Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

Bellary

ಸಿದ್ದರಾಮಯ್ಯ ಟಾರ್ಗೆಟನ್ನು ಬಳ್ಳಾರಿ ಶಾಸಕರು ರೀಚ್ ಮಾಡಿದ್ರಾ? ಯಾವ ಶಾಸಕರ ಕ್ಷೇತ್ರದಲ್ಲಿ ಎಷ್ಟು ಲೀಡ್?

Public TV
Last updated: November 6, 2018 6:05 pm
Public TV
Share
3 Min Read
bellyary congress 2
SHARE

ಬಳ್ಳಾರಿ: ಲೋಕಸಭಾ ಉಪಚುನಾವಣೆಗೂ ಮುನ್ನ ಬಳ್ಳಾರಿ ಶಾಸಕರ ಸಭೆ ನಡೆಸಿ ಚುನಾವಣೆಯಲ್ಲಿ ಪ್ರತಿ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನೀಡಿದ್ದ ಟಾರ್ಗೆಟನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಉಗ್ರಪ್ಪ ಭಾರೀ ಅಂತರದಿಂದ ಗೆದ್ದಿದ್ದಾರೆ.

ಉಗ್ರಪ್ಪ ಅವರ ಗೆಲುವು ತಮ್ಮ ಸ್ವಕ್ಷೇತ್ರದಲ್ಲಿ ಶ್ರೀರಾಮುಲು ಅವರಿಗೆ ಭಾರೀ ಮುಖಭಂಗಕ್ಕೆ ಕಾರಣವಾಗಿದೆ. ಆದರೆ ಇದರ ಹಿಂದೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೀಡಿದ ಗುರಿಯೇ ಪ್ರಮುಖವಾಗಿ ಕೆಲಸ ಮಾಡಿದೆ ಎನ್ನಲಾಗಿದೆ. ಚುನಾವಣೆ ಮತ ಎಣಿಕೆಯ ಕೊನೆಯ 18 ಸುತ್ತಿನ ಮುಕ್ತಾಯ ಬಳಿಕ ಉಗ್ರಪ್ಪ 6,28,163 ಮತ, ಬಿಜೆಪಿ ಅಭ್ಯರ್ಥಿ ಜೆ.ಶಾಂತಾ 3,84,892 ಮತ ಪಡೆದಿದ್ದಾರೆ. ಈ ಮೂಲಕ ಉಗ್ರಪ್ಪ ಅವರು 2,43,271 ಮತಗಳ ಭಾರೀ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿ ಶ್ರೀನಿವಾಸ್ 13,704 ಮತ ಪಡೆದರೆ, 12,403 ಮಂದಿ ನೋಟಾ ಮತ ಚಲಾಯಿಸಿದ್ದಾರೆ.

bellyary congress 3

ಬಳ್ಳಾರಿಯ 7 ವಿಧಾನ ಸಭಾ ಕ್ಷೇತ್ರಗಳಲ್ಲಿ 10,47,619 ಮತದಾರರು ಇದ್ದು, ಇದರಲ್ಲಿ ಯಾವ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳು ಲಭಿಸಿದೆ ಎಂದು ನೋಡುವುದಾದರೇ, ಸಂಡೂರು ಶಾಸಕ ಟಿ ತುಕರಾಂ ಅವರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ 85,140 ಮತಗಳು ಹಾಗೂ ಕಂಪ್ಲಿ ಶಾಸಕ ಜೆಎನ್ ಗಣೇಶ್ ಅವರ ಕ್ಷೇತ್ರದಲ್ಲಿ 84,446 ಮತಗಳನ್ನು ಕಾಂಗ್ರೆಸ್ ಪಡೆದಿದೆ.

ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಎನ್. ನಾಗೇಂದ್ರ ಅವರ ಕ್ಷೇತ್ರದಲ್ಲಿ 83,918 ಮತ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್ ಕ್ಷೇತ್ರದಲ್ಲಿ 83,364 ಮತ ಲಭಿಸಿದೆ. ವಿಜಯನಗರ (ಹೊಸಪೇಟೆ) ಶಾಸಕ ಅನಂದ್ ಸಿಂಗ್ ಕ್ಷೇತ್ರದಲ್ಲಿ 82,832, ಎನ್ ನಾಗೇಂದ್ರ ಶಾಸಕರಾಗಿರುವ ಬಳ್ಳಾರಿ ನಗರ ಕ್ಷೇತ್ರದಲ್ಲಿ 72,288, ಹೂವಿನಹಡಗಲಿ ಕ್ಷೇತ್ರದ ಶಾಸಕ ಪರಮೇಶ್ವರ್ ನಾಯ್ಕ್ ಕ್ಷೇತ್ರದಲ್ಲಿ 70,598 ಹಾಗೂ ಬಿಜೆಪಿ ಶಾಸಕರಾಗಿರುವ ಎನ್‍ವೈ ಗೋಪಾಲ ಕೃಷ್ಣ ಅವರ ಕೂಡ್ಲಿಗಿ ಕ್ಷೇತ್ರದಲ್ಲಿ 65,557 ಮತ ಲಭಿಸಿದೆ. ಸಿದ್ದರಾಮಯ್ಯ ಅವರು ಕೊಟ್ಟ ಪರೀಕ್ಷೆಯಲ್ಲಿ ಸಂಡೂರು ಶಾಸಕ ತುಕಾರಾಂ ಅತಿ ಹೆಚ್ಚು ಲೀಡ್ ಕೊಡಿಸಿದ್ದು, ಎರಡನೇ ಸ್ಥಾನದಲ್ಲಿ ಕಂಪ್ಲಿ ಶಾಸಕ ಗಣೇಶ್, ಮೂರನೇ ಸ್ಥಾನದಲ್ಲಿ ಬಳ್ಳಾರಿ ಶಾಸಕ ನಾಗೇಂದ್ರ, ನಾಲ್ಕನೇಯ ಸ್ಥಾನದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಐದನೇ ಸ್ಥಾನದಲ್ಲಿ ಹೂವಿನಹಡಗಲಿ ಶಾಸಕ ಪರಮೇಶ್ವರ್ ನಾಯಕ್ ಹಾಗೂ 6ನೇ ಸ್ಥಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಇದ್ದಾರೆ.

bellyary congress 4

ಇತ್ತ ಬಿಜೆಪಿಗೆ ವಿಜಯನಗರ (ಹೊಸಪೇಟೆ)ದಲ್ಲಿ 53,372 ಮತ, ಹಗರಿಬೊಮ್ಮನಹಳ್ಳಿಯಲ್ಲಿ 53,102 ಮತ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ 50,663 ಮತ, ಕಂಪ್ಲಿಯಲ್ಲಿ 50,018, ಬಳ್ಳಾರಿ ನಗರದಲ್ಲಿ 48,565, ಸಂಡೂರಿನಲ್ಲಿ 46,465, ಕೂಡ್ಲಿಗಿ ಕ್ಷೇತ್ರದಲ್ಲಿ 43,528 ಮತ ಹಾಗೂ ಹೂವಿನಹಡಗಲಿ 39,179 ಮತಗಳನ್ನು ಬಿಜೆಪಿ ಪಡೆದಿದೆ.

ಉಪಚುನಾವಣೆಯ ಬಳಿಕ ಸಮ್ಮಿಶ್ರದ ಸಂಪುಟ ವಿಸ್ತರಣೆಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ತಮ್ಮ ಶಾಸಕರಿಗೆ ಸ್ಪಷ್ಟನೆ ನೀಡಿತ್ತು. ಈ ವೇಳೆ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ 30 ಸಾವಿರ ಮತಗಳ ಲೀಡ್ ತಂದುಕೊಡಬೇಕು. ಸಂಪುಟ ವಿಸ್ತರಣೆ ವೇಳೆ ಹೆಚ್ಚು ಲೀಡ್ ತಂದುಕೊಡುವ ಶಾಸಕರನ್ನು ಪರಿಗಣಿಸುತ್ತೇವೆ ಎಂದು ಸಿದ್ದರಾಮಯ್ಯ ಚುನಾವಣೆಗೂ ಮುನ್ನ ಆಶ್ವಾಸನೆ ನೀಡಿದ್ದರು. ಅಲ್ಲದೇ ಯಾವ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುತ್ತದೆ ಅಂತಹ ಕ್ಷೇತ್ರದ ಶಾಸಕರನ್ನು ಪರಿಗಣಿಸುವುದಿಲ್ಲ ನೇರವಾಗಿಯೇ ಹೇಳಿದ್ದರು. ಸದ್ಯ ಸಿದ್ದರಾಮಯ್ಯ ನೀಡಿದ ಟಾರ್ಗೆಟನ್ನು ಎಲ್ಲಾ ಶಾಸಕರು ಪೂರ್ಣಗೊಳಿಸಿದ್ದು ಯಾರಿಗೆ ಸಚಿವ ಸ್ಥಾನ ಲಭಿಸಲಿದೆ ಎನ್ನುವ ಕುತೂಹಲ ಈಗ ಹೆಚ್ಚಾಗಿದೆ.

2014ರ ಚುನಾವಣೆಯಲ್ಲಿ ಶ್ರೀರಾಮುಲು 85,144 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮುಲು ಅವರಿಗೆ 5,34,406 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ಸಿನ ಎನ್‍ವೈ ಹನುಮಂತಪ್ಪ ಅವರಿಗೆ 4,49,262 ಮತಗಳು ಬಿದ್ದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

d.k.shivakumar siddaramaiah

TAGGED:bellarycabinet expansionformer CM Siddaramaiahlegislatorsparliamentary electionPublic TVvoteಉಪಚುವನಾವಣೆಪಬ್ಲಿಕ್ ಟಿವಿಬಳ್ಳಾರಿಮತಮಾಜಿ ಸಿಎಂ ಸಿದ್ದರಾಮಯ್ಯಶಾಸಕರುಸಂಪುಟ ವಿಸ್ತರಣೆಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rahul gandhi siddaramaiah dk shivakumar 1
Latest

ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

Public TV
By Public TV
11 minutes ago
Yellow Line Metro
Bengaluru City

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಸಂಕ್ರಾಂತಿಯಂದು ಟ್ರ್ಯಾಕ್‌ಗೆ 7ನೇ ರೈಲು

Public TV
By Public TV
2 hours ago
Janardhana Reddy 2
Bellary

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ 

Public TV
By Public TV
2 hours ago
supreme Court 1
Court

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು

Public TV
By Public TV
2 hours ago
sabarimala kerala karnataka
Chikkamagaluru

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
2 hours ago
armed robbery gang in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ರಾತ್ರಿ ವೇಳೆ ಮಚ್ಚು, ರಾಡ್ ಹಿಡಿದು ಓಡಾಡ್ತಿದೆ ರಾಬರಿ ಗ್ಯಾಂಗ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?