Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ – ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ – ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

Bengaluru City

ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ – ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

Public TV
Last updated: September 14, 2021 10:40 pm
Public TV
Share
4 Min Read
WEBINAR 4
SHARE

ಬೆಂಗಳೂರು: ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ಯಶಸ್ವಿ ವೆಬಿನಾರ್ ನಡೆಯಿತು.

ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಮ್ಮ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣದಲ್ಲಿ ಬಿಸಿಸಿಐನ ಧ್ಯೇಯೋದ್ದೇಶಗಳನ್ನು ಸರಳವಾಗಿ ವಿವರಿಸಿ, ಯುಎಇ ಚಾಪ್ಟರ್ ನ ತಂಡವನ್ನು ಪರಿಚಯಿಸಿದರು. ಉಪಾಧ್ಯಕ್ಷರಾದ ಅಬ್ದುಲ್ಲಾ ಮದುಮೂಲೆ ಕಾರ್ಯಕ್ರಮದ ಮುಖ್ಯ ಅತಿಥಿಯಾದ ದುಬೈ ಸರ್ಕಾರದ ಎಕೋನಮಿಕ್ ಡೆವಲಪ್ಮೆಂಟ್ ವಿಭಾಗದ ಮುಖ್ಯ ತಂತ್ರಜ್ಞರಾದ ರಾಶಿದ್ ಹಜಾರಿಯವರ ಸಂಕ್ಷಿಪ್ತ ಪರಿಚಯ ನೀಡಿ ಸ್ವಾಗತಿಸಿದರು.

WEBINAR

ಡಿಜಿಟಲ್ ಮಾಧ್ಯಮವು ಉದ್ಯಮರಂಗದಲ್ಲಿ ಸೃಷ್ಟಿಸಿದ ಹೊಸ ಸಂಚಲನದ ಬಗ್ಗೆ ಬೆಳಕು ಚೆಲ್ಲಿದ ರಾಶಿದ್, ಜಗತ್ತು ಬದಲಾಗುತ್ತಿದೆ, ಅತ್ಯಂತ ವೇಗವಾಗಿ ಆಗುತ್ತಿರುವ ಈ ಬದಲಾವಣೆಗೆ ನಾವು ತಯಾರಾಗಿಲ್ಲ, ಬದಲಾವಣೆಗೆ ಅನುಗುಣವಾಗಿ ನಮ್ಮ ಕಲಿಕೆಯ ವಿಷಯವನ್ನು, ಉಜ್ವಲ ಭವಿಷ್ಯವಿರುವ ಉದ್ಯೋಗ ವಿಭಾಗವನ್ನು ಆಯ್ಕೆ ಮಾಡುವುದರಲ್ಲಿ ಎಡವುತ್ತಿದ್ದೇವೆ. ಪ್ರಸಕ್ತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದಿನ ಕೆಲವೇ ವರ್ಷಗಳಲ್ಲಿ, 2030ರ ಆಸುಪಾಸಿನಲ್ಲಿ ಇನ್ನಷ್ಟು ಅತ್ಯಾಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಮಾನವರಹಿತ, ರೋಬೋಟಿಕ್ ತಂತ್ರಜ್ಞಾನ 80 ಕೋಟಿಗೂ ಹೆಚ್ಚು ಜನರ ಉದ್ಯೋಗಕ್ಕೆ ಕುತ್ತು ತರಲಿದ್ದು, ಉದ್ಯೋಗ ಕಳೆದುಕೊಳ್ಳಲಿದ್ದಾರೆ. ದುಬೈ ಸೇರಿದಂತೆ ಹಲವು ದೇಶಗಳಲ್ಲಿ ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆ ಈಗಾಗಲೇ ಪ್ರಾರಂಭವಾಗಿದೆ ಎಂದರು.

ಹಲವು ಹೊಸ ಸಾಫ್ಟ್ವೇರ್ ನಿಂದಾಗಿ ಈಗಾಗಲೇ ಹಣಕಾಸು ವಿಭಾಗ, ಅಕೌಂಟೆಂಟ್ ಉದ್ಯೋಗಕ್ಕೆ ಕತ್ತರಿ ಬಿದ್ದಿದೆ, ತೆರಿಗೆ ಕಟ್ಟುವ ವಿಭಾಗವೂ ಯಾಂತ್ರೀಕೃತವಾಗಿ ಲೆಕ್ಕ ಪರಿಶೋಧಕರ ಉದ್ಯೋಗವನ್ನು ಕಡಿತಗೊಳಿಸಿದೆ. ಒಂದು ನಿರ್ದಿಷ್ಟ ಉದ್ಯೋಗ ಪಡೆಯಲು ಆಶಿಸಿ ನಿರ್ಧಿಷ್ಟ ವಿಷಯವನ್ನು ಆಯ್ಕೆ ಮಾಡಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಪೂರ್ಣಗೊಳ್ಳುವ ಮುನ್ನವೇ ಆ ವಿಭಾಗವನ್ನು ರೋಬೋಟಿಕ್ ತಂತ್ರಜ್ಞಾನ ಸಂಪೂರ್ಣವಾಗಿ ಸ್ವಾಧೀನಪಡಿಸಿದರೆ ಅವರ ಭವಿಷ್ಯದ ಗತಿಯೇನು? ಈ ಬಗ್ಗೆ ವಿದ್ಯಾರ್ಥಿಗಳು, ಹೆತ್ತವರು ಜಾಗೃತರಾಗಬೇಕಾಗಿದ್ದು, ವೇಗವಾಗಿ ಬದಲಾಗುತ್ತಿರುವ ಜಗತ್ತಿಗೆ ಒಗ್ಗಿಕೊಂಡು ಬದಲಾವಣೆಯನ್ನು ಅರಿತು, ಅಳವಡಿಸಿಕೊಂಡು ಸೂಕ್ತ ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದರು.

WEBINAR 3

ಡಿಜಿಟಲ್ ಜಗತ್ತಿನಲ್ಲಿ ಹೇಗೆ ಉಬರ್, ಓಲಾ ಟ್ಯಾಕ್ಸಿ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆಗೆ ಸಾಕ್ಷಿಯಾಯಿತು, ಕಳೆದ ಹತ್ತು ವರ್ಷಗಳಿಂದ ದುಬೈ ಯಶಸ್ವಿಯಾಗಿ ಚಾಲಕ ರಹಿತ ಮೆಟ್ರೋದಿಂದ ಕೋಟ್ಯಂತರ ಪ್ರಯಾಣಿಕರ ಪ್ರಯಾಣವನ್ನು ಸರಳಗೊಳಿಸಿದೆಯೋ ಅದೇ ರೀತಿ ಮುಂದೆ ಮಾನವರಹಿತ, ಹಾರುವ ‘ಏರ್ ಟ್ಯಾಕ್ಸಿ’ ಮತ್ತು 150ಞm ದೂರವನ್ನು 12ನಿಮಿಷಗಳಲ್ಲಿ ತಲುಪಬಲ್ಲ ಹೈಪರ್ಲೂಪ್ ಸಾರಿಗೆ ಕ್ಷೇತ್ರದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಲಿದೆ. ಈ ಬದಲಾವಣೆಯೂ ನೇರವಾಗಿ, ಪರೋಕ್ಷವಾಗಿ ದೊಡ್ಡ ಮಟ್ಟದ ಉದ್ಯೋಗ ನಷ್ಟಕ್ಕೆ ಕಾರಣವಾಗಲಿದೆ.

ಈ ಡಿಜಿಟಲ್ ಕ್ರಾಂತಿ ಎಲ್ಲಾ ಉದ್ಯೋಗ ಕ್ಷೇತ್ರದಲ್ಲೂ ಬದಲಾವಣೆ ತರಲಿದೆ, ಕೆಲವು ಕ್ಷೇತ್ರಗಳಲ್ಲಿ ತುರ್ತು ಬದಲಾವಣೆ ಇನ್ನು ಕೆಲವು ಕ್ಷೇತ್ರಗಳಲ್ಲಿ ನಿಧಾನವಾಗಿ, ಹಲವು ಕ್ಷೇತ್ರಗಳಲ್ಲಿ ಸಂಪೂರ್ಣ ಬದಲಾವಣೆ ಉಂಟಾದರೆ, ಇನ್ನು ಕೆಲವು ಕ್ಷೇತ್ರಗಳಲ್ಲಿ ಭಾಗಶಃ ಬದಲಾವಣೆಗೆ ಕಾರಣವಾಗುತ್ತದೆ. ರಿಟೇಲ್ ಅಥವಾ ಚಿಲ್ಲರೆ ವ್ಯಾಪಾರ ಆನ್ಲೈನ್ ಈ ಕಾಮರ್ಸ್ ಕಂಪನೆಗಳ ಭರಾಟೆಯಿಂದ ಬಹುತೇಕ ನಷ್ಟ ಅನುಭವಿಸಿದೆ, ಸಾವಿರಾರು ರಿಟೇಲ್ ಮಳಿಗೆಗಳು ಮುಚ್ಚಿವೆ. ಹೊಸ ಹೊಸ ಬುಕ್ಕಿಂಗ್ ಅಪ್ಲಿಕೇಶನ್ ನಿಂದಾಗಿ ಟ್ರಾವೆಲ್ ಏಜೆಂಟ್ ಗಳ ಉದ್ಯಮಕ್ಕೂ ಹೊಡೆತ ಬಿದ್ದಿದೆ. ಹಣಕಾಸು, ದೂರಸಂಪರ್ಕ, ಅಟೋಮೊಬೈಲ್ ಸರಕು ಸಾಗಣೆ, ರೀಟೇಲ್, ಆರೋಗ್ಯ ಜೀವವಿಜ್ಞಾನ, ಮಾಧ್ಯಮ, ಮನೋರಂಜನೆ, ರಿಯಲ್ ಎಸ್ಟೇಟ್, ಸರ್ಕಾರ ಮತ್ತು ಸಾರ್ವಜನಿಕ ವಲಯ ಈ ಎಲ್ಲಾ ವಿಭಾಗಗಳಲ್ಲೂ ಬದಲಾವಣೆ ಆಗುತ್ತಿದೆ, ಡಿಜಿಟಲ್ ಜಗತ್ತಿಗೆ ಅಳವಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ.

BCCI

ಬದಲಾವಣೆ ಜಗದ ನಿಯಮ, ಈ ಬದಲಾವಣೆಯಿಂದ ಕೇವಲ ಉದ್ಯೋಗ ನಷ್ಟ ಸಂಭವಿಸಲಿದೆ ಎಂದು ಮಾತ್ರ ಚಿಂತಿಸಬೇಕಾಗಿಲ್ಲ, ಈ ಬದಲಾವಣೆ ಹೊಸ ಹೊಸ ಉದ್ಯಮ, ಉದ್ಯೋಗಪತಿ, ಉದ್ಯೋಗಾವಕಾಶಕ್ಕೂ ಕಾರಣವಾಗಲಿದೆ. ನಮ್ಮ ಬದುಕುವ ಶೈಲಿಯನ್ನೇ ಬದಲಾಯಿಸಲಿದೆ. ಬದಲಾವಣೆಯನ್ನು ಗ್ರಹಿಸಿ, ಅಳವಡಿಸಿಕೊಂಡರೆ, ಸವಾಲಾಗಿ ಸ್ವೀಕರಿಸಿದರೆ ದೊಡ್ಡ ಮಟ್ಟದ ಹೊಸ ಅವಕಾಶಗಳಿಗೆ ದಾರಿಯಾಗಲಿದೆ. ಕೋವಿಡ್ 19ನಿಂದಾಗಿ ಡಿಜಿಟಲೀಕರಣದ ವೇಗ ಇನ್ನಷ್ಟು ಹೆಚ್ಚಾಯಿತು, ಜನಸಾಮಾನ್ಯರಿಗೂ ಡಿಜಿಟಲ್ ಜಗತ್ತಿಗೆ ಪರಿಚಯವೂ ಆಗತೊಡಗಿತು.

ಅಮೇಜಾನ್ ಗಳಂತಹ ಈ ಕಾಮರ್ಸ್, ವ್ಯಾಲೆಟ್, ಮೊಬೈಲ್ ಪೇ, ಬಿಟ್ ಕಾಯಿನ್ ಗಳಂತಹ ಡಿಜಿಟಲ್ ಕರೆನ್ಸಿ, ಓಲಾ ಉಬರ್ ಗಳಂತಹ ಶೇರಿಂಗ್ ಎಕಾನಮಿ, ಈ-ಗೇಮಿಂಗ್, ನೆಟ್‍ಫ್ಲಿಕ್ಸ್ ತರಹದ ಒಟಿಟಿ ಪ್ಲಾಟ್ಫಾರ್ಮ್, ಅಪ್ಲಿಕೇಶನ್ ಡೆವಲಪ್ಮೆಂಟ್, ಟ್ವಿಟರ್ ಫೇಸ್ಬುಕ್, ಇನ್ಸ್ಟಾಗ್ರ್ಯಾಮ್ ಗಳಂತಹ ಹಲವು ಹೊಸ ಸಾಮಾಜಿಕ ಜಾಲತಾಣಗಳು, ಬಿಗ್ ಡೇಟಾ, ಓಪನ್ ಬ್ಯಾಂಕಿಂಗ್ ಗಳಂತಹ ಡೆಟಾ ಎಕಾನಮಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಡ್ರೋನ್ಸ್, ನ್ಯಾನೋ ಟೆಕ್ನಾಲಜಿ, 3ಆ ಪೈಂಟಿಂಗ್ ಇವೆಲ್ಲವೂ ಭವಿಷ್ಯದಲ್ಲಿ ಹೆಚ್ಚು ಬೆಳವಣಿಗೆ ಹೊಂದಲಿರುವ ಕೆಲವು ಕ್ಷೇತ್ರಗಳು.

WEBINAR 2

ಯುವ ಉದ್ಯಮಿಗಳು, ವ್ಯಾಪಾರಿಗಳು ಡಿಜಿಟಲ್ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದುತ್ತಿರುವ ಕಂಪೆನಿಗಳ ಬಗ್ಗೆ ಅರಿತು, ಹೇಗೆ ನಿಮ್ಮ ಉದ್ಯಮದಲ್ಲಿ ಅದನ್ನು ಅಳವಡಿಸಬಹುದು, ನಿಮ್ಮ ಗ್ರಾಹಕರ ನಿರೀಕ್ಷೆಗಳ ಬಗ್ಗೆಯೂ ಗ್ರಾಹಕರ ದೃಷ್ಟಿಕೋನದಿಂದಲೇ ವಿಶ್ಲೇಷಣೆ ನಡೆಸಿ, ಹೊಸ ರೂಪುರೇಷೆ ಗಳೊಂದಿಗೆ, ಡಿಜಿಟಲೀಕರಣದ ಸಹಾಯದಿಂದ ಬೆಳವಣಿಗೆ ಹೊಂದಬಹುದು ಎಂದು ಸಲಹೆ ನೀಡಿದರು.

ಈ ಉಪಯುಕ್ತ ವೆಬಿನಾರಿನಲ್ಲಿ 16ಕ್ಕೂ ಹೆಚ್ಚಿನ ದೇಶಗಳಿಂದ 225ಕ್ಕೂ ಹೆಚ್ಚಿನ ಆಸಕ್ತರು ಪಾಲ್ಗೊಂಡಿದ್ದರು. ಬಿಸಿಸಿಐ ಯುಎಇ ಚಾಪ್ಟರ್ ಉಪಾಧ್ಯಕ್ಷರಾದ ಹಿದಾಯತ್ ಅಡ್ಡೂರ್ ಧನ್ಯವಾದ ಅರ್ಪಿಸಿದರು, ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್ ಕಾರ್ಯಕ್ರಮ ನಿರೂಪಿಸಿದರು.

WEBINAR 1

TAGGED:bccibengaluruPublic TVraashid hajariuaeWebinarಪಬ್ಲಿಕ್ ಟಿವಿಬಿಸಿಸಿಐಬೆಂಗಳೂರುಯುಎಇರಾಶಿದ್ ಹಜಾರಿವೆಬಿನಾರ್
Share This Article
Facebook Whatsapp Whatsapp Telegram

Cinema news

gilli Ashwini Gowda BBK12
ಕೆಲ್ಸ ಮಾಡದೇ ಕೆಲ್ಸ ಮಾಡ್ಸೋಕೆ ನಿಂತ ಗಿಲ್ಲಿ – ಕಿಚನ್ ವಾರ್‌ನಲ್ಲಿ ಕ್ಯಾಪ್ಟನ್‌ Vs ಅಶ್ವಿನಿ
Cinema Latest Sandalwood Top Stories TV Shows
Alpha Men Love Violence Rawa Rawa Video Song released Hemanth Kumar Anand Kumar Vijay Anoop Seelin J 2
ಆಲ್ಫಾ ಚಿತ್ರದ ರಾವ ರಾವ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Sandalwood
1 1
ಹಿನ್ನೋಟ: ಧುರಂಧರ್‌, ಕಾಂತಾರದಿಂದ ಹೌಸ್‌ಫುಲ್‌ವರೆಗೆ – 2025ರಲ್ಲಿ ತೆರೆಕಂಡ 10 ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾಗಳಿವು!
Cinema Latest Main Post Special
Spandana
BBK 12 | ಬೆಂಗ್ಳೂರಿಗೆ ಬಂದಾಗ ಇರೋಕೆ ಜಾಗ ಇರಲಿಲ್ಲ – ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸ್ಪಂದನಾ
Cinema Latest Main Post TV Shows

You Might Also Like

kuldeep singh sengar
Court

ಉನ್ನಾವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

Public TV
By Public TV
12 minutes ago
Uttara Pradesh Accident 1
Crime

ಓವರ್‌ಲೋಡ್ ಆಗಿದ್ದ ಟ್ರಕ್ ಪಲ್ಟಿ – ಬೊಲೆರೋ ಅಪ್ಪಚ್ಚಿ, ಚಾಲಕ ಸಾವು

Public TV
By Public TV
46 minutes ago
Nikhil Kumaraswamy
Bengaluru City

ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

Public TV
By Public TV
1 hour ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ – ರಾಜೀವ್ ಗಾಂಧಿ ವಸತಿ ಯೋಜನೆಯ 20 ಅಧಿಕಾರಿಗಳು ಭೇಟಿ

Public TV
By Public TV
2 hours ago
Mexico Train Derailment
Latest

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, 98 ಜನರಿಗೆ ಗಾಯ

Public TV
By Public TV
3 hours ago
Jayanth T
Crime

ಬುರುಡೆ ನೋಡಿ ಕೆಟ್ಟ ಕನಸು, ಭಯಗೊಂಡು ಕಿರುಚಾಡಿದ್ದೆ – ದೆಹಲಿಯಿಂದ ತರಲ್ಲ ಎಂದಿದ್ದೆ: ಜಯಂತ್‌ ಟಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?