ಮೈಸೂರು: ಒತ್ತಡದ ರಾಜಕಾರಣಕ್ಕೆ ಮಾಜಿ ಸಂಸದ ಆರ್.ಧ್ರುವನಾರಾಯಣ್ (R.Dhruvanarayan) ಬಲಿಯಾಗಿದ್ದಾರೆ ಎಂದು ಕೊಳ್ಳೇಗಾಲ (Kollegala) ಶಾಸಕ ಎನ್.ಮಹೇಶ್ (N.Mahesh) ಬೇಸರ ವ್ಯಕ್ತಪಡಿಸಿದರು.
ಕೆಪಿಸಿಸಿ (KPCC) ರಾಜ್ಯಾಧ್ಯಕ್ಷ ಧ್ರುವನಾರಾಯಣ್ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾತನಾಡಿದ ಎನ್.ಮಹೇಶ್, ದಲಿತ ಸಮುದಾಯಕ್ಕೆ ಒತ್ತಡ ತಡೆಯುವ ಶಕ್ತಿ ಇಲ್ಲ. ಎರಡು ಬಾರಿ ಎಂಪಿ (MP) ಆಗಿದ್ದವರು. ಶಾಸಕರಾಗಲು ಇಷ್ಟೊಂದು ಒತ್ತಡ ತಗೋಬೇಕಿತ್ತಾ? ಅವರು ಕೇಳಿದ ಕಡೆ ಟಿಕೆಟ್ ಕೊಡಬೇಕಿತ್ತು ಎಂದು ಕಾಂಗ್ರೆಸ್ಗೆ ಪರೋಕ್ಷವಾಗಿ ಟಾಂಗ್ (Tong) ಕೊಟ್ಟರು. ಇದನ್ನೂ ಓದಿ: ಅಭಿವೃದ್ಧಿ ಅಂದ್ರೆ ಬೊಜ್ಜು ಕಡಿಮೆ ಮಾಡಿಕೊಳ್ಳಲು ಭಾರತ್ ಜೋಡೋ ಹೆಸರಲ್ಲಿ ವಾಕಿಂಗ್ ಮಾಡಿದಂತಲ್ಲ: ತೇಜಸ್ವಿ
ಅವರ ಪಕ್ಷದವರು ಆ ಸ್ಥಾನವನ್ನು ಅವರಿಗೆ ಬಿಟ್ಟುಕೊಡಬೇಕಿತ್ತು. ದಲಿತ ಸಮುದಾಯಕ್ಕೆ ಒತ್ತಡ ತಡೆದುಕೊಳ್ಳುವ ಶಕ್ತಿ ಇರಲ್ಲ. ಒಂದು ಎಂಎಲ್ಎ (MLA) ಸ್ಥಾನಕ್ಕೆ ಧ್ರುವನಾರಾಯಣ್ ಇಷ್ಟು ಒತ್ತಡ ತಗೊಂಡ್ರಾ ಎಂದು ಎನ್.ಮಹೇಶ್ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಧ್ರುವನಾರಾಯಣ್ ನೆನೆದು ಕಣ್ಣೀರಿಟ್ಟ ಪ್ರತಾಪ್ ಸಿಂಹ
ಇದೇ ವೇಳೆ ಮಾಜಿ ಸಚಿವೆ ಗೀತಾ ಮಹದೇವ ಪ್ರಸಾದ್ (Geetha Mahadeva Prasad) ಸೇರಿದಂತೆ ಅನೇಕರು ಆರ್.ಧ್ರುವನಾರಾಯಣ್ ಅವರ ಅಂತಿಮ ದರ್ಶನ ಪಡೆದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ಶನಿವಾರ ಹೃದಯಾಘಾತದಿಂದ (Heart Attack) ನಿಧನರಾದರು. ಹೃದಯಾಘಾತವಾದಾಗ ಅವರನ್ನು ಮೈಸೂರಿನ (Mysuru) ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟರು. ಇದನ್ನೂ ಓದಿ: ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ