ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಸಪ್ತಾಪುರ 8ನೇ ಕ್ರಾಸ್ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆಗೆ ಹೊಂದಿಕೊಂಡಿದ್ದ ತೆಂಗಿನಮರದ ಗರಿಗಳು ಮನೆ ಮೇಲೆ ಬಿದ್ದಿದ್ದವು.
- Advertisement 2
- Advertisement 3
ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ ಗೇಟ್ಗೆ ಬಡಿದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಇವರೊಬ್ಬರೇ ವಾಸಿಸ್ತಾ ಇದ್ದು, ಇದ್ದೊಬ್ಬ ಮಗಳು ಮೈಸೂರಿನಲ್ಲಿದ್ದಾರೆ. ಮೈಸೂರಿನಿಂದ ಮಗಳು ಬಂದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
- Advertisement 4
ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.