Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಡಿಜಿಟಲ್ ವಿಶ್ವವಿದ್ಯಾಲಯವು ಭಾರತದ ಶಿಕ್ಷಣ ನೀತಿಯಲ್ಲಿ ಅಭೂತಪೂರ್ವ ಹೆಜ್ಜೆ: ಮೋದಿ

Public TV
Last updated: February 21, 2022 3:11 pm
Public TV
Share
3 Min Read
MODI 3
SHARE

ನವದೆಹಲಿ: ಡಿಜಿಟಲ್ ವಿಶ್ವವಿದ್ಯಾನಿಲಯವು ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಭೂತಪೂರ್ವ ಹೆಜ್ಜೆಯಾಗಿದ್ದು, ದೇಶದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಕೊನೆಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

2022ರ ಕೇಂದ್ರ ಬಜೆಟ್‍ನಲ್ಲಿ ಮಾಡಲಾದ ಘೋಷಣೆಗಳ ಅನುಷ್ಠಾನದ ಕುರಿತು ಶಿಕ್ಷಣ ಸಚಿವಾಲಯದ ವೆಬಿನಾರ್‍ನ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, 2022-23ರ ಕೇಂದ್ರ ಬಜೆಟ್ ಹೊಸದನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೋಂದು ಆಳವಾದ ಶಿಕ್ಷಣ ನೀತಿಯಾಗಿದೆ ಎಂದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ

Budget

ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಡಿಜಿಟಲ್ ಸಂಪರ್ಕವು ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಚಾಲನೆಯಲ್ಲಿಟ್ಟಿತು ಎಂಬುದನ್ನು ಸಹ ಪ್ರಧಾನಿಯವರು ವೆಬಿನಾರ್‍ನಲ್ಲಿ ಭಾಗವಹಿಸಿದ ಸಭಿಕರಿಗೆ ತಿಳಿಸಿದರು.

ಯುವ ಪೀಳಿಗೆಯನ್ನು ಭಾರತದ ಭವಿಷ್ಯ ಅಂತ ವಿವರಿಸಿದ ಅವರು ಸೋಮವಾರ ಭಾರತದ ಭವಿಷ್ಯದ ನಾಯಕರನ್ನು ಸಬಲೀಕರಣಗೊಳಿಸಲು ಕರೆ ನೀಡಿದರು. ನಮ್ಮ ಯುವ ಪೀಳಿಗೆ ದೇಶದ ಭವಿಷ್ಯದ ನಾಯಕರು. ಆದ್ದರಿಂದ ಇಂದಿನ ಯುವ ಪೀಳಿಗೆಯನ್ನು ಸಶಕ್ತಗೊಳಿಸುವುದು ಎಂದರೆ ಭಾರತದ ಭವಿಷ್ಯವನ್ನು ಸಶಕ್ತಗೊಳಿಸುವುದಾಗಿದೆ ಎಂದರು.

2022ರ ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ 5 ವಿಷಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೊದಲನೆಯದು ಗುಣಮಟ್ಟದ ಶಿಕ್ಷಣದ ಸಾರ್ವತ್ರೀಕರಣ, ಎರಡನೆಯದು ಕೌಶಲ್ಯ ಅಭಿವೃದ್ಧಿ, ಮೂರನೆಯದು ನಗರ ಯೋಜನೆ ಮತ್ತು ವಿನ್ಯಾಸ. ನಾಲ್ಕನೆಯದು ಅಂತರಾಷ್ಟ್ರೀಕರಣ – ಭಾರತದಲ್ಲಿ ವಿಶ್ವ ದರ್ಜೆಯ ವಿದೇಶಿ ವಿಶ್ವವಿದ್ಯಾಲಯಗಳು ಮತ್ತು ಐದನೆಯದು ಎವಿಜಿಸಿ – ಆನಿಮೇಷನ್ ವಿಷುಯಲ್ ಎಫೆಕ್ಟ್ಸ್ ಗೇಮಿಂಗ್ ಕಾಮಿಕ್ ಆಗಿದೆ ಎಂದರು.

digital payments india digital transaction npci

ರಾಷ್ಟ್ರೀಯ ಡಿಜಿಟಲ್ ವಿಶ್ವವಿದ್ಯಾಲಯವು ಭಾರತದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಪರಿಹರಿಸುತ್ತದೆ. ಈ ನೀತಿಯಲ್ಲಿ ಅನಿಯಮಿತ ಸೀಟುಗಳಿರುತ್ತವೆ. ಡಿಜಿಟಲ್ ವಿಶ್ವವಿದ್ಯಾನಿಲಯವು ಸಾಧ್ಯವಾದಷ್ಟು ಬೇಗ ಪ್ರಾರಂಭಿಸಲು ನಾನು ಎಲ್ಲಾ ಮಧ್ಯಸ್ಥಗಾರರನ್ನು ಕೋರುತ್ತೇನೆ ಎಂದು ಆಗ್ರಹಿಸಿದರು.

ಮಾತೃಭಾಷೆಯಲ್ಲಿ ಶಿಕ್ಷಣವು ಮಕ್ಕಳ ಮಾನಸಿಕ ಬೆಳವಣಿಗೆಗೆ ಸಂಬಂಧಿಸಿದೆ. ಹಲವಾರು ವೈದ್ಯಕೀಯ, ಟೆಕ್-ಎಡ್ಯೂ ಸ್ಟಾರ್ಟ್‍ಅಪ್‍ಗಳು ಅನೇಕ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಪ್ರಾರಂಭವಾಗಿವೆ. ಇ-ವಿದ್ಯಾ, ಒನ್ ಕ್ಲಾಸ್ ಒನ್ ಚಾನೆಲ್, ಡಿಜಿಟಲ್ ಲ್ಯಾಬ್‍ಗಳು, ಡಿಜಿಟಲ್ ಯೂನಿವರ್ಸಿಟಿಯಂತಹ ಶೈಕ್ಷಣಿಕ ಮೂಲಸೌಕರ್ಯಗಳು ಯುವಕರಿಗೆ ಬಹಳಷ್ಟು ಸಹಾಯ ಮಾಡಲಿವೆ ಎಂದರು. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

ಶಿಕ್ಷಣ ಮತ್ತು ಕೌಶಲ್ಯ ವಲಯದ ಕುರಿತು ವೆಬಿನಾರ್ ಅನ್ನು ಆಯೋಜಿಸುತ್ತಿರುವ ಶಿಕ್ಷಣ ಸಚಿವಾಲಯವು ಪ್ರಸ್ತುತತೆಯ ವಿವಿಧ ವಿಷಯಗಳ ಕುರಿತು ಅಧಿವೇಶನಗಳನ್ನು ನಡೆಸುತ್ತದೆ. ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳ ಸರ್ಕಾರಿ ಅಧಿಕಾರಿಗಳು, ಉದ್ಯಮ ಪ್ರತಿನಿಧಿಗಳು, ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಹಾಗೂ ಇತರ ತಜ್ಞರು ಈ ವೆಬಿನಾರ್‍ನಲ್ಲಿ ಭಾಗವಹಿಸುತ್ತಾರೆ.

What is Cybersex How Cybering Can Improve Your Relationship 4

ಹಲವಾರು ವಿಷಯಗಳ ಅಡಿಯಲ್ಲಿ ಏಳು ಸಮಾನಾಂತರ ವಿರಾಮವಿಲ್ಲದ ಸೆಷನ್‍ಗಳನ್ನು ನಡೆಸಲಾಗುತ್ತದೆ. ಶಿಕ್ಷಣದ ಸುಲಭತೆ ಮತ್ತು ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳುವುದರ ಮೇಲೆ ಗಮನಹರಿಸುವ ತತ್ವಗಳಿಗೆ ಅನುಗುಣವಾಗಿ ಕಾರ್ಯಗತಗೊಳಿಸಲು ಕ್ರಮದ ಅಂಶಗಳು, ವಿಶಾಲವಾದ ಕಾರ್ಯತಂತ್ರಗಳು ಮತ್ತು ಟೈಮ್‍ಲೈನ್‍ಗಳಂತಹ ವಿಷಯಗಳ ಕುರಿತು ಈ ವೆಬಿನಾರ್‍ನಲ್ಲಿ ಚರ್ಚಿಸಲಾಗುತ್ತದೆ.

ಡಿಜಿಟಲ್ ಯೂನಿವರ್ಸಿಟಿ, ದಿ ಡಿಜಿಟಲ್ ಟೀಚರ್, ಒನ್ ಕ್ಲಾಸ್ ಒನ್ ಚಾನೆಲ್‍ನ ವಿಸ್ತರಣೆ, ನಗರ ಯೋಜನೆ ಮತ್ತು ವಿನ್ಯಾಸದಲ್ಲಿ ಭಾರತದ ನಿರ್ದಿಷ್ಟ ಜ್ಞಾನ, ಬಲವಾದ ಉದ್ಯಮ-ಕೌಶಲ್ಯ ಸಂಪರ್ಕವನ್ನು ಬೆಳೆಸುವ ಕಡೆಗೆ ಅಭಿವೃದ್ಧಿಪಡಿಸುವುದು. ಸಿಟಿಯಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ಎವಿಜಿಸಿಯಲ್ಲಿ ಉದ್ಯಮ-ಕೌಶಲ್ಯ ಸಂಪರ್ಕವನ್ನು ಬಲಪಡಿಸುವುದು ವೆಬ್‍ನಾರ್‍ನ ವಿಷಯಗಳಾಗಿವೆ.

ಬಜೆಟ್ ಘೋಷಣೆಗಳ ಸಮರ್ಥ ಮತ್ತು ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ, ಭಾರತ ಸರ್ಕಾರವು ವಿವಿಧ ಪ್ರಮುಖ ವಲಯಗಳಲ್ಲಿ ವೆಬಿನಾರ್‍ಗಳ ಸರಣಿಯನ್ನು ನಡೆಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯಗಳು, ಶೈಕ್ಷಣಿಕ ಮತ್ತು ಉದ್ಯಮದ ತಜ್ಞರೊಂದಿಗೆ ಚರ್ಚೆ ಮಾಡುವುದು. ವಿವಿಧ ಕ್ಷೇತ್ರಗಳ ಅಡಿಯಲ್ಲಿ ವಿವಿಧ ಸಮಸ್ಯೆಗಳ ಅನುಷ್ಠಾನಕ್ಕೆ ಹೇಗೆ ಉತ್ತಮವಾಗಿ ಮುಂದುವರಿಯುವುದು ಎಂಬುದರ ಕುರಿತು ಕಾರ್ಯತಂತ್ರಗಳನ್ನು ಗುರುತಿಸುವುದು ಇದರ ಉದ್ದೇಶವಾಗಿದೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

TAGGED:Central Budgetdigital universitynarendra modiNew dehliWebinarಕೇಂದ್ರ ಬಜೆಟ್ಡಿಜಿಟಲ್‌ ವಿಶ್ವವಿದ್ಯಾಲಯನರೇಂದ್ರ ಮೋದಿನವದೆಹಲಿವೆಬಿನಾರ್
Share This Article
Facebook Whatsapp Whatsapp Telegram

You Might Also Like

bagalkote jayamruthyunjaya swamiji
Bagalkot

ಸಿಎಂ ವಿರುದ್ಧದ ಆ ಹೇಳಿಕೆಯೇ ನನಗೆ ಮುಳುವಾಯಿತು: ಪಂಚಮಶಾಲಿ ಶ್ರೀ

Public TV
By Public TV
40 minutes ago
Ramalinga Reddy 2
Districts

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Public TV
By Public TV
48 minutes ago
paraglider crash
Crime

ಹಿಮಾಚಲ | ಪ್ಯಾರಾಗ್ಲೈಡಿಂಗ್ ವೇಳೆ ಅವಘಡ – ಗುಜರಾತ್‌ನ ಪ್ರವಾಸಿಗ ಸಾವು

Public TV
By Public TV
1 hour ago
Bengaluru Crime
Bengaluru City

ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

Public TV
By Public TV
1 hour ago
shubhanshu shukla father and mother
Latest

ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ

Public TV
By Public TV
1 hour ago
Tamil stuntman died in film shooting
Cinema

ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?