ಮೈಸೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಚಾಮರಾಜನಗರ- ನಂಜನಗೂಡು 4 ಲೇನ್ ರಸ್ತೆಗೆ ಯಾಕೆ ಸರ್ವಿಸ್ ರೋಡ್ ಬಿಡಲಿಲ್ಲಾ? ಅಂದು ಬಡವರು ಡಿ.ಕೆ.ಶಿವಕುಮಾರ್ (D.K. Shivakumar) ಅವರ ಕಣ್ಣಿಗೆ ಕಾಣಲಿಲ್ಲವಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಎಕ್ಸ್ಪ್ರೆಸ್ ವೇಯಲ್ಲಿ (Expressway) ಸರ್ವಿಸ್ ರೋಡ್ ನಿರ್ಮಾಣ ಮಾಡಲಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ (Pratap Simha), ಡಿಕೆಶಿ ಅವರು ಮೊದಲು ನೆನೆಗುದಿಗೆ ಬಿದ್ದಿರುವ ಮಳವಳ್ಳಿ-ಬೆಂಗಳೂರು ಮಾರ್ಗ ಸರಿಪಡಿಸಲಿ. ಹಾಸನ-ಬೆಂಗಳೂರು (Bengaluru) ರಸ್ತೆ ನಿರ್ಮಾಣ ಮಾಡಿದಾಗಲೂ ಸರ್ವಿಸ್ ರೋಡ್ ಮಾಡಿರಲಿಲ್ಲ. ಇಲ್ಲಿಯವರೇ ಸಿಎಂ, ಪಿಡಬ್ಲ್ಯುಡಿ ಸಚಿವರಾಗಿದ್ದರೂ ಅಂದು ಯಾಕೆ ಡಿಕೆಶಿಗೆ ಬಡವರ ಪರ ಕಾಳಜಿ ಇರಲಿಲ್ಲ ಎಂದು ಡಿಕೆಶಿಯವರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ
ಸರ್ವಿಸ್ ರೋಡ್ ನಿರ್ಮಾಣದ ಬಳಿಕವೇ ಹೈವೇ ಉದ್ಘಾಟನೆ ಆಗಲಿದೆ. ದ್ವಿಚಕ್ರ ವಾಹನ, ಸಣ್ಣಪುಟ್ಟ ವಾಹನಗಳಿಗೆ ಸರ್ವಿಸ್ ರೋಡ್ ಇರಲಿದೆ ಎಂದು ಸ್ಪಷ್ಟನೆ ನೀಡಿದರು.
ಪ್ಯಾಲೆಸ್ ಮಾದರಿಯಲ್ಲಿ ಒಂದೇ ಒಂದು ರಸ್ತೆ ನಿರ್ಮಾಣ ಮಾಡಲಿ ಎಂಬ ಹೇಳಿಕೆಯ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ನವರು (Congress) ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದಾರೆ. ಡಿಕೆಶಿಗೆ ಒಮ್ಮೆ ಹೈವೇಯಲ್ಲಿ ಬಂದು ಹೋಗಲು ಹೇಳಿ. ರಸ್ತೆಯಲ್ಲಿ ಬರುವಾಗ ಗಮನವಿಟ್ಟು ನೋಡಲು ಹೇಳಿ. ಪ್ಯಾಲೆಸ್ ಮಾದರಿಯನ್ನು ಮೀರಿಸುವಂತಹ ರಸ್ತೆ ಅಲ್ಲಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k