ಬೆಂಗಳೂರು: ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣದಲ್ಲಿ ಕೈ ಹಾಗೂ ಕಮಲ ನಾಯಕರ ಜಟಾಪಟಿ ಜೋರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಮತ್ತೊಂದು ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟಿದ್ದಾರೆ.
ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India… pic.twitter.com/mIc4GVEEcD
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 6, 2025
ದಿನೇಶ್ ಗುಂಡೂರಾವ್ ಅವರ ತಮ್ಮ ಎಕ್ಸ್ ಖಾತೆಯಲ್ಲಿ ದಾಖಲೆ ಬಿಡುಗಡೆ ಮಾಡಿ, ಸುಹಾಸ್ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ ಎಂದು ಬಿಜೆಪಿ ನಾಯಕರಿಗೆ(BJP Leaders) ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಹೆಡ್ಕಾನ್ಸ್ಟೇಬಲ್ ಭಾಗಿ?
ಟ್ವೀಟ್ನಲ್ಲೇನಿದೆ?
ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.
ಸುಹಾಸ್ ಶೆಟ್ಟಿ ವಿರುದ್ಧ ರೌಡಿಶೀಟರ್ ಓಪನ್ ಆಗಿದ್ದು 2020ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ(Basavaraj Bommai). ಇಂದು ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು? ಇದನ್ನೂ ಓದಿ: ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ. ಇದನ್ನೂ ಓದಿ: ಬೇಬಿ ಬಂಪ್ನೊಂದಿಗೆ ‘ಮೆಟ್ ಗಾಲಾ’ದಲ್ಲಿ ಹೆಜ್ಜೆ ಹಾಕಿದ ಕಿಯಾರಾ ಅಡ್ವಾಣಿ
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆ ಮುನ್ಸೂಚನೆ
ದಕ್ಷಿಣ ಕನ್ನಡದ(DakshinaKannada) ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ.