Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಾರಾಂಶ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ನಿರ್ದೇಶಕ ಹೇಮಂತ್ ರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸಾರಾಂಶ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ನಿರ್ದೇಶಕ ಹೇಮಂತ್ ರಾವ್

Cinema

‘ಸಾರಾಂಶ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ನಿರ್ದೇಶಕ ಹೇಮಂತ್ ರಾವ್

Public TV
Last updated: February 1, 2024 8:46 am
Public TV
Share
2 Min Read
Saramsha 2
SHARE

`ಸಾರಾಂಶ’ (Saramsha) ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ (Hemanth Rao) ಸಾರಾಂಶ ಟ್ರೈಲರ್ (Trailer) ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ.

Saramsha 4

`ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ಚಿತ್ರತಂಡ ಹಂತ ಹಂತವಾಗಿ ಜಾಹೀರು ಮಾಡಿತ್ತು. ಇದೀಗ ಒಂದಿಡೀ ಸಿನಿಮಾದ ಆಂತರ್ಯವನ್ನು ತೆರೆದಿಡುವಂಥಾ ಟ್ರೈಲರ್ ಲಾಂಚ್ ಆಗಿದೆ. ವರ್ಷಾಂತರಗಳ ಹಿಂದೆ ಬಿಡುಗಡೆಗೊಂಡು, ಇಂದಿಗೂ ಆ ಪ್ರಭೆ ಉಳಿಸಿಕೊಂಡಿರುವ ಲೂಸಿಯಾ ಚಿತ್ರತಂಡದ ಸದಸ್ಯರು ಈ ಪತ್ರಿಕಾಗೋಷ್ಠಿಯ ಪ್ರಮುಖ ಆಕರ್ಷಣೆಯಾಗಿದ್ದರು. ಶ್ರುತಿ ಹರಿಹರನ್, ಹೇಮಂತ್ ರಾವ್ ಮಾತ್ರವಲ್ಲದೇ ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ (Surya Vasistha) ಕೂಡಾ ಲೂಸಿಯಾ ಭಾಗವಾಗಿದ್ದವರೆ. ಇವರೆಲ್ಲರ ಸಮ್ಮುಖದಲ್ಲಿ ಸಾರಾಂಶ ಟ್ರೈಲರ್ ಬಿಡುಗಡೆಗೊಂಡಿದೆ.

Saramsha 1

ಈ ಪತ್ರಿಕಾ ಗೋಷ್ಠಿಯಲ್ಲಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಮುಂತಾದವರು ಹಾಜರಿದ್ದರು. ಅಂದಹಾಗೆ, ಇದು ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥಾ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ.

Saramsha 3

ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ಅದರಲ್ಲೊಂದು ಪಾತ್ರವನ್ನು ಶ್ವೇತಾ ಗುಪ್ತ ನಿರ್ವಹಿಸಿದ್ದಾರೆ. ಕನ್ನಡತನದ ಬಗ್ಗೆ ಅತೀವ ಪ್ರೀತಿ ಆಸಕ್ತಿ ಇಟ್ಟುಕೊಂಡಿರೋ ಕನ್ನಡೇತರ ಬುಕ್ ಪಬ್ಲಿಷರ್ ಪಾತ್ರವಿದೆ. ಆ ಪಾತ್ರದ ಬಗ್ಗೆ ನಿರ್ದೇಶಕರು ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಷ್ಟು ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಸದರಿ ಟ್ರೈಲರ್‍ನಲ್ಲಿ ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ.

 

ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಅವರ ಛಾಯಾಗ್ರಹಣ ಕೂಡಾ ಸಾರಾಂಶದ ಶಕ್ತಿಯಂತಿದೆ ಎಂಬುದು ಚಿತ್ರತಂಡದ ಭರವಸೆ.

TAGGED:Hemanth RaoSaramshaShruti HariharanSurya Vasisthatrailerಟ್ರೈಲರ್ಶ್ರುತಿ ಹರಿಹರನ್ಸಾರಾಂಶಸೂರ್ಯ ವಸಿಷ್ಠಹೇಮಂತ್ ರಾವ್
Share This Article
Facebook Whatsapp Whatsapp Telegram

Cinema news

Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
38 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
1 hour ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?