JDSಗೆ ಬದ್ದತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ: ದಿನೇಶ್ ಗುಂಡೂರಾವ್

Public TV
1 Min Read
Dinesh Gundurao

ನವದೆಹಲಿ: ಜೆಡಿಎಸ್‍ಗೆ ಬದ್ದತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ, ಸ್ಥಿರ ಸರ್ಕಾರ ಬರುವುದು ಇಷ್ಟ ಇಲ್ಲ, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ ಎಂದು ಜೆಡಿಎಸ್ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

jds

ನವದೆಹಲಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿರುವುದು ಯಾಕೆ ಎಂದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಮತಗಳನ್ನು ಇಬ್ಬಾಗ ಮಾಡಿ ಬಿಜೆಪಿ ಸಹಾಯ ಮಾಡುವ ಉದ್ದೇಶ ಗುಟ್ಟಾಗಿ ಉಳಿದಿಲ್ಲ. ಜೆಡಿಎಸ್ ಉಪ ಚುನಾವಣೆಯನ್ನು ಗೆಲ್ಲುವ ದೃಷ್ಟಿಯಿಂದ ಸ್ವರ್ಧಿಸಿಲ್ಲ, ಬಿಜೆಪಿಗೆ ಸಹಾಯ ಮಾಡಲೆಂದು ಚುನಾವಣೆಗೆ ಸ್ಪರ್ಧಿಸಿದೆ ಎಂದು ದಿನೇಶ್ ಗುಂಡೂರಾವ್ ಕಿಡಿ ಕಾರಿದರು.

siddu 1

ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಟ್ರೋಲ್ ಮಾಡುತ್ತಿರುವ ಬಿಜೆಪಿ ವಿರುದ್ಧವೂ ಹರಿಹಾಯ್ದ ಅವರು, ಬಿಜೆಪಿ ಲಿಂಗಾಯತರನ್ನು ಓಟ್ ಬ್ಯಾಂಕ್ ಅಂದುಕೊಂಡಿದೆ. ಅದನ್ನು ಉಳಿಸಿಕೊಳ್ಳಲು ಏನ್ ಬೇಕಾದರು ಮಾಡಲು ಸಿದ್ದವಾಗಿದ್ದಾರೆ ಅದಕ್ಕೆ ಬಿಜೆಪಿ ಹೀಗೆ ಮಾಡುತ್ತಿದೆ ಎಂದರು. ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಮಾವ ವಿಧಿವಶ

Dinesh gundu rao 643x400 1

ಸಿದ್ದರಾಮಯ್ಯ ಅವರು ಬಸವಣ್ಣನವರ ಮೇಲೆ ಅಪಾರ ಭಕ್ತಿ ಹೊಂದಿದ್ದು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಕಡ್ಡಾಯ ಮಾಡಿದ್ದರು. ಅಲ್ಲದೇ ಅನುಭನ ಮಂಟಪ ನಿರ್ಮಾಣ ಮಾಡಲು ನಿರ್ಧಾರ ಮಾಡಿದರು ಆದರೆ ಬಿಜೆಪಿ ರಾಜಕೀಯ ಲಾಭಕ್ಕೆ ಹೀಗೆ ಹೇಳಿಕೆ ನೀಡುತ್ತಿದೆ ಅಷ್ಟೇ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಉತ್ತಮ ವಾತಾವರಣ ಇದೆ. ಜನರು ಬಿಜೆಪಿ ಆಡಳಿತವನ್ನು ನೋಡಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‍ಗೆ ಮತ ನೀಡಲಿದ್ದು, ಕಾಂಗ್ರೆಸ್‍ಗೆ ಉತ್ತಮ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕ್ ಗೆಲುವನ್ನು ಸಂಭ್ರಮಿಸಿದವರ DNA ಭಾರತದಲ್ಲ: ಅನಿಲ್ ವಿಜ್

Share This Article
Leave a Comment

Leave a Reply

Your email address will not be published. Required fields are marked *