Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

Public TV
Last updated: December 4, 2024 9:11 pm
Public TV
Share
3 Min Read
Dinesh Gundurao
SHARE

ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬೆಂಗಳೂರಿನ (Bengaluru) ವಿಕಾಸ ಸೌಧದಲ್ಲಿಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

Ballari 2

ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್‌ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್‌ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್ ಗಳ ವಿಚಾರವಾಗಿ ಕಂಪನಿಯವರನ್ನ ಪ್ರಾಸಿಕ್ಯೂಷನ್‌ಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Ballari 1

ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್‌ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ದಿನೇಶ್‌ ಗುಂಡೂರಾವ್ ವಜಾಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಭ ನೀತಿ ಏಕೆ? ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ? ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

ಐವಿ ರಿಂಗರ್ ಲ್ಯಾಕ್ಟೇಟ್‌ನ 192 ಬ್ಯಾಚ್‌ಗಳಲ್ಲಿ ಟೆಸ್ಟಿಂಗ್‌ಗೆ ಬಾಕಿ ಇರುವ ಬ್ಯಾಚ್‌ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಲ್ಯಾಬ್‌ನಲ್ಲಿ 192 ಬ್ಯಾಚ್‌ಗಳು ಐವಿ ದ್ರಾವಣ ಪಾಸಿಟಿವ್ ರಿಪೋರ್ಟ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ವೈದ್ಯರ ನಿರ್ಲಕ್ಷ್ಯದಿಂದಲ್ಲ – ದಿನೇಶ್ ಗುಂಡೂರಾವ್

ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ ವರದಿಯಲ್ಲಿ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿಯಿದೆ. ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್ ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಲ್ಯಾಬ್‌ನವರು 192 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ? ಈ ಬಗ್ಗೆ ಪರಿಶೀಲನೆ ನಡೆಸಿ. ಲ್ಯಾಬ್‌ನವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

TAGGED:BallariBallari HospitalBIMSCaesareandinesh gundu raodoctorsglucoseIntravenousPregnanatಐವಿ ದ್ರಾವಣದಿನೇಶ್ ಗುಂಡೂರಾವ್ಬಳ್ಳಾರಿಬಾಣಂತಿಯರ ಸಾವು
Share This Article
Facebook Whatsapp Whatsapp Telegram

You Might Also Like

Tejasvi Surya
Chikkamagaluru

ಕಾಗಕ್ಕ, ಗುಬ್ಬಕ್ಕ ಕತೆ ಬಿಟ್ಟು ಸೀರಿಯಸ್ ರಾಜಕೀಯ ಮಾಡ್ರಿ – ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

Public TV
By Public TV
7 minutes ago
Davanagere Suicide
Bellary

ಪ್ರಿಯತಮೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ ಆರೋಪ – ಹೆದರಿ ಯುವಕ ಆತ್ಮಹತ್ಯೆ

Public TV
By Public TV
9 minutes ago
CRIME
Crime

ಮಂಡ್ಯ | ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಮಗುವಿನ ಮೇಲೆ ರೇಪ್

Public TV
By Public TV
59 minutes ago
Sivaganga custodial torture case Five policemen arrested victims body bore over 30 injury marks
Crime

ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Public TV
By Public TV
1 hour ago
Calcutta IIM
Crime

ಕೋಲ್ಕತ್ತಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್; ನನ್ನ ಮಗಳ ಮೇಲೆ ಅತ್ಯಾಚಾರ ಆಗಿಲ್ಲ – ಸಂತ್ರಸ್ತೆ ಅಪ್ಪನ ಅಚ್ಚರಿ ಹೇಳಿಕೆ!

Public TV
By Public TV
2 hours ago
FDA Koppal
Koppal

ಕೊಪ್ಪಳ; ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎಫ್‌ಡಿಎ ಚಿಕಿತ್ಸೆ ಫಲಿಸದೇ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?