Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

Cricket

ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

Public TV
Last updated: August 3, 2019 1:12 pm
Public TV
Share
3 Min Read
dhoni pant
SHARE

ಜಮೈಕಾ: ವೆಸ್ಟ್ ಇಂಡೀಸ್ ಟೂರ್ನಿಗೆ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಎಂ.ಎಸ್ ಧೋನಿ ಅವರ ಅನುಪಸ್ಥಿತಿ ಯುವ ಆಟಗಾರ ರಿಷಬ್ ಪಂತ್‍ಗೆ ಉತ್ತಮ ಅವಕಾಶ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಮೊದಲ ಟಿ-20 ಪಂದ್ಯದ ಮುನ್ನಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ರಿಷಬ್ ಪಂತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿ ಸ್ಥಿರ ಪ್ರದರ್ಶನ ನೀಡಬೇಕು. ಧೋನಿ ಅವರ ಅನುಪಸ್ಥಿತಿಯಲ್ಲಿ ಅವರು ಚೆನ್ನಾಗಿ ಆಡಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

virat

ಎಂ.ಎಸ್ ಧೋನಿ ಅವರು ಅನುಭವ ಯಾವಾಗಲೂ ನಮ್ಮ ತಂಡಕ್ಕೆ ಬೇಕು. ಆದರೆ ಅವರ ಅನುಪಸ್ಥಿತಿ ರಿಷಬ್ ಪಂತ್ ರೀತಿಯ ಯುವ ಆಟಗಾರರಿಗೆ ಒಳ್ಳೆಯ ಅವಕಾಶ. ಇದನ್ನು ಅವರ ಬಳಸಿಕೊಂಡು ಅವರ ಸಾಮರ್ಥ್ಯವನ್ನು ಸಾಬೀತು ಮಾಡಬೇಕು. ನಮಗೆ ಗೊತ್ತು ರಿಷಬ್ ಪಂತ್ ತುಂಬಾ ಒಳ್ಳೆಯ ಆಟಗಾರ. ರಿಷಬ್ ಪಂತ್ ಕೆಳ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡಬೇಕು ಎಂದು ನಾವು ಬಯಸುತ್ತೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಎಂ.ಎಸ್.ಧೋನಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ರಿಷಬ್ ಪಂತ್ ಮುಂತಾದವರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಲ್ಲಿ ಯಾರು ಫಿನಿಶರ್ ಪಾತ್ರವನ್ನು ನಿರ್ವಹಿಸುವ ಅವಕಾಶವನ್ನು ಬಳಸಿಕೊಳ್ಳುತ್ತಾರೆ ನೋಡಬೇಕು ಎಂದು ಕೊಹ್ಲಿ ಹೇಳಿದ್ದಾರೆ.

DHONI

ಈ ಪ್ರವಾಸದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ ಮತ್ತು ಧೋನಿ ವಿಶ್ವಕಪ್ ನಂತರ 2 ತಿಂಗಳ ವಿಶ್ರಾಂತಿ ತೆಗೆದುಕೊಂಡಿದ್ದು, ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಈ ಇಬ್ಬರು ಕೆಳ ಕ್ರಮಾಂಕದ ಬ್ಯಾಟ್ಸ್‍ಮನ್‍ಗಳ ಅನುಪಸ್ಥಿತಿಯಲ್ಲಿ, ಈ ಟೂರ್ನಿಯಲ್ಲಿ ಯಾರು ಚೆನ್ನಾಗಿ ಆಡುತ್ತಾರೆ ನೋಡಬೇಕಿದೆ.

ಈ ನಿಟ್ಟಿನಲ್ಲಿ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್‍ಗಾಗಿ ಭಾರತ ತಂಡವನ್ನು ಸಿದ್ಧ ಮಾಡಲು ನಾವು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ರಿಷಭ್ ಪಂತ್‍ಗೆ ಎಲ್ಲಾ ಮೂರು ಸ್ವರೂಪಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡುತ್ತಿದ್ದೇವೆ ಎಂದು ಭಾರತೀಯ ಆಯ್ಕೆ ಅಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಸುಳಿವು ನೀಡಿದ್ದರು.

Dhoni pant

ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿ ಇಂತಿದೆ.

1. ಟಿ-20 ಸರಣಿ
* ಆಗಸ್ಟ್ 3 (ಶನಿವಾರ) ಮೊದಲ ಟಿ-20 ಫ್ಲೋರಿಡಾದ ಫೋರ್ಟ್ ಲಾಡರ್ಹಿಲ್ ಮೈದಾನ- ಸಮಯ-ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)
* ಆಗಸ್ಟ್ 4 (ಭಾನುವಾರ) ಫ್ಲೋರಿಡಾದ ಫೋರ್ಟ್ ಲಾಡರ್ಹಿಲ್ ಮೈದಾನ- ಸಮಯ, ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)
* ಆಗಸ್ಟ್ 6 (ಮಂಗಳವಾರ) ಗಯಾನಾದ ಪ್ರಾವಿಡೆನ್ಸ್ ಮೈದಾನ- ಸಮಯ-ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)

ಟಿ-20 ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

virat kohli

2. ಏಕದಿನ ಸರಣಿ
* ಆಗಸ್ಟ್ 8 (ಗುರುವಾರ) ಮೊದಲನೇ ಏಕದಿನ- ಗಯಾನಾದ ಪ್ರಾವಿಡೆನ್ಸ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)
* ಆಗಸ್ಟ್ 11 (ಭಾನುವಾರ) ಎರಡನೇ ಏಕದಿನ- ಟ್ರಿನಿಡಾಡ್‍ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)
* ಆಗಸ್ಟ್ 14 (ಬುಧವಾರ) ಮೂರನೇ ಏಕದಿನ- ಟ್ರಿನಿಡಾಡ್‍ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)

ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

virat kohli 2

3. ಟೆಸ್ಟ್ ಸರಣಿ
* ಆಗಸ್ಟ್ 22 ಗುರುವಾರ ದಿಂದ ಆಗಸ್ಟ್ 26 ಸೋಮವಾರದ ವರಗೆ 1 ನೇ ಟೆಸ್ಟ್ ಆಂಟಿಗುವಾದ ಸರ್ ವಿವಿಯನ್ ರಿಚಡ್ರ್ಸ್ ಮೈದಾನದಲ್ಲಿ
* ಆಗಸ್ಟ್ 30 ಶುಕ್ರವಾರದಿಂದ ಸೆಪ್ಟೆಂಬರ್ 03 ಮಂಗಳವಾರದ ವರೆಗೆ 2 ನೇ ಟೆಸ್ಟ್ ಜಮೈಕಾದ ಸಬಿನಾ ಪಾರ್ಕ್ ಮೈದಾನದಲ್ಲಿ

ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಉಮೇಶ್ ಯಾದವ್.

TAGGED:cricketIndia TourIndia vs West Indiesms dhoniRishabh PantTeam indiavirat kohliWest Indiesಇಂಡಿಯಾ ವರ್ಸಸ್ ವೆಸ್ಟ್ ಇಂಡೀಸ್ಎಂ ಎಸ್ ಧೋನಿಕ್ರಿಕೆಟ್ಟೀಂ ಇಂಡಿಯಾಪ್ರವಾಸಭಾರತರಿಷಬ್ ಪಂತ್ವಿರಾಟ್ ಕೊಹ್ಲಿವೆಸ್ಟ್ ಇಂಡೀಸ್‍
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
17 minutes ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
34 minutes ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
1 hour ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
2 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?