Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Bengaluru City

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

Public TV
Last updated: August 6, 2025 7:13 pm
Public TV
Share
3 Min Read
Dinesh Gundurao 1
SHARE

– ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾಗೆ ಪತ್ರದ ಮುಖೇನ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು (Janaushadhi Center) ಮುಚ್ಚಿಸಿಲ್ಲ. ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಸ್ಪಷ್ಟಪಡಿಸಿದ್ದಾರೆ.

ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಮಾತ್ರ ಜನೌಷಧಿ ಕೇಂದ್ರಗಳನ್ನ ನಿರ್ಬಂಧಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಔಷಧಿಗಳನ್ನು ನಿರಾಕರಿಸುವ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿಯೇ ಕರ್ನಾಟಕ ಜನೌಷಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯದಲ್ಲಿ 1,417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Janaushadhi

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ಮಾಡುವ ನಿಮ್ಮ ಕಾಳಜಿಯನ್ನು ನಾನು ಶ್ಲಾಘಿಸುತ್ತೇನೆ.‌ ಕರ್ನಾಟಕ ಸರ್ಕಾರವು ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಗಳ ಪಟ್ಟಿಯ (EML) ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ ಎಂಬುದನ್ನು ನಾನು ಗೌರವಪೂರ್ವಕವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಸರಳಗೊಳಿಸಲು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಸಿಗುವ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಯನ್ನು ತಪ್ಪಿಸಲು, ರಾಜ್ಯ ಸರ್ಕಾರವು ಸರ್ಕಾರಿ ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸುವ ಔಷಧಿಗಳಿಗೆ ಮಾತ್ರ ಪ್ರಿಸ್ಕ್ರಿಪ್ಷನ್‌ಗಳನ್ನು ಸೀಮಿತಗೊಳಿಸುವಂತೆ ನಿರ್ದೇಶಿಸಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳನ್ನು ಔಷಧಿಗಳನ್ನು ಖರೀದಿಸಲು ವಾಣಿಜ್ಯ ಮಳಿಗೆಗಳಿಗೆ ಕಳುಹಿಸುವ ಮತ್ತು ಅವರಿಗೆ ಉಚಿತವಾಗಿ ಪೂರೈಸಲಾಗುವ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಔಷಧಾಲಯಗಳಿಂದ ಔಷಧಿಗಳನ್ನು ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ಕಡಿಮೆ ಮಾಡುವುದು ಸರ್ಕಾರದ ನಿರ್ಧಾರವಾಗಿದೆ. ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯುವ ಬಡ ಮತ್ತು ಹಿಂದುಳಿದ ರೋಗಿಗಳಿಗೆ ಅನುಕೂಲಕರವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

ಈ ಆದೇಶವು ಸರ್ಕಾರಿ ಆಸ್ಪತ್ರೆಗಳ ಆವರಣಗಳ ಹೊರಗೆ ಜನೌಷಧಿ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸುವುದಿಲ್ಲ. ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ 184 ಜನೌಷಧಿ ಕೇಂದ್ರಗಳಿವೆ. ಉಳಿದವು ಸರ್ಕಾರಿ ಆಸ್ಪತ್ರೆಗಳ ಆವರಣದ ಹೊರಗೆ ಕಾರ್ಯನಿರ್ವಹಿಸುತ್ತಿವೆ. ಮತ್ತು ನಾಗರಿಕರು ತಮ್ಮ ಆಯ್ಕೆಯಂತೆ ಖಾಸಗಿ ವಲಯದಲ್ಲಿ ಅವುಗಳನ್ನು ಪ್ರವೇಶಿಸಲು ಸ್ವತಂತ್ರರಾಗಿದ್ದಾರೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ಮೂಲಕ ಎಲ್ಲಾ ಅಗತ್ಯ ಔಷಧಿಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನಿಯಮಿತವಾಗಿ ಪೂರೈಸಲಾಗುತ್ತಿದೆ. ಇದರ ಜೊತೆಗೆ, ಆಸ್ಪತ್ರೆಗಳಿಗೆ ಸಾಕಷ್ಟು ಅನುದಾನವನ್ನು ಒದಗಿಸಲಾಗಿದ್ದು, ಯಾವುದೇ ಔಷಧಿಗಳ ಕೊರತೆ ಉಂಟಾದಲ್ಲಿ ಆ ಅನುದಾನವನ್ನು ಸ್ಥಳೀಯವಾಗಿ ಔಷಧಿಗಳನ್ನು ಖರೀದಿಸಲು ಬಳಸಿಕೊಳ್ಳುವಂತೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಸರ್ಕಾರಿ ಸೌಲಭ್ಯಗಳಿಗೆ ಭೇಟಿ ನೀಡುವ ರೋಗಿಗಳಿಗೆ ಅಗತ್ಯ ಔಷಧಿಗಳು ಸಂಪೂರ್ಣವಾಗಿ ಉಚಿತವಾಗಿ ಲಭ್ಯವಾಗುವಂತೆ ಮಾಡುವುದು ಈ ಪ್ರಯತ್ನದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

JP Nadda 1

ಗೌರವಾನ್ವಿತ ದೆಹಲಿ ಹೈಕೋರ್ಟ್‌ನ W.P.C 3903/2017 ರಲ್ಲಿ ಉಲ್ಲೇಖಿಸಲಾದ ನಿರ್ದೇಶನಗಳು GNCTD ಮತ್ತು AIIMS ನವದೆಹಲಿಗೆ ಸಂಬಂಧಿಸಿವೆ ಎಂದು ಸಹ ಗಮನಿಸಲಾಗಿದೆ. ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಯೋಜನೆಯ ಪ್ರಕಾರ, ಜನೌಷಧಿ ಔಷಧಿಗಳ ಬೆಲೆಗಳು ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬ್ರಾಂಡ್ ಔಷಧಿಗಳ ಬೆಲೆಗಳಿಗಿಂತ 50%-80% ಕಡಿಮೆ ಇವೆ. ಈ ಯೋಜನೆಯನ್ನು ಸೊಸೈಟೀಸ್ ರಿಜಿಸ್ಟ್ರೇಷನ್ ಆಕ್ಟ್ ಅಡಿಯಲ್ಲಿ ನೋಂದಾಯಿಸಲಾದ ಸಂಸ್ಥೆಯಾದ ಫಾರ್ಮಾ ಮತ್ತು ಮೆಡಿಕಲ್ ಬ್ಯೂರೋ ಆಫ್ ಇಂಡಿಯಾ (PMBI) (ಬ್ಯೂರೋ ಆಫ್ ಫಾರ್ಮಾ PSUs ಆಫ್ ಇಂಡಿಯಾ (BPPI)) ಕಾರ್ಯಗತಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ

ಈ ಔಷಧಿಗಳನ್ನು ಜನೌಷಧಿ ಕೇಂದ್ರಗಳಿಗೆ ಪೂರೈಸುವ ದರದಲ್ಲಿಯೇ ರಾಜ್ಯ ಆರೋಗ್ಯ ಇಲಾಖೆಗೆ ಪೂರೈಸುವಂತೆ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ. ಇದು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಪೂರೈಕೆಗೆ ಬಹಳಷ್ಟು ಸಹಾಯ ಮಾಡುತ್ತದೆ. ಕರ್ನಾಟಕದ ಎಲ್ಲಾ ನಾಗರಿಕರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಮಾಡಲು ನಾವು ಬದ್ಧರಾಗಿದ್ದೇವೆ. ಸಾರ್ವಜನಿಕ ವ್ಯವಸ್ಥೆಯಲ್ಲಿ ನಮ್ಮ ಪೂರೈಕೆ ಸರಪಳಿ, ಲಭ್ಯತೆ ಮತ್ತು ಔಷಧಿಗಳ ವೈಜ್ಞಾನಿಕ ಬಳಕೆಯನ್ನು ನಿರಂತರವಾಗಿ ಬಲಪಡಿಸುತ್ತಿದ್ದೇವೆ. ಸಾರ್ವಜನಿಕ ಆರೋಗ್ಯದ ಕುರಿತಾದ ನಿಮ್ಮ ಕಾಳಜಿಯನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ. ಜನರ ಒಳಿತಿಗಾಗಿ ನಮ್ಮ ಸಮಾನ ಬದ್ಧತೆಯನ್ನು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದಿದ್ದಾರೆ.

TAGGED:bengalurudinesh gundu raoJ P NaddaJanaushadhiಜನೌಷಧಿ ಕೇಂದ್ರಜೆ.ಪಿ.ನಡ್ಡಾದಿನೇಶ್ ಗುಂಡೂರಾವ್ಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
18 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
30 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
1 hour ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?