಪರಿಶೀಲನೆ ಮಾಡಿದ್ದಾರೋ? ಇಲ್ಲವೋ? ಎನ್ನುವ ಕುರಿತು ತನಿಖೆಗೆ ಜಿಲ್ಲಾಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆದಿದ್ದರೆ ಅಧಿಕಾರಿಗಳನ್ನು ಒಳಗೊಂಡಂತೆ ಮಾಲೀಕರನ್ನು ಸಹ ಹೊಣೆ ಮಾಡುವುದು ನಮ್ಮ ಕರ್ತವ್ಯ. ನಿಷ್ಪಕ್ಷಪಾತ ತನಿಖೆಗೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಎನ್‌ಡಿಆರ್‌ಎಫ್‌, ಎಸ್‍ಡಿಆರ್‌ಎಫ್‌ ಹಾಗೂ ಅಗ್ನಿಶಾಮಕ ದಳದವರು ಜೀವದ ಹಂಗು ತೊರೆದು ಕಾರ್ಯಾಚರಣೆ ಮಾಡಿದ್ದಾರೆ. ನವಲಗುಂದದ ಸಿದ್ದಪ್ಪ ಎಂಬ ಅಗ್ನಿಶಾಮಕ ಸಿಬ್ಬಂದಿ 8 ಜನರನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ಮಾಡಿದವರ ಮಾಹಿತಿ ಪಡೆಯಲಾಗುವುದು. ಈ ಮೂಲಕ ಅವರಿಗೆ ಸರ್ಕಾರದ ವತಿಯಿಂದ ಒಂದು ಇನ್ಸೆಂಟಿವ್ ಕೊಡಲಿದ್ದೇವೆ. ಈ ಸಂಬಂಧ ಡಿಜಿಪಿ ಎಂ.ಎನ್ ರೆಡ್ಡಿ ಅವರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

dwd building collapse

ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ನುರಿತ ಪಡೆ ಸ್ಥಾಪಿಸಲಿದ್ದೇವೆ. ರಾಜ್ಯದ ಒಂದೊಂದು ವಿಭಾಗಕ್ಕೆ ನೂರು ಪರಿಣಿತರನ್ನು ನೇಮಕ ಮಾಡಲಾಗುವುದು. ಅದಕ್ಕಾಗಿ ವಿಶೇಷ ತರಬೇತಿ ಕೊಡಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಒತ್ತಾಯಿಸಿದ್ದಾರೆ. ಆದರೆ ಸಿಟ್ಟಿಂಗ್ ಜಡ್ಜ್ ಗಳಿಂದ ತನಿಖೆಗೆ ಭಾರೀ ವೆಚ್ಚವಾಗುತ್ತದೆ. ಅವರಿಗಾಗಿ ಕಚೇರಿ ತೆಗೆಯಬೇಕು ಅಧಿಕಾರಿಗಳನ್ನು ನೇಮಕ ಮಾಡಬೇಕು. ಅಷ್ಟೇ ಅಲ್ಲದೆ ತನಿಖೆ ವಿಳಂಬವಾಗುತ್ತದೆ. ಹೀಗಾಗಿ ಯಾವ ತನಿಖೆ ಅಗತ್ಯವೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

DWD A

ಸುಳ್ವಾಡಿ ದೇವಸ್ಥಾನದ ವಿಷ ಪ್ರಸಾದ, ಮಂಡ್ಯ ಬಸ್ ದುರಂತ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ನೀಡಿದ್ದೇವೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಅಷ್ಟು ಕೊಡಬಹುದೇ ಎಂದು ಮುಖ್ಯ ಕಾರ್ಯದರ್ಶಿಗಳು ವಿಚಾರ ಮಾಡಲಿದ್ದಾರೆ. ಈ ದುರ್ಘಟನೆಯಲ್ಲಿ ಇಲ್ಲಿಯವರೆಗೆ 12 ಜನ ಮೃತಪಟ್ಟಿದ್ದಾರೆ. 58 ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ ಎಂದರು.

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಕುಮಾರಸ್ವಾಮಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರಿಗೆ ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಚಿವ ವಿನಯ್ ಕುಲಕರ್ಣಿ, ಸಚಿವ ಸಿ.ಎಸ್.ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸಾಥ್ ನೀಡಿದರು.

DWD HDD Hospital

 

TAGGED:building collapseCM KumaraswamydharwadPublic TVಕಟ್ಟಡ ಕುಸಿತಧಾರವಾಡಪಬ್ಲಿಕ್ ಟಿವಿಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
14 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

tractor fire
Chamarajanagar

ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್‌ ಚಾಲನೆ- ನಾಲ್ವರು ಅಪಾಯದಿಂದ ಪಾರು

Public TV
By Public TV
6 hours ago
Extreme Poverty India
Latest

ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ

Public TV
By Public TV
7 hours ago
big bulletin 07 June 2025 part 2
Big Bulletin

ಬಿಗ್‌ ಬುಲೆಟಿನ್‌ 07 June 2025 ಭಾಗ-2

Public TV
By Public TV
7 hours ago
big bulletin 07 June 2025 part 1
Big Bulletin

ಬಿಗ್‌ ಬುಲೆಟಿನ್‌ 07 June 2025 ಭಾಗ-1

Public TV
By Public TV
7 hours ago
BSY Grandson Wedding CM Siddaramaiah
Bengaluru City

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
By Public TV
7 hours ago
bengaluru stambede rcb
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?