Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!

Cinema

‘ಡಿ’ ಕಂಪನಿಯ ‘ದಿನಕರೋತ್ಸವ’ದಲ್ಲಿ ಟಕ್ಕರ್!

Public TV
Last updated: September 23, 2019 1:05 pm
Public TV
Share
2 Min Read
Dinakarotsava Takkar 1
SHARE

ಬೆಂಗಳೂರು: ದರ್ಶನ್ ಮತ್ತು ದಿನಕರ್ ಅವರ ಅಭಿಮಾನಿಗಳೆಲ್ಲಾ ಸೇರಿ ನಡೆಸುತ್ತಿರುವ ನೋಂದಾಯಿತ ಸಂಘ ‘ಡಿ ಕಂಪನಿ’. ಕರ್ನಾಟಕದ ಇಪ್ಪತ್ತು ಜಿಲ್ಲೆಗಳಲ್ಲಿ ಸದ್ಯ ‘ಡಿ ಕಂಪನಿ’ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಾ, ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ‘ಡಿ ಕಂಪನಿ’ ಹಲವಾರು ಸಾಮಾಜಿಕ ಜವಾಬ್ದಾರಿಯ ಕೆಲಸಗಳನ್ನು ನಡೆಸುತ್ತಲೇ ಬಂದಿದೆ.

Dinakarotsava Takkar 2

ದಿನಕರ್ ತೂಗುದೀಪ ಅವರು ತಮ್ಮ ಹುಟ್ಟುಹಬ್ಬವನ್ನು ಆಡಂಬರದಿಂದ ಆಚರಿಸಿಕೊಳ್ಳುವುದಿಲ್ಲ. ‘ಕೇಕು ಕತ್ತರಿಸಿ, ಹೂವು, ಹಾರಗಳಿಗೆ ಖರ್ಚು ಮಾಡುವ ಹಣವನ್ನು ಸಮಾಜದ ಒಳಿತಿಗೆ ವ್ಯಯ ಮಾಡಬೇಕು’ ಎನ್ನುವ ದಿನಕರ್ ಅವರ ಮಾತನ್ನು ಶಿರಸಾವಹಿಸಿ ಪಾಲಿಸುತ್ತಿರುವ ‘ಡಿ ಕಂಪನಿ’ ಕಳೆದ ಮೂರು ವರ್ಷಗಳಿಂದ ಶಾಲಾ ಮಕ್ಕಳಿಗೆ ಉಪಯುಕ್ತ ವಸ್ತುಗಳನ್ನು ನೀಡುವುದು, ಅನಾಥಾಶ್ರಮಕ್ಕೆ ಮೂರ್ನಾಲ್ಕು ತಿಂಗಳಿಗಾಗುವಷ್ಟು ದಿನಸಿ ವಿತರಿಸುವ ಕಾರ್ಯ ಮಾಡಿತ್ತು. ಈ ವರ್ಷ ಹಾಸನ ಜಿಲ್ಲೆಯ ಮಳಲಿ ಬಳಿಯ ರಾಮೇನಹಳ್ಳಿ ಎಂಬ ಕುಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು 2 ವರ್ಷಗಳ ಕಾಲಕ್ಕೆ ದತ್ತು ಪಡೆದುಕೊಂಡಿದೆ. ಈ ಮೂಲಕ ಮಕ್ಕಳಿಗೆ ಬಟ್ಟೆ, ಪುಸ್ತಕ, ಶಾಲೆಗೆ ಬಣ್ಣ, ಪೀಠೋಪಕರಣಗಳು ಸೇರಿದಂತೆ ಶಾಲೆಗೆ ಬೇಕಿರುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿದೆ. ಇದರ ಜೊತೆಗೆ ಯಾವುದೇ ಕಾರ್ಯಕ್ರಮಗಳನ್ನು ನಡೆಸಿದರೂ ಕನಿಷ್ಠ ಹತ್ತು ಗಿಡಗಳನ್ನು ನೆಡುವುದು ‘ಡಿ ಕಂಪನಿ’ ವಾಡಿಕೆ. ರಾಮೇನಹಳ್ಳಿ ಶಾಲಾ ಆವರಣದಲ್ಲೂ ಗಿಡಗಳನ್ನು ನೆಡಲಾಯಿತು.

dinakar thoogudeepa

ವಿಶೇಷವೆಂದರೆ ಈ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ‘ದಿನಕರೋತ್ಸವ’ವನ್ನು ಆಚರಿಸಿದ ಸಂದರ್ಭದಲ್ಲಿ ‘ಟಕ್ಕರ್’ ಚಿತ್ರತಂಡದ ನಾಯಕ ನಟ ಮನೋಜ್ ಕುಮಾರ್, ನಾಯಕಿ ರಂಜನಿ ರಾಘವನ್, ನಿರ್ಮಾಪಕ ನಾಗೇಶ್ ಕೋಗಿಲು ಉಪಸ್ಥಿತರಿದ್ದರು.

ನಟ ಮನೋಜ್ ಮಾತನಾಡಿ ‘ನನ್ನ ಮಾವಂದಿರಾದ ದರ್ಶನ್ ಮತ್ತು ದಿನಕರ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಕಂಪನಿ, ಈ ರೀತಿ ಜನಸ್ನೇಹಿ ಕಾರ್ಯಗಳನ್ನು ಮಾಡುತ್ತಾ ಬಂದಿರುವುದು ಎಲ್ಲರಿಗೂ ಆದರ್ಶವಾಗಿದೆ. ಇವತ್ತು ಕನ್ನಡವೇ ನಮ್ಮ ಅನ್ನ, ಕನ್ನಡ ನಮ್ಮ ಉಸಿರಾಗಿದೆ. ಕನ್ನಡಿಗರು ನಮ್ಮ ದರ್ಶನ್ ಮತ್ತು ದಿನಕರ್ ಅವರನ್ನು ಇಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಹೀಗಿರುವಾಗ ಕನ್ನಡ ಶಾಲೆಯನ್ನು ದತ್ತು ಸ್ವೀಕರಿಸಿರುವ ‘ಡಿ’ ಕಂಪನಿಯ ಕನ್ನಡ ಪ್ರೇಮವನ್ನು ಮೆಚ್ಚಬೇಕು ಎಂದರು.

Takkar 4

‘ನನ್ನ ತಾಯಿ ಕೂಡಾ ಹಾಸನದಲ್ಲಿ ಜನಿಸಿದವರು. ಇದೇ ನೆಲದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಪಾಲ್ಗೊಂಡಿರುವುದು ನನಗೆ ಹೆಮ್ಮೆ ತಂದಿದೆ’ ಎಂದರು ರಂಜನಿ ರಾಘವನ್. ನಿರ್ಮಾಪಕ ನಾಗೇಶ್ ಕೋಗಿಲು ಮಾತನಾಡುತ್ತಾ, ನಾನು ಕನ್ನಡ ಶಾಲೆಯಲ್ಲಿ ಓದಿದವನು. ಇವತ್ತು ಖಾಸಗಿ ಶಾಲೆಗಳ ಹಾವಳಿಯಿಂದ ಕನ್ನಡ ಶಾಲೆಗಳಿಗೆ ಸಂಚಕಾರ ಬಂದಿದೆ. ಇದರ ಮಧ್ಯೆಯೂ ಕನ್ನಡ ಶಾಲೆಯನ್ನು ಉಳಿಸಿಕೊಳ್ಳುವ ಅನಿವಾರ್ಯವಿದೆ. ಈ ಶಾಲೆಯನ್ನು ದತ್ತು ಸ್ವೀಕರಿಸಿರುವ ದರ್ಶನ್ ಮತ್ತು ದಿನಕರ್ ಅವರ ಅಭಿಮಾನಿಗಳ ಕಾರ್ಯ ಶ್ಲಾಘನೀಯ ಎಂದು ನುಡಿದರು.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿರ್ದೇಶಕ ದಿನಕರ್ ತೂಗುದೀಪ, ನನ್ನ ನಲವತ್ತೆರಡನೇ ಹುಟ್ಟುಹಬ್ಬ ಇಷ್ಟೊಂದು ಅರ್ಥಪೂರ್ಣವಾಗಿ ನೆರವೇರಿದೆ. ಇದಕ್ಕಿಂತಾ ಖುಷಿ ಬೇರೇನಿದೆ. ನಮ್ಮ ಅಭಿಮಾನಿ ಸಂಘ ಮುಂದೆಯೂ ಹೀಗೇ ಉತ್ತಮ ಕೆಲಸಗಳನ್ನು ಮಾಡಿ ಮಾದರಿಯಾಗಲಿ. ಟಕ್ಕರ್ ಚಿತ್ರತಂಡಕ್ಕೂ ಒಳಿತಾಗಲಿ ಎಂದಿದ್ದಾರೆ.

Takkar 2

TAGGED:ಕನ್ನಡಟಕ್ಕರ್ಡಿ-ಕಂಪೆನಿದತ್ತುದರ್ಶನ್ದಿನಕರ್ದಿನಕರ್ ತೂಗುದೀಪನಟ ಮನೋಜ್ ಕುಮಾರ್ರಾಮೇನಹಳ್ಳಿಶಾಲೆಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
12 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
19 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
26 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
36 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?