Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಕಾಣೆಯಾಗಿದ್ದಾರೆ: ಎಎಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಕಾಣೆಯಾಗಿದ್ದಾರೆ: ಎಎಪಿ

Bengaluru City

ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಕಾಣೆಯಾಗಿದ್ದಾರೆ: ಎಎಪಿ

Public TV
Last updated: October 27, 2021 3:01 pm
Public TV
Share
3 Min Read
dinesh gundurao 1
SHARE

ಬೆಂಗಳೂರು: ಗಾಂಧಿನಗರ ಕ್ಷೇತ್ರದ ರಸ್ತೆಗಳ ತುಂಬಾ ಗುಂಡಿಗಳು ಬಿದ್ದು ಜನರು ಪರದಾಡುತ್ತಿದ್ದರೆ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‍ರವರು ಸಮಸ್ಯೆ ಆಲಿಸಿ ಪರಿಹರಿಸುವ ಬದಲು ಕಾಣೆಯಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಟೀಕಿಸಿದ್ದಾರೆ.

AAP 1

ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜನರು ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್‍ರವರನ್ನು ನೆನಪಿಸಿಕೊಂಡು ದಿನೇಶ್ ಗುಂಡೂರಾವ್‍ರವರನ್ನು ಶಾಸಕ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಆದರೆ ಕ್ಷೇತ್ರದ ಮೇಲೆ ಅವರಿಗಿರುವ ಅಸಡ್ಡೆಯಿಂದಾಗಿ ಅವರ ತಂದೆಯ ಹೆಸರಿಗೆ ಧಕ್ಕೆಯಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸಿ ಹೊರರಾಜ್ಯಗಳಲ್ಲೇ ಠಿಕಾಣಿ ಹೂಡುತ್ತಿದ್ದಾರೆ. ಗಾಂಧಿನಗರದ ಶಾಸಕ ಸ್ಥಾನಕ್ಕಿಂತ ಗೋವಾ ಮತ್ತು ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿಯೇ ಅವರಿಗೆ ಮುಖ್ಯವಾಗಿದೆ. ಪರಿಣಾಮವಾಗಿ ಮತ ನೀಡಿದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿ ಜೊತೆಗೆ ಜಪಾನ್ ಯುವರಾಣಿ ಮದುವೆ-ಪದವಿ, ಗೌರವ ಹಿಂಪಡೆದ ಅರಮನೆ

MOHAN DASARI

ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯ ಜವಾಬ್ದಾರಿ ಹೊತ್ತಿರುವ ದಿನೇಶ್ ಗುಂಡೂರಾವ್‍ರವರನ್ನು ಸಾಮಾಜಿಕ ತಾಣಗಳಲ್ಲಿ ಪ್ರಶ್ನಿಸಿದರೆ, ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಚುನಾವಣೆ ವೇಳೆ ಆಶ್ವಾಸನೆಗಳನ್ನು ನೀಡಿ ಗೆದ್ದು, ಅಧಿಕಾರ ಸಿಕ್ಕ ನಂತರ ಅಸಹಾಯಕತೆ ವ್ಯಕ್ತಪಡಿಸುವ ಅವರಿಗೆ ನಾಚಿಕೆಯಾಗಬೇಕು. ಇದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವೇ ಹೊರತು ಬೇರೇನೂ ಅಲ್ಲ. ನೆರೆ ರಾಜ್ಯಗಳಿಗೆ ಪಲಾಯನ ಮಾಡಿರುವ ಅವರು ಇನ್ನಾದರೂ ವಾಪಸ್ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ. ಸಾಧ್ಯವಾಗದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಏನಾದರೂ ಮಾಡಿಕೊಳ್ಳಲಿ ಎಂದು ಮೋಹನ್ ದಾಸರಿಯವರು ದಿನೇಶ್ ಗುಂಡೂರಾವ್‍ರವರನ್ನು ತರಾಟೆಗೆ ತೆಗೆದುಕೊಂಡರು.

AAP

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಕಾರ್ಪೋರೇಟರ್‌ಗಳು ಹಾಗೂ ಕಾರ್ಯಕರ್ತರ ನಡವಳಿಕೆ ಮೀತಿಮೀರಿದ್ದು, ಕ್ಷೇತ್ರದ ಸಮಸ್ಯೆಗಳನ್ನು ಪ್ರಶ್ನಿಸುವ ಆಮ್ ಆದ್ಮಿ ಪಾರ್ಟಿ ಮುಖಂಡರಿಗೆ ಬೆದರಿಕೆ ಹಾಕುತ್ತಿದ್ದಾರೆ. ಅವರ ಗೂಂಡಾಗಿರಿ ಇದೇ ರೀತಿ ಮುಂದುವರಿದರೆ ‘ದಿನೇಶ್ ಗುಂಡೂರಾವ್ ಹಠಾವೋ’ ಆಂದೋಲನದ ಮೂಲಕ ಜನರ ಬಳಿ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

dinesh gundurao

ದಿನೇಶ್ ಗುಂಡೂರಾವ್‍ರವರು 1999ರಿಂದಲೂ ಕ್ಷೇತ್ರ ಶಾಸಕರಾಗಿದ್ದು, ರಾಜಕೀಯ ಹೊಂದಾಣಿಕೆಯಿಂದ ಕಳೆದ ಐದು ಚುನಾವಣೆ ಗೆದ್ದಿದ್ದಾರೆ. ಸ್ವಲ್ಪವಾದರೂ ಸುಸ್ಥಿತಿಯಲ್ಲಿದ್ದ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿರುವುದೇ ಅವರ 22 ವರ್ಷಗಳ ಸಾಧನೆ. ಶಾಲೆ, ಆಸ್ಪತ್ರೆ ಮುಂತಾದ ಮೂಲಸೌಕರ್ಯಗಳು ಸೂಕ್ತ ರೀತಿಯಲ್ಲಿ ಇಲ್ಲದ ಗಾಂಧಿನಗರ ಕ್ಷೇತ್ರವು ದೇಶದಲ್ಲೇ ಅತ್ಯಂತ ಹಿಂದುಳಿದ ಕ್ಷೇತ್ರವಾಗಿರಬಹುದು. ಕ್ಷೇತ್ರದ ಬಗ್ಗೆ ಹಾಗೂ ಮತದಾರರ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ತೋರುವ ಶಾಸಕರು ಬಹುಶಃ ಮತ್ತೊಬ್ಬರು ಇರಲಿಕ್ಕಿಲ್ಲ. ಸಮಸ್ತ ಗಾಂಧಿನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಇಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಬಲಗೊಳಿಸಲಾಗುತ್ತಿದೆ ಎಂದರು.

AAP USHA MOHAN

ಮಹಿಳಾ ಮುಖಂಡರಾದ ಉಷಾ ಮೋಹನ್‍ರವರು ಮಾತನಾಡಿ, ದಿನೇಶ್ ಗುಂಡೂರಾವ್‍ರವರ ಅಧಿಕಾರದಲ್ಲಿ ಅವರ ಪತ್ನಿ ಟಬು ರಾವ್‍ರವರ ಹಸ್ತಕ್ಷೇಪ ಅತಿಯಾಗಿದೆ. ಶಾಸಕರು ಕ್ಷೇತ್ರದಲ್ಲಿ ದೀರ್ಘಕಾಲ ಇಲ್ಲದಿರುವುದರ ಲಾಭವನ್ನು ಟಬು ರಾವ್ ಪಡೆಯುತ್ತಿದ್ದಾರೆ. ಜನಪ್ರತಿನಿಧಿಯಂತೆ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಇದು ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ದ್ರೋಹವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್‍ಡಿಕೆ

ಕಾನೂನು ಸಮರಕ್ಕೆ 57 ವಕೀಲರು
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ವಕೀಲರ ಘಟಕದ ಅಧ್ಯಕ್ಷ ಮಂಜುನಾಥ ಸ್ವಾಮಿಯವರು ಮಾತನಾಡಿ, ರಸ್ತೆಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಲು 57 ಅನುಭವಿ ವಕೀಲರ ತಂಡವನ್ನು ರಚಿಸಲಾಗಿದೆ. ಸದ್ಯದಲ್ಲೇ 150ಕ್ಕೂ ಹೆಚ್ಚು ವಕೀಲರು ನಮ್ಮೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. ಕರ್ತವ್ಯದಲ್ಲಿ ಲೋಪ ಎಸಗಿದ ಹಾಗೂ ಅಕ್ರಮದಲ್ಲಿ ಭಾಗಿಯಾದವರು ತಕ್ಕ ಬೆಲೆ ತೆರುವಂತೆ ಮಾಡುತ್ತೇವೆ ಎಂದು ಹೇಳಿದರು.

ಕ್ಷೇತ್ರದ ಮುಖಂಡರುಗಳಾದ ಪುಷ್ಪ ಕೇಶವ್, ಗೋಪಿನಾಥ್ ಹಾಗೂ ಪಕ್ಷದ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

TAGGED:aapbengalurucongressdinesh gundu raoMohan DasaripoliticsPublic TVಆಮ್ ಆದ್ಮಿ ಪಾರ್ಟಿದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮೋಹನ್ ದಾಸರಿರಾಜಕೀಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
38 seconds ago
Kerala Accident Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
3 minutes ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
5 minutes ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
12 minutes ago
Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
26 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
34 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?