ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು

Public TV
2 Min Read
FotoJet 4 21

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಧಾನಿ ನರೇಂದ್ರ ಮೋದಿ ಆಡಿದ್ದ ಮಾತುಗಳಿಗೆ ತಮ್ಮದೇ ಆದ ರೀತಿಯಲ್ಲಿ ಟಾಂಗ್ ನೀಡಿದ್ದರು. ಸಿನಿಮಾದವರನ್ನು ಟೀಕಿಸಬೇಡಿ ಎಂದು ಮೋದಿ ತಮ್ಮ ಕಾರ್ಯಕರ್ತರಿಗೆ ತಿಳಿಸಿದ್ದರು. ಈ ಮಾತುಗಳನ್ನು ಪ್ರಧಾನಿ ಅವರು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು ಎಂದು ಟಾಂಗ್ ಕೊಟ್ಟಿದ್ದರು. ಅನುರಾಗ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ‘ಆಡಿಯನ್ಸ್ ಈಗ ಮಾಬ್ ಕ್ರಿಯೇಟ್ ಆಗಿದೆ’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

FotoJet 54

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ ಎನ್ನಲಾದ ಮಾತಿಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ತಿರುಗೇಟು ನೀಡಿದ್ದಾರೆ. ಚುನಾವಣೆ ವೇಳೆಗಾದರೂ ಅವರು ಮಾತನಾಡಿದ್ದಾರಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿಗಳು ಪದೇ ಪದೇ ಈ ಮಾತುಗಳನ್ನು ಹೇಳುವ ಮೂಲಕ ಕಾರ್ಯಕರ್ತರನ್ನು ಸದಾ ಜಾಗೃತರಾಗಿ ಇಡಬೇಕು ಎಂದೂ ಅವರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

vivek agnihotri

ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಬಗ್ಗೆ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಪರೀತ ಎನ್ನುವಂತೆ ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಪಠಾಣ್, ಬ್ರಹ್ಮಾಸ್ತ್ರ ಸಿನಿಮಾಗಳಿಗೆ ಬಾಯ್ಕಾಟ್ ಅಭಿಯಾನ ಮಾಡುವ ಮೂಲಕ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಹಲವು ದಿನಗಳಿಂದ ಈ ರೀತಿಯ ಪ್ರತಿಭಟನೆಗಳು ಸಿನಿಮಾ ರಂಗದಲ್ಲಿ ಕಾಮನ್ ಎನ್ನುವಂತಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರು, ಯಾವುದೇ ಸಿನಿಮಾದ ಸಹವಾಸಕ್ಕೆ ಹೋಗದೇ, ಅದರ ಬಗ್ಗೆ ಮಾತನಾಡದೇ ದೂರ ಉಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

anurag kashyap 2

ಈ ಸಲಹೆಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅನುರಾಗ್ ಕಶ್ಯಪ್, ‘ಮೋದಿ ಅವರು ಈ ಮಾತುಗಳನ್ನು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು. ಈಗ ಎಲ್ಲವೂ ಕೈ ಮೀರಿ ಹೋಗಿದೆ. ಅವರ ಮಾತುಗಳನ್ನು ಯಾರೂ ಕೇಳುವುದಿಲ್ಲ ಎನ್ನುವಂತಹ ವಾತಾವರಣ ಉಂಟಾಗಿದೆ. ಅವರ ಹೇಳಿಕೆ ಯಾವುದೇ ಪರಿಣಾಮವನ್ನು ಉಂಟು ಮಾಡದು’ ಎಂದು ಅನುರಾಗ್ ಮಾತನಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *