ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

Public TV
2 Min Read
BJP CONGRESS FLAG

ಬೆಳಗಾವಿ: ಮರಾಠಾ (Marathas) ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ (Kannadigas) ಮರೆತರಾ ಬೆಳಗಾವಿ (Belagavi) ರಾಜಕಾರಣಿಗಳು ಎಂಬುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ ಶುರುವಾಗಿದೆ. ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರನ್ನು ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೆಳಗಾವಿ ತಾಲೂಕಿನ 3 ಕ್ಷೇತ್ರದಲ್ಲಿ ಮರಾಠಾ ಮತಗಳ ಓಲೈಕೆಗೆ ‘ಪ್ರತಿಮೆ’ ಪಾಲಿಟಿಕ್ಸ್ ನಡೆಯುತ್ತಿದೆ. ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಾ ಮತಗಳನ್ನು ಸೆಳೆಯಲು ಸ್ಥಳೀಯ ಜನಪ್ರತಿನಿಧಿಗಳು, ಶಾಸಕರು ನಾನಾ ಕಸರತ್ತು ನಡೆಸಿದ್ದಾರೆ. ಬಿಜೆಪಿ-ಕಾಂಗ್ರೆಸ್ ಮಧ್ಯೆ ಮರಾಠಾ ಮತಗಳ ಓಲೈಕೆಗೆ ಪೈಪೋಟಿ ನಡೆಯುತ್ತಿದ್ದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಗೆ ಪೈಪೋಟಿ ನಡೆಯುತ್ತಿದೆ.

LAXMI HEBBALKAR SANJAY PATIL

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಮಧ್ಯೆ ಕ್ರೆಡಿಟ್ ಫೈಟ್ ಜೋರಾಗಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಇತ್ತಿಚೆಗೆ ಬಿಜೆಪಿ ಶಾಸಕ ಅನಿಲ್ ಬೆನಕೆ ಸಂಭಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಿದ್ದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಿವಚರಿತ್ರೆ ಉದ್ಘಾಟನೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ತಯಾರಿ ಮಾಡಿಕೊಂಡಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಕಲಾಕೃತಿ ಮೂಲಕ ಪರಿಚಯಿಸುವ ಧ್ವನಿ ಬೆಳಕಿನ ಕಾರ್ಯಕ್ರಮ ಶಿವಚರಿತ್ರೆ ಉದ್ದೇಶವನ್ನು ಶಾಸಕ ಅಭಯ್ ಪಾಟೀಲ್ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

ಪೀರನವಾಡಿಯಲ್ಲಿ ಹೋರಾಟ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ವರ್ಷಗಳೇ ಕಳೆದು ಹೋದವು. ಇತ್ತ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಮೂರ್ತಿಯನ್ನು ಕಳೆದ 2008ರಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ವಿಶ್ವಗುರು ಬಸವಣ್ಣ ಪುತ್ಥಳಿ ಅಧಿಕೃತವಾಗಿ ಲೋಕಾರ್ಪಣೆ ಕಂಡಿಲ್ಲ. 2008ರಲ್ಲಿ ಅಭಯ್ ಪಾಟೀಲ್ ಶಾಸಕರಾಗಿದ್ದಾಗ ಸ್ವಂತ ಖರ್ಚಿನಲ್ಲಿ ಬಸವಣ್ಣ ಮೂರ್ತಿ ಪ್ರತಿಷ್ಠಾನೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿ 4, ರಾಜ್ಯಹೆದ್ದಾರಿ ಮಧ್ಯೆ ವೃತ್ತದಲ್ಲಿ ವಿಶ್ವಗುರು ಬಸವಣ್ಣ ಅಶ್ವಾರೂಢ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆದರೆ ಈವರೆಗೂ ಅಧಿಕೃತವಾಗಿ ಲೋಕಾರ್ಪಣೆಗೊಂಡಿಲ್ಲ.

Congress BJP

ಬೆಳಗಾವಿ ರಾಜಕಾರಣಿಗಳ ನಡೆಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ‘ಜಾನಿ ಜಾನಿ ಎಸ್ ಪಪ್ಪಾ.. ಬೆಳಗಾವಿ ಅಭಿವೃದ್ಧಿ ನೋ ಪಪ್ಪಾ.. ಇಲ್ಲಿ ಬರೀ ಮರಾಠಿಗರ ಓಲೈಕೆ ಹಾ.. ಹಾ..’ ಎಂದು ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇದೆ. ಆದರೆ ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರಿಬೇಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *