Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
Last updated: May 22, 2025 10:37 pm
Public TV
Share
2 Min Read
Dinesh Gundurao 1
SHARE

– ರಾಜ್ಯದಲ್ಲಿ 1,400 ಜನೌಷಧಿ ಕೇಂದ್ರಗಳಲ್ಲಿ ಕೇವಲ 180 ಸರ್ಕಾರಿ ಆಸ್ಪತ್ರೆಗಳಿವೆ
– ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧಿ ಮಾರಾಟವಾಗ್ತಿದೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospitals) ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಜನೌಷಧಿಯು ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಹೇಳಿದರು.

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ.

ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ.… pic.twitter.com/91j5WNApSO

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 22, 2025

ಬೆಂಗಳೂರಿನಲ್ಲಿ(Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1,400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳು ಏಕೆ ಬೇಕು ಎಂದರು. ಇದನ್ನೂ ಓದಿ: ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ(BJP) ನಾಯಕರು ರಾಜಕೀಯ ಬೆರೆಸುವುದು ಸರಿಯಲ್ಲ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನ ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ. ಹಲವು ಜನೌಷಧಿ ಕೇಂದ್ರಗಳ ಒಪ್ಪಂದಗಳು ನವೀಕರಣವಾಗಿಲ್ಲ. ಇನ್ನು ಕೆಲವು ಕೇಂದ್ರಗಳು ಇತ್ತೀಚೆಗೆ ಆರಂಭವಾಗಿದ್ದು, ಅವರು ಸಾಕಷ್ಟು ಬಂಡವಾಳ ಹೂಡಿರುತ್ತಾರೆ. ಅವರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಅವರ ಒಪ್ಪಂದ ಮುಗಿದ ಬಳಿಕವೇ ಸ್ಥಗಿತಗೊಳಿಸುವ ಕುರಿತು ಆಲೋಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

ಜನೌಷಧಿಯು ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನೌಷಧಿ ಕೇಂದ್ರಗಳಲ್ಲಿ ಜನರಿಕ್ ಮೆಡಿಸಿನ್ ಮಾತ್ರ ಮಾರಾಟ ಮಾಡಬೇಕು. ಆದರೆ ಹಲವು ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಮೆಡಿಸಿನ್‌ಗಳನ್ನ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಔಷಧ ನಿಯಂತ್ರಣ ಮಂಡಳಿಯವರು ಪರಿಶೀಲನೆ ನಡೆಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳ ಔಷಧ ಕೇಂದ್ರಗಳಲ್ಲಿ ಔಷಧಿಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನ ಬಿಪಿಪಿಐನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಖರೀದಿಗೆ ಅಗತ್ಯವಿರುವ ಹಣಕಾಸಿನ ಲಭ್ಯತೆಯೂ ಆಸ್ಪತ್ರೆಗಳ ಬಳಿ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನ ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನ ತರಿಸುವ ಪದ್ದತಿ ನಿಲ್ಲಬೇಕು ಎಂದು ಹೇಳಿದರು.

TAGGED:bengalurudinesh gundu raoGovernment HospitalsJanushadhi CentersMedicinesಔಷಧಿಗಳುಜನೌಷಧಿ ಕೇಂದ್ರಗಳುದಿನೇಶ್ ಗುಂಡೂರಾವ್ಬೆಂಗಳೂರುಸರ್ಕಾರಿ ಆಸ್ಪತ್ರೆಗಳು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
10 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
57 minutes ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
59 minutes ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
2 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?