ಒಂದು ರಾಷ್ಟ್ರ ಒಂದು ಸಂವಿಧಾನ ಅಭಿಯಾನ – ಕಣವಿಯನ್ನು ಭೇಟಿ ಮಾಡಿದ ಕೋಟಾ

Public TV
1 Min Read
collage Kota nadoja

– ಸಿದ್ದರಾಮಯ್ಯ ಟೀಕೆ ಮಾಡುವುದು ಸಹಜ

ಧಾರವಾಡ: ಒಂದು ರಾಷ್ಟ್ರ ಒಂದು ಸಂವಿಧಾನ ಅಭಿಯಾನ ಹಿನ್ನೆಲೆ ಮೀನುಗಾರಿಕೆ, ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ್ದಾರೆ.

ಸಾಹಿತಿಗಳ ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ 370 ಕಾಯಿದೆ ರದ್ದು ಮಾಡಿದ ಹಿನ್ನೆಲೆ ನಾವೆಲ್ಲ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ. ಕಾಯ್ದೆ ರದ್ಧತಿ ಹಾಗೂ ಒಂದು ರಾಷ್ಟ್ರ ಒಂದು ಧ್ವಜದ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲಿದ್ದೇವೆ ಎಂದು ತಿಳಿಸಿದರು.

Kota Srinivasa Poojary

ಈ ವೇಳೆ ಹಿಂದಿ ವಿಚಾರದಲ್ಲಿ ಅಮಿತ್ ಶಾ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಆ ವಿಚಾರದ ಬಗ್ಗೆ ಅಮಿತ್ ಶಾ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಒಂದು ಭಾಷೆಯಾಗಿ ಹಿಂದೆ ಕಲಿಯಬೇಕು ಎಂದಿದ್ದಾರೆ ಹೀಗಾಗಿ ಆ ಬಗ್ಗೆ ಗೊಂದಲ ಬೇಡ. ನಮ್ಮ ನಿಲುವಿನಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ಇರಲಿದೆ ಎಂದು ಸ್ಪಷ್ಟಪಡಿಸಿದರು.

ಉಡುಪಿ ಉಸ್ತುವಾರಿ ಕೈ ತಪ್ಪಿದೆ ಎನ್ನುವ ವಿಚಾರದ ಬಗ್ಗೆ ಮಾತನಾಡಿದ ಕೋಟಾ, ಶಾಸಕರೆಲ್ಲ ಹೋಗಿ ಸಿಎಂ ಭೇಟಿ ಮಾಡಿದ್ದಾರೆ. ಸ್ವಾಭಾವಿಕವಾಗಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಲು ಭೇಟಿ ಮಾಡುವುದು ರೂಢಿ. ಉಸ್ತುವಾರಿ ವಿಚಾರದ ಬಗ್ಗೆ ಏನು ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇವತ್ತು ಹೋದ ನಂತರ ಎಲ್ಲವನ್ನು ನೋಡಿ ಸರಿ ಮಾಡುತ್ತೇವೆ. ದೊಡ್ಡ ಜಿಲ್ಲೆಯಾಗಿರುವ ಹಿನ್ನೆಲೆ ನನಗೆ ಒಂದೇ ಜಿಲ್ಲೆ ಕೊಟ್ಟಿರಬಹುದು. ಆ ಜಿಲ್ಲೆಯ ಶಾಸಕನಾದ ಕಾರಣ ದಕ್ಷಿಣ ಕನ್ನಡ ಕೊಟ್ಟಿದ್ದಾರೆ. ಕಾರ್ಯಕರ್ತನಾಗಿ ನನ್ನ ಕೆಲಸ ನಾನು ಮಾಡುವೆ ಎಂದು ಹೇಳಿದರು.

siddaramaiah 2 1

ಸದ್ಯ 17 ಜನರ ಸಂಪುಟ ಆಗಿದೆ ಮುಂದೆ ವಿಸ್ತರಣೆಯಾದಾಗ ಮತ್ತೆ ಕೆಲವರಿಗೆ ಆದ್ಯತೆ ಕೊಡುತ್ತಾರೆ. ಸಿದ್ದರಾಮಯ್ಯ ಆಡಳಿತ ಪಕ್ಷದ ಲೋಪದೋಷ ನೋಡಿ ಟೀಕೆ ಮಾಡುವುದು ಸಹಜ. ಅವರೇನು ಹೊಗಳುತ್ತಾರೆ ಎಂದು ನಾವು ಭಾವಿಸಿಲ್ಲ. ಅವರ ಟೀಕೆಗಳಿಗೆ ತಕ್ಕ ಉತ್ತರ ಕೊಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಿ ತೋರಿಸುತ್ತೇವೆ. ಡಿಕೆಶಿ ಇಡಿ ವಿಚಾರ ಬಿಜೆಪಿಗೆ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *