Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಘಟನೆ ನಡೆದ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗಿದೆ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಘಟನೆ ನಡೆದ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗಿದೆ: ಸಿಎಂ ಎಚ್‍ಡಿಕೆ

Dharwad

ಘಟನೆ ನಡೆದ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗಿದೆ: ಸಿಎಂ ಎಚ್‍ಡಿಕೆ

Public TV
Last updated: March 21, 2019 9:50 pm
Public TV
Share
3 Min Read
DWD CM HDK A
SHARE

– ಧಾರವಾಡದ ಘಟನೆ ನನ್ನ ಕಣ್ಣು ತೆರೆಸಿದೆ
– ತಡವಾಗಿ ಬಂದಿದ್ದಕ್ಕೆ ನನ್ನಿಂದ ಅಪಚಾರವಾಗಿದೆ ಏನೋ ಅನಿಸುತ್ತಿದೆ

ಧಾರವಾಡ: ನಗರದ ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 12 ಮೃತ ದೇಹಗಳನ್ನು ಹೊರತೆಗೆದಿದ್ದು, 58 ಜನರನ್ನು ರಕ್ಷಿಸಲಾಗಿದೆ. ಗುರುವಾರ ಘಟನಾ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಘಟನೆ ನಡೆದ ಮೊದಲ ದಿನವೇ ಯಾಕೆ ಬರಲಿಲ್ಲ ಅಂತ ನನಗೆ ಈಗ ನೋವಾಗುತ್ತಿದೆ. ಈ ಅವಘಡದಲ್ಲಿ ಮೃತಪಟ್ಟವರು ಯಾರೂ ಶ್ರೀಮಂತರಲ್ಲ. ಎಲ್ಲರೂ ಬಡವರೇ. ರಕ್ಷಣಾ ಕಾರ್ಯ, ಚಿಕಿತ್ಸೆ ಸೇರಿದಂತೆ ಎಲ್ಲಾ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಗಳೇ ನಿರ್ಧಾರ ತೆಗೆದುಕೊಳ್ಳಲಿ. ಈಗಾಗಲೇ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ನೀತಿ ಸಂಹಿತೆಗೆ ಧಕ್ಕೆ ಬರದಂತೆ ಮುಖ್ಯ ಕಾರ್ಯದರ್ಶಿ ಮೂಲಕ ಪರಿಹಾರ ಕೊಡಿಸಲಾಗುವುದು ಎಂದು ತಿಳಿಸಿದರು. ಇದನ್ನು ಓದಿ: ಧಾರವಾಡ ದುರಂತ – ಮಾಜಿ ಸಚಿವ ವಿನಯ್ ಕುಲಕರ್ಣಿ ಮಾವ ಅರೆಸ್ಟ್

DWD CM

ಘಟನಾ ಸ್ಥಳಕ್ಕೆ ತಡವಾಗಿ ಬಂದಿದ್ದಕ್ಕೆ ನನ್ನಿಂದ ಅಪಚಾರವಾಗಿದೆ ಏನೋ ಅನಿಸುತ್ತಿದೆ. ಕಳಪೆ ಕಟ್ಟಡದ ಕಾಮಗಾರಿಯಿಂದ ಬಡವರು ಜೀವ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ನನ್ನ ಕಣ್ಣು ತೆರೆಸಿದೆ. ಈ ರೀತಿಯ ಘಟನೆ ಮರುಕಳಿಸದಂತೆ ಕ್ರಮಕೈಗೊಳ್ಳಲಾಗುತ್ತದೆ. ಮಹಾನಗರ ಪಾಲಿಕೆಯ ಬೇಜವಾಬ್ದಾರಿ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಕಟ್ಟಡ ನಿರ್ಮಾಣದ ಅಕ್ರಮ ಇಪ್ಪತ್ತು ವರ್ಷದಿಂದ ನಡೆದು ಬಂದಿದೆ. ಆದರೆ ನಾನು ಅಧಿಕಾರಕ್ಕೆ ಬಂದಿರುವುದೇ ಈಗ. ಹೀಗಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

DWD CM HDK

ಕಟ್ಟಡ ನಿರ್ಮಾಣಕ್ಕೂ ಮುನ್ನ ಎಷ್ಟು ಮಹಡಿಗೆ ಅನುಮತಿಗೆ ಅರ್ಜಿ ಹಾಕಿದ್ದರು? ನಿರ್ಮಾಣ ಕಾರ್ಯವು ಕಾನೂನು ಬಾಹಿರ ಆಗಿದೇಯೇ? ಕಟ್ಟಡ ಉಪಯೋಗಕ್ಕೆ ಮುಂಚೆ ಎನ್‍ಒಸಿ ನೀಡಿದಾಗ ಏನಾಗಿತ್ತು? ಇಲಾಖೆಯ ಅಧಿಕಾರಿಗಳು ಜಾಗ ಪರಿಶೀಲನೆ ಮಾಡಿದ್ದಾರೋ? ಇಲ್ಲವೋ? ಎನ್ನುವ ಕುರಿತು ತನಿಖೆಗೆ ಜಿಲ್ಲಾಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಅಕ್ರಮ ನಡೆದಿದ್ದರೆ ಅಧಿಕಾರಿಗಳನ್ನು ಒಳಗೊಂಡಂತೆ ಮಾಲೀಕರನ್ನು ಸಹ ಹೊಣೆ ಮಾಡುವುದು ನಮ್ಮ ಕರ್ತವ್ಯ. ನಿಷ್ಪಕ್ಷಪಾತ ತನಿಖೆಗೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಎನ್‌ಡಿಆರ್‌ಎಫ್‌, ಎಸ್‍ಡಿಆರ್‌ಎಫ್‌ ಹಾಗೂ ಅಗ್ನಿಶಾಮಕ ದಳದವರು ಜೀವದ ಹಂಗು ತೊರೆದು ಕಾರ್ಯಾಚರಣೆ ಮಾಡಿದ್ದಾರೆ. ನವಲಗುಂದದ ಸಿದ್ದಪ್ಪ ಎಂಬ ಅಗ್ನಿಶಾಮಕ ಸಿಬ್ಬಂದಿ 8 ಜನರನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯ ಮಾಡಿದವರ ಮಾಹಿತಿ ಪಡೆಯಲಾಗುವುದು. ಈ ಮೂಲಕ ಅವರಿಗೆ ಸರ್ಕಾರದ ವತಿಯಿಂದ ಒಂದು ಇನ್ಸೆಂಟಿವ್ ಕೊಡಲಿದ್ದೇವೆ. ಈ ಸಂಬಂಧ ಡಿಜಿಪಿ ಎಂ.ಎನ್ ರೆಡ್ಡಿ ಅವರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

dwd building collapse

ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ನುರಿತ ಪಡೆ ಸ್ಥಾಪಿಸಲಿದ್ದೇವೆ. ರಾಜ್ಯದ ಒಂದೊಂದು ವಿಭಾಗಕ್ಕೆ ನೂರು ಪರಿಣಿತರನ್ನು ನೇಮಕ ಮಾಡಲಾಗುವುದು. ಅದಕ್ಕಾಗಿ ವಿಶೇಷ ತರಬೇತಿ ಕೊಡಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಒತ್ತಾಯಿಸಿದ್ದಾರೆ. ಆದರೆ ಸಿಟ್ಟಿಂಗ್ ಜಡ್ಜ್ ಗಳಿಂದ ತನಿಖೆಗೆ ಭಾರೀ ವೆಚ್ಚವಾಗುತ್ತದೆ. ಅವರಿಗಾಗಿ ಕಚೇರಿ ತೆಗೆಯಬೇಕು ಅಧಿಕಾರಿಗಳನ್ನು ನೇಮಕ ಮಾಡಬೇಕು. ಅಷ್ಟೇ ಅಲ್ಲದೆ ತನಿಖೆ ವಿಳಂಬವಾಗುತ್ತದೆ. ಹೀಗಾಗಿ ಯಾವ ತನಿಖೆ ಅಗತ್ಯವೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

DWD A

ಸುಳ್ವಾಡಿ ದೇವಸ್ಥಾನದ ವಿಷ ಪ್ರಸಾದ, ಮಂಡ್ಯ ಬಸ್ ದುರಂತ ಸಂದರ್ಭದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ನೀಡಿದ್ದೇವೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಅಷ್ಟು ಕೊಡಬಹುದೇ ಎಂದು ಮುಖ್ಯ ಕಾರ್ಯದರ್ಶಿಗಳು ವಿಚಾರ ಮಾಡಲಿದ್ದಾರೆ. ಈ ದುರ್ಘಟನೆಯಲ್ಲಿ ಇಲ್ಲಿಯವರೆಗೆ 12 ಜನ ಮೃತಪಟ್ಟಿದ್ದಾರೆ. 58 ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ ಎಂದರು.

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಕುಮಾರಸ್ವಾಮಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರಿಗೆ ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಚಿವ ವಿನಯ್ ಕುಲಕರ್ಣಿ, ಸಚಿವ ಸಿ.ಎಸ್.ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸಾಥ್ ನೀಡಿದರು.

DWD HDD Hospital

 

TAGGED:building collapseCM KumaraswamydharwadPublic TVಕಟ್ಟಡ ಕುಸಿತಧಾರವಾಡಪಬ್ಲಿಕ್ ಟಿವಿಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Chandrashekar Death
Crime

ದಾವಣಗೆರೆ | ಕೌಟುಂಬಿಕ ಕಲಹ – ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

Public TV
By Public TV
13 minutes ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
21 minutes ago
Karnataka State Budget 2025 Siddaramaiah
Bengaluru City

ಮಾರ್ಚ್ 6 ರಂದು ರಾಜ್ಯ ಬಜೆಟ್ ಮಂಡನೆಗೆ ಚಿಂತನೆ

Public TV
By Public TV
43 minutes ago
Swathi Shanthakumar
Bengaluru City

ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ

Public TV
By Public TV
50 minutes ago
Bheemanna Khandre Eshwar Khandre
Bidar

ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು – ತಂದೆಯ ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ

Public TV
By Public TV
60 minutes ago
Hubballi Rape Case
Crime

ರೇಪ್ ಮಾಡಿ ವಿಡಿಯೋ ಹರಿಬಿಟ್ಟ ದುರುಳರು – ಕಾಮುಕರಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಜನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?