ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ಗೆ ಹಿನ್ನೆಡೆ ಆಗಿದ್ದು, ಈ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಮೇಘನಾ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.
2018ರಲ್ಲಿ ನಟಿ ಶೃತಿಹರಿಹರನ್ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಸದ್ಯ ಈ ಪ್ರಕರಣ ಕುರಿತಂತೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಮೂರು ವರ್ಷಗಳ ಬಳಿಕ ಕ್ಲೀನ್ ಚಿಟ್ ಸಿಕ್ಕಿದಂತಾಗಿದೆ. ಇದನ್ನೂ ಓದಿ: #MeToo ಪ್ರಕರಣ – ನಟಿ ಶೃತಿ ಹರಿಹರನ್ಗೆ ನೋಟಿಸ್
ಇದೇ ಖುಷಿಯಲ್ಲಿ ನಟ ಧ್ರುವ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೊಳ್ಳೆ ಬ್ಯಾಟ್ನಿಂದ ಸೊಳ್ಳೆಗಳನ್ನು ಸಾಯಿಸುತ್ತಿರುವ ಹಾಸ್ಯಕರವಾದ ವೀಡಿಯೋವೊಂದನ್ನು ಶೇರ್ ಮಾಡಿಕೊಂಡು ಸೊಳ್ಳೆ, ಕ್ರಿಮಿ, ಕೀಟ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಧರ್ಮೋ ರಕ್ಷತಿ ರಕ್ಷಿತಃ ಎಂದು ಸಹ ಬರೆದುಕೊಂಡಿದ್ದಾರೆ.
ಮತ್ತೊಂದಡೆ ಅರ್ಜುನ್ ಸರ್ಜಾ ಅವರನ್ನು ಯಾವಾಗಲೂ ಜಂಟಲ್ ಮ್ಯಾನ್ ಎಂದು ಕರೆಯುವ ನಟಿ ಮೇಘನಾ ರಾಜ್ ಕೂಡ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಜಂಟಲ್ ಮ್ಯಾನ್ ಇಸ್ ಆಲ್ವೆಸ್ ಜಂಟಲ್ ಮ್ಯಾನ್ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಸಹ್ಯವಾಗಿ ನೋಡಿ ಹಿಂಭಾಗದಿಂದ ಅಪ್ಪಿಕೊಂಡ್ರು- ಶೃತಿ ದೂರಿನಲ್ಲಿ ಬೆಚ್ಚಿ ಬೀಳೋ ಆರೋಪ
ನವೆಂಬರ್ 2015ರಲ್ಲಿ ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ವಿಸ್ಮಯ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶೃತಿ ಹರಿಹರನ್ ಆರೋಪಿಸಿದ್ದರು. ಈ ಘಟನೆ ನಡೆದ ಎರಡು ವರ್ಷಗಳ ನಂತರ ಶೃತಿ ಹರಿಹರನ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.